92 ಕೋ.ರೂ. ವೆಚ್ಚದಲ್ಲಿ ಬೀಚ್ಗಳ ಅಭಿವೃದ್ಧಿ: ದೇಶಪಾಂಡೆ
ರಾಷ್ಟ್ರೀಯ ಸರ್ಫಿಂಗ್ ಸ್ಪರ್ಧೆಗೆ ಚಾಲನೆ

ಮಂಗಳೂರು, ಮೇ 26: ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯದ 9 ಭಾಗಗಳಲ್ಲಿರುವ ಬೀಚ್ಗಳನ್ನು 92 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ರಾಜ್ಯ ಪ್ರವಾಸೋದ್ಯಮ ಇಲಾಖೆ ವತಿಯಿಂದ ಕೆನರಾ ಸರ್ಫಿಂಗ್ ಆ್ಯಂಡ್ವಾಟರ್ ಸ್ಪೋರ್ಟ್ಸ್ ಪ್ರಮೋಶನ್ ಕೌನ್ಸಿಲ್ ಸಹಭಾಗಿತ್ವದಲ್ಲಿ ಮಂತ್ರ ಸರ್ ಕ್ಲಬ್ ಏರ್ಪಡಿಸಿದ್ದ ರಾಷ್ಟ್ರೀಯ ‘ಸರ್ಫಿಂಗ್ ಸ್ಪರ್ಧೆ’ಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ರಾವಳಿಯ 9 ಬೀಚ್ಗಳ ಅಭಿವೃದ್ಧಿ, ಮೂಲಭೂತ ಸೌಕರ್ಯ, ಭದ್ರತೆ ವ್ಯವಸ್ಥೆ ಕಲ್ಪಿಸಲು 92 ಕೋ.ರೂ. ಶಿಾರಸುಗೊಂಡಿದ್ದು, ತ್ರಾಸಿ, ಸುರತ್ಕಲ್, ಮಲ್ಪೆ, ಮರವಂತೆ, ಮಾವಿನಕುರ್ವೆ, ಮುರ್ಡೇಶ್ವರ ಮೊದಲಾದ ಬೀಚ್ಗಳು ಪ್ರಸ್ತಾವನೆಯಲ್ಲಿವೆ ಎಂದರು.
ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಸರ್ಫಿಂಗ್ ಸ್ಪರ್ಧೆ ಏರ್ಪಡಿಸಲಾಗಿದೆ. ಮಂಗಳೂರಿನಲ್ಲಿ ಸ್ಪರ್ಧೆಗೆ ಉತ್ತಮ ಅವಕಾಶವಿದ್ದು, ದೇಶ, ವಿದೇಶಗಳಿಂದ ಸ್ಪರ್ಧೆಗೆ ಆಗಮಿಸುವ ಮುಖಾಂತರ ಬೃಹತ್ ಉತ್ಸವವನ್ನಾಗಿ ರೂಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಆದರೆ ಕರಾವಳಿ ಪ್ರದೇಶಗಳಲ್ಲಿ ಸಿಆರ್ಝೆಡ್ ನಿಯಮಗಳು ತಡೆಯಾಗಿದ್ದು ನಿಯಮಗಳ ಸರಳೀಕರಣವಾದರೆ ಪ್ರವಾಸೋದ್ಯಮವನ್ನು ಇಲ್ಲಿ ಪರಿಣಾಮಕಾರಿಯಾಗಿ ಅಭಿವೃದ್ಧಿಗೊಳಿಸಬಹುದು. ಪ್ರವಾಸೋದ್ಯಮದ ಅಭಿವೃದ್ಧಿಗೆ ರಾಜ್ಯ ಸರಕಾರ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಮೀನುಗಾರಿಕಾ ಸಚಿವ ಅಭಯಚಂದ್ರ ಜೈನ್, ಶಾಸಕರಾದ ಬಿ.ಎ.ಮೊಯ್ದಿನ್ ಬಾವ, ಐವನ್ ಡಿಸೋಜ, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ, ಜಿಪಂ ಸಿಇಒ ಶ್ರೀವಿದ್ಯಾ, ನಗರ ಪೊಲೀಸ್ ಆಯುಕ್ತ ಚಂದ್ರಶೇಖರ, ಮನಪಾ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ, ತಾಪಂ ಅಧ್ಯಕ್ಷ ಮುಹಮ್ಮದ್ ಮೋನು ಮೊದಲಾದವರು ಉಪಸ್ಥಿತರಿದ್ದರು.





