Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಕ್ಸಲ್‌ಬಾರಿ ಎಂದರೆ ಕೇವಲ ಸಶಸ್ತ್ರ...

ನಕ್ಸಲ್‌ಬಾರಿ ಎಂದರೆ ಕೇವಲ ಸಶಸ್ತ್ರ ಹೋರಾಟವಲ್ಲ: ಮಾನಸಯ್ಯ

ವಾರ್ತಾಭಾರತಿವಾರ್ತಾಭಾರತಿ27 May 2016 10:04 PM IST
share
ನಕ್ಸಲ್‌ಬಾರಿ ಎಂದರೆ ಕೇವಲ ಸಶಸ್ತ್ರ ಹೋರಾಟವಲ್ಲ: ಮಾನಸಯ್ಯ

ಚಿಕ್ಕಮಗಳೂರು, ಮೇ 27: ನಕ್ಸಲ್‌ಬಾರಿ ಎಂದರೆ ಕೇವಲ ಸಶಸ್ತ್ರ ಹೋರಾಟವಲ್ಲ. ರೈತ ಕಾರ್ಮಿಕರ ಒಂದು ದೊಡ್ಡ ಸಮೂಹ ದಂಗೆಯಾಗಿದ್ದು, ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ವಿರುದ್ಧದ ಹೋರಾಟವಾಗಿದೆ ಎಂದು ಸಿಪಿಐ(ಎಂಎಲ್) ಕೇಂದ್ರ ಪಾಲಿಟ್ ಬ್ಯೂರೋ ಸದಸ್ಯರಾದ ಆರ್.ಮಾನಸಯ್ಯ ತಿಳಿಸಿದರು.

ಆಲ್ದೂರಿನ ಅಂಬೇಡ್ಕರ್ ಭವನದಲ್ಲಿ ಸಿಪಿಐ(ಎಂಎಲ್) ಜಿಲ್ಲಾ ಸಮಿತಿ ಹಮ್ಮಿಕೊಂಡಿದ್ದ ನಕ್ಸಲ್ಬರಿ ರೈತ ದಂಗೆಯ 50ನೆಯ ವರ್ಷಾಚರಣೆಯ ಅಂಗವಾಗಿ ನಡೆಸಿದ ನಕ್ಸಲ್‌ಬಾರಿ ಬಂಡಾಯದ ರಾಜಕೀಯ ಪ್ರಾಮುಖ್ಯತೆ ಕುರಿತು ವಿಚಾರ ಸಂಕಿರಣದಲ್ಲಿ ವಿಚಾರ ಮಂಡಿಸಿ ಮಾತನಾಡಿದರು. ದೊಡ್ಡ ಬಂಡವಾಳಿಗರ, ದೊಡ್ಡ ಭೂಮಾಲಿಕರ ವಿರುದ್ಧ ಹೋರಾಟ ಮಾಡಿ ಊಳುವವನೇ ಭೂ ಒಡೆಯ ಎಂಬ ಘೋಷಣೆ ಜಾರಿಗಾಗಿ ನಡೆಸಿದ ಹೋರಾಟವಾಗಿದೆ. ನಕ್ಸಲ್‌ಬಾರಿ ರಾಜಕೀಯ ಎಂದರೆ ಮಾರ್ಕ್ಸ್‌ವಾದಿ, ಲೆನಿನ್‌ವಾದಿ, ಮಾವೋ ವಿಚಾರಧಾರೆಯ ರಾಜಕೀಯವಾಗಿದೆ. ಭೂಮಿಯ ಹಕ್ಕಿಗಾಗಿ ಸುದೀರ್ಘ ಕಾಲ ಹೋರಾಡಿರುವ ನಕ್ಸಲ್‌ಬಾರಿರೈತ ದಂಗೆಯಾಗಿದೆ ಎಂದು ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಅಧಿಕಾರ ಹಿಡಿದ ಯಾವುದೇ ಪಕ್ಷಗಳಿಗೆ ಭೂಮಿ ಹಂಚಿಕೆ ಮಾಡಲು ಸಾಧ್ಯವಾಗಿಲ್ಲ ಹಾಗೂ ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿದ ಸಿಪಿಐ, ಸಿಪಿಐ(ಎಂ) ಪಕ್ಷಗಳು ಜನರು ನಿರೀಕ್ಷೆಪಟ್ಟಂತೆ ಭೂ ಹಂಚಿಕೆಯ ಬೇಡಿಕೆಯನ್ನು ಈಡೇರಿಸಲು ಮತ್ತು ಕ್ರಾಂತಿಕಾರಿ ಹೋರಾಟಕ್ಕೆ ಮುಂದಾಗಿಲ್ಲ ಎಂದರು.

ದುಡಿಯುವ ವರ್ಗದ ಜನರಿಗೆ ಭೂಮಿ ಮತ್ತು ಅಧಿಕಾರ ಇನ್ನೂ ಸಿಗಲು ಸಾಧ್ಯವಾಗಿಲ್ಲ. ಉಳುಮೆ ಮಾಡುವವರಿಗೆ ಭೂಮಿ ನೀಡುವಂತಹ ಕಾರ್ಯಕ್ರಮಗಳು ಜಾರಿಯಾಗದೇ ಬಂಡವಾಳ ಹೂಡುವವರಿಗೆ ಭೂಮಿ ನೀಡಲಾಗುತ್ತಿದೆ. ದುಡಿಯುವ ವರ್ಗದ ಜನತೆ ಸಾಮ್ರಾಜ್ಯವಾದವನ್ನು ಕಿತ್ತೆಸೆದು ಸಮಾಜವಾದ ಸ್ಥಾಪಿಸುವ ಹೋರಾಟಕ್ಕೆ ಮುಂದಾಗಬೇಕಾಗಿದೆ ಎಂದರು.

ಸಮಾನತೆಗಾಗಿ ಜನಾಂದೋಲನ ರಾಜ್ಯ ಸಮಿತಿ ಸದಸ್ಯ ನೂರ್‌ಶ್ರೀಧರ್ ಪ್ರತಿಕ್ರಿಯೆಯಾಗಿ ಮಾತನಾಡಿ, ನಕ್ಸಲ್ಬರಿ ಹೋರಾಟ ಎಂದರೆ ಸಮಾನತೆಗಾಗಿ, ಬಡವರ ಅಧಿಕಾರಕ್ಕಾಗಿ ನಡೆಸಿದ ಹೋರಾಟವಾಗಿದ್ದು ಹಾಗೂ ಕ್ರಾಂತಿಕಾರಿ ಚಳುವಳಿಯಾಗಿದೆ ಎಂದರು.

ಈ ವಿಚಾರ ಸಂಕಿರಣದ ಅಧ್ಯಕ್ಷತೆಯನ್ನು ಸಿಪಿಐ(ಎಂ.ಲ್) ಜಿಲ್ಲಾ ಕಾರ್ಯದರ್ಶಿ ಕಾಂ.ಎಚ್.ಸಿ.ಮಹೇಶ್ ವಹಿಸಿಕೊಂಡಿದ್ದರು. ಪ್ರಸ್ತಾವನೆಯನ್ನು ಕಾಂ. ಕೂದುವಳ್ಳಿ ಮಹೇಶ್ ನಡೆಸಿಕೊಟ್ಟರು. ಧ್ವಜಾರೋಹಣ ಮಾಡುವ ಮೂಲಕ ನಕ್ಸಲ್ಬರಿ ರೈತ ದಂಗೆಯಲ್ಲಿ ಹುತಾತ್ಮರಾದ ಸಿಪಿಐ(ಎಂಎಲ್) ಜಿಲ್ಲಾ ಇಸಿ ಸಮಿತಿ ಸದಸ್ಯರಾದ ಕಾಂ. ಜಗನ್ನಾಥ್.ಸಿ.ಜೆ., ಜನಕವಿ ಕಾಂ. ಸಿ.ದಾನಪ್ಪ ಮಸ್ಕಿ, ಕಾಂ. ಬಸವರಾಜ್, ಕಾಂ. ಮಂಜುನಾಥ್ ಬೈಗೂರು, ಕಾಂ. ವಿಜಯ್.ಎಸ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X