Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಸನ: ಡೆಂಗ್ ನಿಯಂತ್ರಣಕ್ಕೆ ನಗರಸಭೆಯಿಂದ...

ಹಾಸನ: ಡೆಂಗ್ ನಿಯಂತ್ರಣಕ್ಕೆ ನಗರಸಭೆಯಿಂದ ಮನೆ ಮನೆ ಪ್ರಚಾರ

ವಾರ್ತಾಭಾರತಿವಾರ್ತಾಭಾರತಿ27 May 2016 5:52 PM IST
share
ಹಾಸನ: ಡೆಂಗ್ ನಿಯಂತ್ರಣಕ್ಕೆ ನಗರಸಭೆಯಿಂದ ಮನೆ ಮನೆ ಪ್ರಚಾರ

ಹಾಸನ, ಮೇ 27: ಡೆಂಗ್ ಜ್ವರ ನಿಯಂತ್ರಣಕ್ಕಾಗಿ ಜನರಲ್ಲಿ ಜಾಗೃತಿ ಮೂಡಿಸಲು ನಗರಸಭೆ ಹಾಗೂ ಆರೋಗ್ಯ ಇಲಾಖೆಯಿಂದ ಪ್ರತಿ ಮನೆ ಮನೆಗೂ ತೆರಳಿ ಕರಪತ್ರ ನೀಡಿ ಅರಿವು ಮೂಡಿಸಲಾಯಿತು.

ನಗರದ ಪೆನ್‌ಷನ್ ಮೊಹಲ್ಲಾ 18ನೆ ವಾರ್ಡಿನಲ್ಲಿ ನಗರಸಭೆಯಿಂದ ಮನೆಗಳಿಗೆ ತೆರಳಿ ಸೊಳ್ಳೆಯಿಂದ ಹರಡುವ ಡೆಂಗ್ ಜ್ವರದ ಬಗ್ಗೆ ಮಾತಿ ನೀಡಿ ಕರಪತ್ರದೊಂದಿಗೆ ಅರಿವು ಮೂಡಿಸಿದರು. ಇದೆ ವೇಳೆ ಚರಂಡಿ, ನೀರು ನಿಂತಿರುವ ಜಾಗಕ್ಕೆ ನಾಶಕ ಔಷಧಿ ಸಿಂಪಡಿಸಲಾಯಿತು. ಇದೆ ವೇಳೆ ಸ್ಥಳದಲ್ಲಿದ್ದ ಆರೋಗ್ಯಾಧಿಕಾರಿ ವೆಂಕಟೇಶ್ ಜ್ವರ ಬಂದವರ ಬಗ್ಗೆ ಮಾಹಿತಿ ಪಡೆದರು.


      ನಗರಸಭೆಯ ಅಧ್ಯಕ್ಷ ಎಚ್.ಎಸ್. ಅನಿಲ್ ಕುಮಾರ್ ಮಾತನಾಡಿ, ನಗರದಲ್ಲಿ ಡೆಂಗ್ ಪ್ರಕರಣ ಕಂಡು ಬಂದಿದ್ದು, ಸ್ಲಂ ಪ್ರದೇಶಗಳಾದ ಪೆನ್‌ಷನ್ ಮೊಹಲ್ಲಾ, ಚಿಕ್ಕನಾಳು, ವಿನಾಯಕ ನಗರ ಸೇರಿದಂತೆ ಇತರೆ ಭಾಗಗಳಲ್ಲಿ ಹೆಚ್ಚು ಡೆಂಗ್ ಕಾಣಿಸಿಕೊಂಡಿದೆ. ಒಟ್ಟು 12 ಪ್ರಕರಣಗಳು ದಾಖಲಾಗಿದ್ದು, 22 ಪ್ರಕರಣವು ಪರೀಕ್ಷೆಯಲ್ಲಿದೆ ಎಂದರು.

ನೀರನ್ನು 48 ಗಂಟೆಗಳ ಕಾಲ ಮಾತ್ರ ನೀರು ಉಪಯೋಗಿಸಿ ನಂತರ ಅದನ್ನು ಬದಲಾಯಿಸಲು ಸಲಹೆ ನೀಡಿದ ಅವರು ಇಲ್ಲವಾದರೆ ಆ ಭಾಗದಲ್ಲಿ ಸೊಳ್ಳೆ ಉತ್ಪತ್ತಿಯಾಗುತ್ತದೆ ಎಂದು ಸಲಹೆ ನೀಡಿದರು. ಡೆಂಗ್ ಬಗ್ಗೆ ಜಾಗೃತಿ ಮೂಡಿಸಲು ನಗರಸಭೆಯಿಂದ ಮನೆ ಮನೆಗೆ ತೆರಳಿ ಕರಪತ್ರ ನೀಡುವ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದರು.

ಆರೋಗ್ಯ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿ ಮಾಡುವ ಮೂಲಕ ಡೆಂಗ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಅವಕಾಶ ಕಲ್ಪಿಸಲು ಮನವಿ ಮಾಡಿದರು.

ಆರೋಗ್ಯಾಧಿಕಾರಿ ವೆಂಕಟೇಶ್ ಮಾತನಾಡಿ, ಡೆಂಗ್ ಜ್ವರ ಎಂಬುದು ಈಡಿಸ್ ಇಜಿಪ್ಟೈ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿನಿಂದ ಮತ್ತೊಬ್ಬರಿಗೆ ಹರಡುತ್ತದೆ. ಇಂತಹ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತದೆ. ಹೆಚ್ಚು ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ ಎಂದರು.

ಬೂವನಹಳ್ಳಿ  ಡೆಂಗ್ ಪ್ರಕರಣ 2 ದಾಖಲಾಗಿದ್ದು, ಗುಡ್ಡೆನಹಳ್ಳಿಯಲ್ಲಿ-3, ಆರ್.ಸಿ ರಸ್ತೆ-1, ಕುವೆಂಪು ನಗರ-1 ಆದರ್ಶ ನಗರ-1, ಬಸವೇಶ್ವರ ಬಡಾವಣೆ ಸುತ್ತ-2 ಸೇರಿದಂತೆ ಒಟ್ಟು 12 ಡೆಂಗ್ ಪ್ರಕರಣಗಳು ದಾಖಲಾಗಿವೆ. 22 ಪ್ರಕರಣ ಪರೀಕ್ಷೆಯಲ್ಲಿದೆ ಎಂದರು. ಇದ್ದಕ್ಕಿದ್ದಂತೆ ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು ರೋಗದ ಪ್ರಮುಖ ಲಕ್ಷಣವಾಗಿದೆ. ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತದೆ ಎಂದು ಹೇಳಿದರು. ಜನತೆ ಜಾಗೃತೆ ವಹಿಸಿದರೆ ಇಂತಹ ರೋಗದಿಂದ ದೂರ ಇರಬಹುದು ಎಂದು ವಿವರಿಸಿದರು.

ಇದೆ ವೇಳೆ ನಗರಸಭೆ ಆಯುಕ್ತ ನಾಗಭೂಷಣ್, ಆರೋಗ್ಯಾಧಿಕಾರಿ ಕೃಷ್ಣಮೂರ್ತಿ, ನಗರಸಭೆ ಸದಸ್ಯರಾದ ಇರ್ಷಾದ್ ಪಾಷ, ಆರೀಪ್ ಖಾನ್, ಮಹೇಶ್, ಖಹಿಂ, ಅಮೀರ್ ಜಾನ್ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X