Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬಿಎಂಟಿಸಿ ಬಸ್ಸುಗಳು ಜನಪರವಾಗಲಿ

ಬಿಎಂಟಿಸಿ ಬಸ್ಸುಗಳು ಜನಪರವಾಗಲಿ

ರಿಯಾಝ್ ಜಿ. ಉಜಿರೆರಿಯಾಝ್ ಜಿ. ಉಜಿರೆ27 May 2016 11:09 PM IST
share

ಮಾನ್ಯರೆ,
ಜನಸಂಪರ್ಕ ಸಾರಿಗೆ ಬಿಎಂಟಿಸಿಯಿಂದಾಗಿ ಬೆಂಗಳೂರಿನಲ್ಲಿರುವ ಜನತೆ ಅನುಭವಿಸುತ್ತಿರುವ ತೊಂದರೆ ಅಷ್ಟಿಷ್ಟಲ್ಲ. ಇಲ್ಲಿ ಖಾಸಗಿ ಬಸ್ಸುಗಳ ಸೇವೆ ಇಲ್ಲದಿರುವುದರಿಂದ ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಜನ ಸರಕಾರಿ ಬಸ್ಸುಗಳನ್ನೇ ಅವಲಂಬಿಸಬೇಕಾಗುತ್ತದೆ. ಆದರೆ ನಗರ ಪ್ರದೇಶಗಳಲ್ಲಿ ನಿಮಿಷಕ್ಕೊಂದು ಬಸ್ಸು ಬರುತ್ತಿದ್ದರೆ ಗ್ರಾಮೀಣ ಭಾಗದಲ್ಲಿ ಬಸ್ಸಿಗಾಗಿ ಒಂದು ತಾಸು ಕಾಯಬೇಕಾದ ದುಸ್ಥಿತಿ ಇಲ್ಲಿದೆ.

ನಿರ್ವಾಹಕರಲ್ಲಿ ಏನು ತಡವಾಯಿತು ಎಂದು ಕೇಳಿದರೆ ‘ಟ್ರಾಫಿಕ್ ಸಮಸ್ಯೆ’ ಎಂಬ ಉತ್ತರ ಕೂಡಲೇ ಬರುತ್ತದೆ. ಅಲ್ಲದೆ ಟಿಕೆಟ್ ಕೊಟ್ಟರೂ ಚಿಲ್ಲರೆ ಕೊಡದೆ ವಂಚಿಸುವ ನಿರ್ವಾಹಕರೂ ಈ ಬಸ್ಸುಗಳಲ್ಲಿದ್ದಾರೆ. ಬಿಎಂಟಿಸಿ ಬಸ್ಸುಗಳಲ್ಲಿ ಪ್ರಯಾಣಿಸುವವರಿಗೆ ಈ ಅನುಭವ ಪ್ರತಿನಿತ್ಯ ಆಗುತ್ತದೆ. ನಿರ್ವಾಹಕರು ಪ್ರಯಾಣಿಕರಿಂದ ಹಣ ಪಡೆದು ಟಿಕೆಟ್ ನೀಡುವಾಗ ಅದರ ಹಿಂಬದಿಯಲ್ಲಿ ಬಾಕಿ ಮೊತ್ತವನ್ನು ನೋಟ್ ಮಾಡಿ ಪಡೆದುಕೊಳ್ಳಲು ಹೇಳುತ್ತಾರೆ. ಆದರೆ ತಮ್ಮ ಸ್ಟಾಪ್ ಬಂದೊಡನೆ ಗಡಿಬಿಡಿಯಲ್ಲಿ ಇಳಿಯುವ ಪ್ರಯಾಣಿಕರಿಗೆ ಚಿಲ್ಲರೆ ಕೇಳುವಷ್ಟು ವ್ಯವಧಾನವೂ ಇರುವುದಿಲ್ಲ. ಅಲ್ಲದೆ ಚಿಲ್ಲರೆ ಕೇಳಲು ಮರೆತುಬಿಡುವ ಸಾಕಷ್ಟು ಮಂದಿ ಪ್ರಯಾಣಿಕರನ್ನು ನೋಡಬಹುದು. ಸೀಟಿಗಾಗಿ ಪರದಾಟ, ಅನ್ಯಭಾಷಿಕರ ಮಧ್ಯೆ ವಾಕ್ಸಮರ, ಚಿಲ್ಲರೆ ಕೊಡಲಿಲ್ಲ ಎಂಬ ಕಾರಣಕ್ಕೆ ಬಲಪ್ರದರ್ಶನ, ಸಿಗ್ನಲ್ ಅಲ್ಲದ ಸ್ಥಳದಲ್ಲಿ ಸ್ಟಾಪ್ ಕೊಡಲಿಲ್ಲ ಎಂಬ ಕಾರಣಕ್ಕೆ ನಿರ್ವಾಹಕ ಮತ್ತು ಪ್ರಯಾಣಿಕನ ಮಧ್ಯೆ ಅವಾಚ್ಯ ಶಬ್ದಗಳ ಜಗಳ ಇವೆಲ್ಲ ಬಿಎಂಟಿಸಿ ಬಸ್ಸುಗಳಲ್ಲಿ ನಾವು ದಿನನಿತ್ಯ ಕಾಣುವ ದೃಶ್ಯಗಳು. ಅಲ್ಲದೆ ಬಸ್ಸುಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಕಡಿವಾಣ ಹಾಕುವ ಅಗತ್ಯ ಇನ್ನೂ ಸರಕಾರದ ಗಮನಕ್ಕೆ ಬಂದಂತಿಲ್ಲ. ಮಹಿಳೆಯರ ಸೀಟಲ್ಲಿ ಕೂರಬಾರದು ಎಂದು ಗೊತ್ತಿದ್ದರೂ ಅರಿವಿಲ್ಲದ ಹಾಗೆ ನಡೆದುಕೊಳ್ಳುವ ಪುರುಷರೇನೂ ಕಮ್ಮಿ ಇಲ್ಲ. ಹೀಗೆ ಬಿಎಂಟಿಸಿ ಬಸ್ಸುಗಳ ಪ್ರಯಾಣಿಕರು ಹತ್ತಾರು ಸಮಸ್ಯೆಗಳ ಮಧ್ಯೆ ಪ್ರಯಾಣಿಸುವುದು ಸಾಮಾನ್ಯವಾಗಿಬಿಟ್ಟಿವೆ. ಆದ್ದರಿಂದ ಇನ್ನಾದರೂ ಇದಕ್ಕೆಲ್ಲ ಕಡಿವಾಣ ಹಾಕಲು ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕಾಗಿದೆ. 

share
ರಿಯಾಝ್ ಜಿ. ಉಜಿರೆ
ರಿಯಾಝ್ ಜಿ. ಉಜಿರೆ
Next Story
X