Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾರಂಗಿ ವಿತರಣಾ ನಾಲೆ ಅಭಿವೃದ್ಧಿಗೆ 116...

ಹಾರಂಗಿ ವಿತರಣಾ ನಾಲೆ ಅಭಿವೃದ್ಧಿಗೆ 116 ಕೋಟಿ ರೂ.: ಸಚಿವ ಎ. ಮಂಜು

ವಾರ್ತಾಭಾರತಿವಾರ್ತಾಭಾರತಿ26 May 2016 10:11 PM IST
share
ಹಾರಂಗಿ ವಿತರಣಾ ನಾಲೆ ಅಭಿವೃದ್ಧಿಗೆ 116 ಕೋಟಿ ರೂ.: ಸಚಿವ ಎ. ಮಂಜು

ಕುಶಾಲನಗರ, ಮೇ 26: ಹಾರಂಗಿ ಯೋಜನಾ ವೃತ್ತದ ಪಿರಿಯಾಪಟ್ಟಣ ಹಾಗೂ ಅರಕಲಗೂಡು ತಾಲೂಕು ವ್ಯಾಪ್ತಿಯ ಹಾರಂಗಿ ವಿತರಣಾ ನಾಲೆಗಳನ್ನು 116 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಎ. ಮಂಜು ತಿಳಿಸಿದ್ದಾರೆ.

ಹಾರಂಗಿ ಪ್ರವಾಸಿ ಮಂದಿರದಲ್ಲಿ ನಡೆದ ಹಾರಂಗಿ ನಾಲಾ ವಿಭಾಗದ ಉಪವಿಭಾಗಗಳ ಪ್ರಗತಿ ಪರಿಶೀಲನೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರದಿಂದ ವಿವಿಧ ಕಾಮಗಾರಿಗಳಿಗೆ ಬಿಡುಗಡೆಯಾದ ಅನುದಾನ ಸಮರ್ಪಕ ಬಳಕೆ ಕುರಿತು ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನೆ ಸಭೆ ಸಂದರ್ಭ ಕಂಡುಬಂದ ಅಧಿಕಾರಿಗಳ ನ್ಯೂನತೆಗಳ ಬಗ್ಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದರು.

ಕೊಡಗು ಜಿಲ್ಲೆಗೆ ಹೆಚ್ಚುವರಿಯಾಗಿ ಪಶು ವೈದ್ಯ ಕೀಯ ಆಸ್ಪತ್ರೆಗೆ ಬೇಡಿಕೆ ಕೇಳಿ ಬಂದಿದೆ. ಗುಡ್ಡೆಹೊಸೂರು ಭಾಗದಲ್ಲಿ ನೂತನ ಪಶುವೈದ್ಯಕೀಯ ಆಸ್ಪತ್ರೆ ಆರಂಭಿಸುವ ಕುರಿತಾಗಿ ಚಿಂತಿಸಲಾಗುವುದು ಎಂದರು. ಈ ಪ್ರದೇಶಗಳಲ್ಲಿ ಹೆಚ್ಚಿನ ರಾಸುಗಳು ಇರುವ ಕಾರಣ ಇಲ್ಲಿಗೆ ಆದ್ಯತೆ ಕಲ್ಪಿಸಲಾಗಿದೆ. ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಒಕ್ಕೂಟಗಳಿಂದ ಪ್ರತಿದಿನ 7 ಲಕ್ಷ ಲೀ. ಹಾಲು ಸಂಗ್ರಹವಾಗುತ್ತಿದೆ. ಕೊಡಗಿನಲ್ಲಿ 12 ರಿಂದ 15 ಸಾವಿರ ಲೀ. ಸಂಗ್ರಹವಾಗುತ್ತಿದೆ. ಪ್ರತಿ ದಿನ 30 ಸಾವಿರ ಲೀ. ಬಳಕೆಯಾಗುತ್ತಿದೆ ಎಂದು ಸಚಿವರು ತಿಳಿಸಿದರು. ಇಲಾಖೆ ವತಿಯಿಂದ ಪ್ರತೀ ಲೀ. ಹಾಲಿಗೆ ರೈತರಿಗೆ 4 ರೂ. ಪ್ರೋತ್ಸಾಹ ಧನ ವಿತರಿಸಲಾಗುತ್ತಿದೆ. ಹಾಲನ್ನು ನೇರವಾಗಿ ಸಂಘಕ್ಕೆ ನೀಡುವ ರೈತನ ಖಾತೆಗೆ ಪ್ರೋತ್ಸಾಹ ಧನವನ್ನು ಆರ್‌ಟಿಜಿಎಸ್ ಮೂಲಕ ಅವರ ಖಾತೆಗೆ ವಿತರಿಸುವ ಕ್ರಮಕ್ಕೆ ಇಲಾಖೆ ಚಿಂತನೆ ನಡೆಸಿದೆ ಎಂದು ಅವರು ತಿಳಿಸಿದರು.

 ಪಶುಭಾಗ್ಯ ಯೋಜನೆಯಡಿ ರೈತರಿಗೆ ರಾಸುಗಳನ್ನು ವಿತರಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಮಾತ್ರ ವಿತರಿಸಲು ಹೆಚ್ಚಿನ ಆದ್ಯತೆ ಕಲ್ಪಿಸಲಾಗುವುದು. ರಾಸುಗಳಿಗೆ ಸಂಬಂಧಿಸಿದಂತೆ ಪ್ರತೀ ಜಿಲ್ಲೆಯಲ್ಲಿ ಪಾಲಿಕ್ಲಿನಿಕ್ ಸೇವೆ ಆರಂಭಿಸಲಾಗಿದೆ. ರಾಸುಗಳ ಸಂಖ್ಯೆ ಅಧಿಕವಾಗಿರುವ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ಈ ಸೇವೆ ಆರಂಭಿಸಲಾಗುವುದು ಎಂದರು.

 ಕುಶಾಲನಗರ ಸಮೀಪದ ಮದಲಾಪುರ ಗ್ರಾಮದಲ್ಲಿ ಮಲೆನಾಡು ಗಿಡ್ಡ ಎಂಬ ರಾಸು ತಳಿಯ ಸಂವರ್ಧನೆ ಕೇಂದ್ರ ಆರಂಭಿಸಲು 5 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ ಎಂದು ಸಚಿವ ಮಂಜು ಮಾಹಿತಿ ನೀಡಿದರು.

ಹಾಲು ಮತ್ತು ಕೃಷಿಗೆ ಸಂಬಂಧಿಸಿದಂತೆ ಸರಕಾರ ಈ ಸಾಲಿನಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಸ್ವಾವಲಂಬಿಗಳಾಗುವುದರೊಂದಿಗೆ ಆದಾಯ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಆಡು, ಕುರಿ, ಕೋಳಿ ಸಾಕಣೆಗೆ ಮಹಿಳೆಯರು ಮುಂದಾಗಬೇಕು. ಆಡಿನ ಹಾಲು ಅತ್ಯಂತ ಆರೋಗ್ಯಕಾರಿಯಾಗಿರುವ ಕಾರಣ ಅದರ ಮಾರಾಟಕ್ಕೆ ಇಲಾಖೆ ಮೂಲಕ ಪ್ರೋತ್ಸಾಹ ನೀಡಲು ಚಿಂತನೆ ನಡೆಸಲಾಗಿದೆ ಎಂದರು.

 ಸಭೆಯಲ್ಲಿ ಕರಕುಶಲ ನಿಗಮ ಮಂಡಳಿ ಅಧ್ಯಕ್ಷ ಶಾಂತೆಯಂಡ ವೀಣಾ ಅಚ್ಚಯ್ಯ, ಹಾರಂಗಿ ಅಣೆಕಟ್ಟೆ ವಿಭಾಗದ ಕಾರ್ಯಪಾಲಕ ಅಭಿಯಂತರ ರಂಗಸ್ವಾಮಿ, ಸಹಾಯಕ ಅಭಿಯಂತರ ಧರ್ಮರಾಜು, ಕೊಣನೂರು ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಕುಮಾರ್, ಜಯರಾಂ, ಗುಣಮಟ್ಟ ಪರಿವೀಕ್ಷಕ ಸತ್ಯನಾರಾಯಣ, ಹಾರಂಗಿ ನೀರು ಬಳಕೆದಾರರ ಮಹಾಮಂಡಳ ಅಧ್ಯಕ್ಷ ಚೌಡೇಗೌಡ, ಅಧಿಕಾರಿಗಳಾದ ವರಮಹಾಲಕ್ಷ್ಮೀ, ಕಿರಣ್, ಪಶುಸಂಗೋಪನಾ ಇಲಾಖೆಯ ಆಯುಕ್ತ ಶೇಖರ್, ಮೈಸೂರು ವಿಭಾಗದ ಜಂಟಿ ನಿರ್ದೇಶಕ ರಾಮಚಂದ್ರ, ಕೊಡಗು ಜಿಲ್ಲಾ ಉಪನಿರ್ದೇಶಕ ಡಾ.ನಾಗರಾಜ್, ಸೋಮವಾರಪೇಟೆ ವಿಭಾಗದ ಸಹಾಯಕ ನಿರ್ದೇಶಕ ಡಾ.ಚೆಟ್ಟಿಯಪ್ಪ, ವೀರಾಜಪೇಟೆ ವಿಭಾಗದ ಡಾ.ಮೋಟಯ್ಯ ಸೇರಿದಂತೆ ಇಲಾಖೆ ಅಧಿಕಾರಿಗಳುಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X