Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ: ಹುಬ್ಬಳ್ಳಿ ಮೂಲದ ವ್ಯಕ್ತಿ...

ಉಳ್ಳಾಲ: ಹುಬ್ಬಳ್ಳಿ ಮೂಲದ ವ್ಯಕ್ತಿ ಸಮುದ್ರಪಾಲು

ವಾರ್ತಾಭಾರತಿವಾರ್ತಾಭಾರತಿ27 May 2016 7:06 PM IST
share
ಉಳ್ಳಾಲ: ಹುಬ್ಬಳ್ಳಿ ಮೂಲದ ವ್ಯಕ್ತಿ ಸಮುದ್ರಪಾಲು

ಉಳ್ಳಾಲ, ಮೇ 27: ಕುಟುಂಬದೊಂದಿಗೆ ಹುಬ್ಬಳ್ಳಿಯಿಂದ ರಜಾದಿನಗಳನ್ನು ಕಳೆಯಲು ಉಳ್ಳಾಲಕ್ಕೆ ಬಂದ ವ್ಯಕ್ತಿಯೋರ್ವರು ಸಮುದ್ರಕಿನಾರೆಯಲ್ಲಿ ಕೌಟುಂಬಿಕರೊಂದಿಗೆ ಜಲಕ್ರೀಡೆಯಲ್ಲಿ ತೊಡಗಿದ್ದಾಗ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಮೃತ ವ್ಯಕ್ತಿಯನ್ನು ಹುಬ್ಬಳ್ಳಿಯ ಗೋಕುಲ್ ದಾಸ್ ರೋಡ್‌ನ ನಿವಾಸಿ ವಿನೋದ್ ಪೋತುಗೋಳಿ(41) ಎಂದು ಗುರುತಿಸಲಾಗಿದೆ.

ವಿನೋದ್ ತನ್ನ ತಾಯಿ ಚಿನ್ನಮ್ಮ, ಚಿಕ್ಕಮ್ಮ ಎಲಿಝಬೆತ್ ಅವರ ಮಗ ಆನಂದ್, ಪತ್ನಿ ಶೀಲಾ ಮತ್ತು ಮಗಳು ರೆಬೆಕ್ (8)ಜೊತೆ ಹುಬ್ಬಳ್ಳಿಯಿಂದ ಮಂಗಳೂರಿಗೆ ಬಂದಿದ್ದರು. ಮಂಗಳೂರು ತಾಲೂಕಿನ ಕಿನ್ಯ ಗ್ರಾಮದ ಒಳವಿನ ಹಳ್ಳಿಯಲ್ಲಿ ವಾಸವಾಗಿರುವ ವಿನೋದ್‌ರ ಪತ್ನಿ ಶೀಲಾರ ತಂಗಿ ವಿಮಲಾರ ಮನೆಗೆ ರಾತ್ರಿ ತಲುಪಿದ್ದರು. ಶುಕ್ರವಾರ ಮಧ್ಯಾಹ್ನದವರೆಗೂ ಮನೆಯಲ್ಲೇ ವಿಶ್ರಾಂತಿ ಪಡೆದು, ಮಧ್ಯಾಹ್ನದ ನಂತರ ವಿನೋದ್, ಚಿನ್ನಮ್ಮ, ಎಲಿಝಬೆತ್, ಆನಂದ್, ಶೀಲಾ, ರೆಬೆಕ್ ಮತ್ತು ವಿಮಲಾರ ಮಕ್ಕಳಾದ ಆಲಿಸ್ಟರ್ ಮತ್ತು ಟ್ರಿಸಾ ಸೇರಿ ಕಾರಿನಲ್ಲಿ ಉಳ್ಳಾಲ ಸಮುದ್ರ ತೀರಕ್ಕೆ ವಿಹಾರಕ್ಕೆಂದು ಹೊರಟಿದ್ದರು.

ಉಳ್ಳಾಲದ ಸಮುದ್ರವು ಆಳವಾಗಿದ್ದು ಇಲ್ಲಿನ ಪ್ರಕ್ಷುಬ್ದತೆ ಬಗ್ಗೆ ಸ್ಥಳೀಯ ಈಜು ರಕ್ಷಕರು ಇವರಿಗೆ ಎಚ್ಚರಿಸಿದ್ದರೂ ಅವರ ಕಣ್ಣು ತಪ್ಪಿಸಿ ದೂರ ತೆರಳಿದ್ದ ವಿನೋದ್, ಸಮ್ಮರ್ ಸ್ಯಾಂಡ್ಸ್ ಬೀಚ್ ರೆಸಾರ್ಟ್ ಹಿಂಭಾಗದಲ್ಲಿ ಆಟವಾಡುತ್ತಿದ್ದ ವೇಳೆ ನೀರಿಗಿಳಿದಿದ್ದರು. ಈ ವೇಳೆ ಸಮುದ್ರದ ದೈತ್ಯಗಾತ್ರದ ಅಲೆಗಳು ಅವರನ್ನು ಕೊಚ್ಚಿಕೊಂಡು ಹೋಗಿತ್ತು. ಕೂಡಲೇ ಸ್ಥಳೀಯ ಶಿವಾಜಿ ಈಜು ರಕ್ಷಕ ದಳದವರು ಸಮುದ್ರಕ್ಕೆ ಜಿಗಿದು ಹಗ್ಗದ ಮುಖೇನ ವಿನೋದ್ ದೇಹವನ್ನು ಮೇಲಕ್ಕೆಳೆದರೂ ಅದಾಗಲೇ ಅವರು ಮೃತಪಟ್ಟಿದ್ದರು.

ಮೃತ ವಿನೋದ್ ಹುಬ್ಬಳ್ಳಿಯ ಕೆಎಸ್ಸಾರ್ಟಿಸಿ ಡಿಪೋ ಸೆಕ್ಯುರಿಟಿಯಾಗಿದ್ದರು. ವಿನೋದ್ ಪತ್ನಿ ಶೀಲಾ ನೀಡಿದ ದೂರಿನನ್ವಯ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X