Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಾರದೊಳಗೆ ಅತಿಕ್ರಮಣ ತೆರವುಗೊಳಿಸದಿದ್ದರೆ...

ವಾರದೊಳಗೆ ಅತಿಕ್ರಮಣ ತೆರವುಗೊಳಿಸದಿದ್ದರೆ ಕ್ರಿಮಿನಲ್ ಕೇಸ್:ಎಸಿ ಎಚ್ಚರಿಕೆ

ಕೋಡಿಂಬಾಳದ ಪನ್ಯ ಗುರಿಯಡ್ಕ ಶಾಲಾ ಜಾಗ ಅತಿಕ್ರಮಣ

ವಾರ್ತಾಭಾರತಿವಾರ್ತಾಭಾರತಿ26 May 2016 11:16 PM IST
share

ಕಡಬ, ಮೇ 26: ಕೋಡಿಂಬಾಳ ಗ್ರಾಮದ ಪನ್ಯ ಗುರಿಯಡ್ಕ ಸರಕಾರಿ ಹಿ.ಪ್ರಾ.ಶಾಲೆಗೆ ಸೇರಿದ ಜಮೀನು ಅತಿಕ್ರಮಣಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ಸ್ಥಳ ತನಿಖೆ ನಡೆಸಿದ ಪುತ್ತೂರು ಸಹಾಯಕ ಕಮೀಷನರ್ ಡಾ. ರಾಜೇಂದ್ರ ಕೆ.ವಿ., ವಾರದೊಳಗೆ ಅತಿಕ್ರಮಣ ತೆರವು ಮಾಡದಿದ್ದಲ್ಲಿ ಅತಿಕ್ರಮಣ ಮಾಡಿರುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಎಚ್ಚರಿಸಿದ್ದಾರೆ.

ಕೋಡಿಂಬಾಳ ಗ್ರಾಮದ ಪನ್ಯದಲ್ಲಿ ಸರ್ವೆ ನಂ. 196/3 ರಲ್ಲಿ ಶಾಲೆಗೆ ಸೇರಿದ 60 ಸೆಂಟ್ಸ್ ಜಾಗದಲ್ಲಿ ಸುಮಾರು 9 ಜೋಪಡಿಗಳ ನಿರ್ಮಾಣವಾಗಿ ವರ್ಷವೇ ಕಳೆದಿತ್ತು. ಸದ್ರಿ ಅತಿಕ್ರಮಣವನ್ನು ತೆರವುಗೊಳಿಸುವಂತೆ ಶಿಕ್ಷಣ ಇಲಾಖೆಯಿಂದ ಕಂದಾಯ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು. ಸದ್ರಿ ಜಾಗವು ಶಾಲೆಯಿಂದ ತುಂಬಾ ದೂರದಲ್ಲಿದ್ದು, ಶಾಲೆಯವರಿಗೆ ಪ್ರಸ್ತುತ ಶಾಲಾ ಕಟ್ಟಡ ಇರುವಲ್ಲಿ ಜಾಗವಿದೆ. ಅತಿಕ್ರಮಣಗೊಂಡಿರುವ ಜಾಗವನ್ನು ನಿವೇಶನ ರಹಿತರಾಗಿರುವ ನಮಗೆ ವಿಂಗಡಿಸಿ ಕೊಡಬೇಕಾಗಿ ಶಾಲೆಗೆ ಸಂಬಂಧಿಸಿದ ಜಾಗದಲ್ಲಿ ಗುಡಿಸಲು ನಿರ್ಮಿಸಿರುವ ಜನರು ಸಹಾಯಕ ಕಮೀಶನರ್‌ಗೆ ಮನವಿ ಮಾಡಿಕೊಂಡರು.

ಅದಕ್ಕೆ ಪ್ರತಿಕ್ರಿಯಿಸಿದ ಅವರು, ಸರಕಾರಿ ಉದ್ದೇಶಕ್ಕೆ ಮೀಸಲಾಗಿರುವ ಜಮೀನನ್ನು ಯಾವುದೇ ಕಾರಣಕ್ಕೂ ಇತರರಿಗೆ ಕೊಡಲು ಸಾಧ್ಯವಿಲ್ಲ. ನಿವೇಶನ ರಹಿತರಿಗೆ ನಿವೇಶನ ನೀಡಲು ಬೇರೆಯೇ ವ್ಯವಸ್ಥೆಗಳಿವೆ. ಅದನ್ನು ಬಿಟ್ಟು ಶಾಲೆಗೆ ಸಂಬಂಧಿಸಿದ ಜಾಗದಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದರೆ ಅದು ಕಾನೂನು ಬಾಹಿರವಾಗುತ್ತದೆ. ಶಿಕ್ಷಣ ಇಲಾಖೆಯವರು ಕೂಡ ಸದ್ರಿ ಜಮೀನು ನಮ್ಮ ಬಳಕೆಗೆ ಅಗತ್ಯವಿದೆ ಎಂದು ಕಂದಾಯ ಇಲಾಖೆಗೆ ಪತ್ರ ಬರೆದಿದ್ದಾರೆ. ಎಲ್ಲೆಡೆ ಸರಕಾರಿ ಉದ್ದೇಶಕ್ಕೆ ಬಳಸಲು ಜಮೀನಿನ ಕೊರತೆ ಇರುವಾಗ ಕಾದಿರಿಸಿರುವ ಜಮೀನನ್ನು ಬಿಟ್ಟುಕೊಡಲು ಯಾವುದೇ ಇಲಾಖೆ ಒಪ್ಪದು. ಆದುದರಿಂದ ಸಂಬಂಧಪಟ್ಟವರು ಕೂಡಲೇ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಬೇಕು ಎಂದು ತಾಕೀತು ಮಾಡಿದರು.

ಸ್ಥಳದಲ್ಲಿದ್ದ ದಸಂಸ ಮುಖಂಡ ಆನಂದ ಬೆಳ್ಳಾರೆ ಮಾತನಾಡಿ, ಪನ್ಯ ಗುರಿಯಡ್ಕ ಶಾಲೆಗೆ ಬೇಕಾದಷ್ಟು ಜಮೀನು ಈಗಾಗಲೇ ಇದೆ. ಶಾಲೆಯ ಪಕ್ಕದಲ್ಲಿ ಇನ್ನಷ್ಟು ಸರಕಾರಿ ಜಮೀನು ಇದೆ. ಈ ಹಿಂದೆ ಶಾಲೆಯ ಪಕ್ಕದ ಸರಕಾರಿ ಜಮೀನಿನಲ್ಲಿ ಮನೆ ಕಟ್ಟಿದವರನ್ನು ಕೂಡ ಕಂದಾಯ ಇಲಾಖೆಯವರು ತೆರವುಗೊಳಿಸಿದ್ದರು. ಪ್ರಸ್ತುತ ಶಾಲೆಗೆ ಸೇರಿದ ಜಮೀನಿನಲ್ಲಿ ನಿರ್ಮಿಸಿರುವ ಗುಡಿಸಲುಗಳನ್ನು ತೆರವುಗೊಳಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಸದ್ರಿ ನಿವೇಶನರಹಿತರಿಗೆ ಎಲ್ಲಿಯೂ ನೆಲೆ ಇಲ್ಲ. ಅವರಿಗೆ ಸರಕಾರದಿಂದ ನಿವೇಶನ ಕೊಡಿಸಬೇಕೆಂದು ಎಸಿ ಗೆ ಮನವಿ ಮಾಡಿದರು. ಈ ಕುರಿತು ಪರಿಶೀಲಿಸುವುದಾಗಿ ಎಸಿ ಭರವಸೆ ನೀಡಿದರು.

ಕಡಬ ತಹಶೀಲ್ದಾರ್ ಬಿ.ಲಿಂಗಯ್ಯ, ಕಂದಾಯ ನಿರೀಕ್ಷಕ ಕೊರಗಪ್ಪಹೆಗ್ಡೆ, ಗ್ರಾಮ ಕರಣಿಕರಾದ ನೆಬಿ ಸಾಬ್, ವಿಜೇತ್, ಸರ್ವೆಯರ್ ನವೀನ್, ಗ್ರಾಮ ಸಹಾಯಕ ರಮೇಶ್ ರಾವ್ ಹೊಸಮನೆ, ಗ್ರಾ.ಪಂ.ಸದಸ್ಯೆ ವಿಜಯಲಕ್ಷೀ ಈ ಸಂದರ್ಭದಲ್ಲಿ ಹಾಜರಿದ್ದರು.

ಸರಕಾರಿ ಇಲಾಖೆಗಳಿಗೆ ಮೀಸಲಿರಿಸಿರುವ ಜಮೀನನ್ನು ಯಾರೂ ಅತಿಕ್ರಮಣ ಮಾಡುವಂತಿಲ್ಲ. ಅತಿಕ್ರಮಣ ತೆರವುಗೊಳಿಸುವಂತೆ ಸಂಬಂಧಪಟ್ಟವರಿಗೆ ಆದೇಶಿಸಲಾಗಿದೆ. ತಪ್ಪಿದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಅವರಿಗೆ ಬೇರೆ ಕಡೆ ನಿವೇಶನ ನೀಡಲು ಇರುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾಗುವುದು.

ಡಾ. ರಾಜೇಂದ್ರ ಕೆ.ವಿ., ಸಹಾಯಕ ಕಮೀಶನರ್, ಪುತ್ತೂರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X