Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೆಹರೂರನ್ನು ಹೊಗಳಿದ ಐಎಎಸ್ ಅಧಿಕಾರಿಯ...

ನೆಹರೂರನ್ನು ಹೊಗಳಿದ ಐಎಎಸ್ ಅಧಿಕಾರಿಯ ಎತ್ತಂಗಡಿ

ವಾರ್ತಾಭಾರತಿವಾರ್ತಾಭಾರತಿ27 May 2016 10:25 PM IST
share

ಭೋಪಾಲ್, ಮೇ 27: ಫೇಸ್‌ಬುಕ್ ಪೋಸ್ಟ್‌ಒಂದರಲ್ಲಿ ಜವಾಹರಲಾಲ್ ನೆಹರೂರನ್ನು ಹೊಗಳಿದ್ದ ಐಎಎಸ್ ಅಧಿಕಾರಿಯೊಬ್ಬರನ್ನು ಮಧ್ಯಪ್ರದೇಶ ಸರಕಾರ ವರ್ಗಾವಣೆ ಮಾಡಿದೆ.

ಬರ್ವಾನಿಯ ಜಿಲ್ಲಾ ಕಲೆಕ್ಟರ್ ಆಗಿದ್ದ ಅಜಯ್ ಸಿಂಗ್ ಗಂಗ್ವಾರ್‌ರನ್ನು ನಿನ್ನೆ ರಾತ್ರಿ ಭೋಪಾಲದ ವಿಧಾನಸಭೆಯ ಸಹಾಯಕ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಗಂಗ್ವಾರ್ 2005ರಲ್ಲಿ ರಾಜ್ಯಕೇಡರ್‌ನಿಂದ ಐಎಎಸ್ ಕೇಡರ್‌ಗೆ ಭಡ್ತಿ ಪಡೆದಿದ್ದರು.
 ರಾಜ್ಯ ಸರಕಾರವು ಗಂಗ್ವಾರ್‌ರನ್ನು ಭೋಪಾಲದ ಮಂತ್ರಾಲಯದ ಸಹಾಯಕ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿದೆಯೆಂದು ರಾಜ್ಯದ ಸಾರ್ವಜನಿಕ ಸಂಬಂಧ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಂದಿಯಲ್ಲಿ ಬರೆದಿದ್ದ ಫೇಸ್‌ಬುಕ್ ಪೋಸ್ಟ್‌ಒಂದರಲ್ಲಿ ಗಂಗ್ವಾರ್, ‘‘ನೆಹರೂ ಮಾಡಬಾರದ ತಪ್ಪುಗಳಿದ್ದರೆ ನನಗೆ ತಿಳಿಸಿ, 1947ರಲ್ಲಿ ಹಿಂದೂ ತಾಲಿಬಾನಿ ರಾಷ್ಟ್ರವಾಗುವುದರಿಂದ ಅವರು ನಮ್ಮನೆಲ್ಲ ತಡೆದಿದ್ದುದು ತಪ್ಪೇ?’’ ಎಂದು ಪ್ರಶ್ನಿಸಿದ್ದಾರೆ.
ಐಐಟಿ, ಇಸ್ರೊ, ಬಾರ್ಕ್, ಐಐಎಸ್‌ಬಿ, ಐಐಎಂ, ಬಿಎಸ್‌ಇಎಲ್ ಉಕ್ಕು ಘಟಕ, ಅಣೆಕಟ್ಟುಗಳು, ಉಷವಿದ್ಯುತ್ ಸ್ಥಾವರಗಳನ್ನು ಆರಂಭಿಸಿದ್ದು ಅವರ ತಪ್ಪೇ? ಆಸಾರಾಂ ಹಾಗೂ ರಾಮದೇವ್‌ರಂತಹ ಬುದ್ಧಿಜೀವಿಗಳ ಬದಲಿಗೆ ಸಾರಾಭಾಯಿ, ಹೋಮಿ ಜಹಾಂಗೀರರನ್ನು ಗೌರವಿಸಿದ್ದು ಅವರ ತಪ್ಪೇ? ಎಂದವರು ಕೇಳಿದ್ದಾರೆ.

ಈ ಎಫ್‌ಬಿ ಪೋಸ್ಟ್ ಸೇವಾ ನಿಯಮಗಳ ಉಲ್ಲಂಘನೆಯಾಗಿರುವುದರಿಂದ ಮೇಲಧಿಕಾರಿಗಳು ಅಸಮಾಧಾನಗೊಂಡಿದ್ದರು. ಅದರಂತೆ ಪ್ರಾಥಮಿಕ ತನಿಖೆಯೊಂದನ್ನು ನಡೆಸಿ ಗಂಗ್ವಾರ್‌ರನ್ನು ವರ್ಗಾವಣೆ ಮಾಡಲಾಗಿದೆ.
ಫೇಸ್‌ಬುಕ್‌ನಲ್ಲಿ ಗಂಗ್ವಾರ್‌ರ ಬರಹ ಪ್ರಕಟವಾದಂತೆಯೇ ಅವರನ್ನು ಜಿಲ್ಲೆಯಿಂದ ಎತ್ತಂಗಡಿ ಮಾಡಬಹುದೆಂಬ ಮಾತು ಕೇಳಿಬಂದಿತ್ತು.

ಆದಾಗ್ಯೂ ವರ್ಗಾವಣೆ ಆದೇಶದಲ್ಲಿ ನೆಹರೂ ಕುರಿತ ಫೇಸ್‌ಬುಕ್ ಪೋಸ್ಟ್‌ನ ಬಗ್ಗೆ ಯಾವುದೇ ಉಲ್ಲೇಖವಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X