Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂಗ್ಲಿಷ್ ಕಲಿಕೆಗೆ ವಿನೂತನ ವಿಧಾನ ‘ಕರಡಿ...

ಇಂಗ್ಲಿಷ್ ಕಲಿಕೆಗೆ ವಿನೂತನ ವಿಧಾನ ‘ಕರಡಿ ಪಾಥ್’

ವಾರ್ತಾಭಾರತಿವಾರ್ತಾಭಾರತಿ28 May 2016 3:56 PM IST
share
ಇಂಗ್ಲಿಷ್ ಕಲಿಕೆಗೆ ವಿನೂತನ ವಿಧಾನ ‘ಕರಡಿ ಪಾಥ್’

ಸುಳ್ಯ: ಸುಳ್ಯದ ಕೆ.ವಿ.ಜಿ.ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಇದೇ 2016-17 ರ ಶೈಕ್ಷಣಿಕ ವರ್ಷದಲ್ಲಿ ಕೆ.ಜಿ.ತರಗತಿಯಿಂದ 1ನೇ ತರಗತಿಯ ಮಕ್ಕಳಿಗೆ "ಕರಡಿ ಪಾಥ್" ಎಂಬ ವಿನೂತನ ಇಂಗ್ಲಿಷ್ ಕಲಿಕಾ ವಿಧಾನವನ್ನು ಹೊಸದಾಗಿ ಆರಂಭಿಸಲಾಗಿದೆ. ಇಂಗ್ಲಿಷ್ ಕಲಿಕೆಯನ್ನು ಸರಳ ಹಾಗೂ ಸುಲಭವಾಗಿಸಬೇಕೆಂಬ ಸದುದ್ದೇಶದ ಜೊತೆಗೆ ಆ ಭಾಷೆಯ ಮೇಲೆ ನಮ್ಮ ವಿದ್ಯಾರ್ಥಿಗಳು ಪ್ರಭುತ್ವ ಸಾಧಿಸಬೇಕೆಂಬ ಸದಾಶಯ ಈ ಕಲಿಕಾ ವಿಧಾನದಲ್ಲಿದೆ.

‘ಪವರ್ ಇಂಗ್ಲಿಷ್’ ಎಂಬ ಹೆಸರಿನಲ್ಲಿ ಅಭಿನಯ, ಸಂಗೀತ, ಕಥೆ ಹಾಗೂ ಓದು ಎಂಬ 4 ಹಂತಗಳನ್ನೊಳಗೊಂಡ ಕಲಿಕಾ ವಿಧಾನ ಇದಾಗಿದೆ. ಮಾತೃಭಾಷೆಯನ್ನು ಮಕ್ಕಳು ಹೇಗೆ ಸಹಜವಾಗಿ ಕಲಿಯುತ್ತಾರೋ ಹಾಗೇ ಆಂಗ್ಲಭಾಷೆಯನ್ನೂ ಕಲಿಯಲು ಅನುಕೂಲವಾಗುವಂತಹ ಪರಿಸರವನ್ನು ನಿರ್ಮಿಸುವುದು ಇಲ್ಲಿನ ಗಮನಾರ್ಹ ಅಂಶ. ಪ್ರತಿಯೊಂದು ಅಕ್ಷರವನ್ನೂ ಹೇಗೆ ಉಚ್ಚಾರ ಮಾಡಬೇಕೆಂಬುದನ್ನು ಮೊದಲನೆಯ ಹಂತದಲ್ಲಿ ಹೇಳಿಕೊಡಲಾಗುತ್ತದೆ. ‘ಅಮರ ಚಿತ್ರ ಕಥಾ’ ‘ಟಿಂಕಲ್’ ಮೊದಲಾದ ಬಾಲ ಚಿತ್ರಕಥೆಗಳ ಪುಸ್ತಕಗಳನ್ನಾಧರಿಸಿ ಮಕ್ಕಳಿಗೆ ಅರ್ಥವಾಗುವಂತೆ ಭಾರತೀಯ ಸಂಗೀತದ ಹಿನ್ನೆಲೆ ಧ್ವನಿಯನ್ನು ಅಳವಡಿಸಿ ಸರಳ ಶಿಶುಗೀತೆಗಳನ್ನು ರಚಿಸಲಾಗಿದ್ದು ದೃಶ್ಯಾವಳಿಗಳ ಮೂಲಕ ಮಕ್ಕಳು ನೋಡುತ್ತಾ,ಸಂಗೀತವನ್ನು ಆಲಿಸುತ್ತಾ, ಶಿಕ್ಷಕರ ಮಾರ್ಗದರ್ಶನದಂತೆ ತಮ್ಮ ಕೈಯಲ್ಲಿರುವ ಪುಸ್ತಕವನ್ನು ಗಮನಿಸುತ್ತಾ ಆನಂದದಿಂದ ಕಲಿಯುತ್ತಾರೆ. ಇದು ಎರಡನೆಯ ಹಂತ. ಮೂರನೆಯ ಹಂತದಲ್ಲಿ ಕಥೆಗಳನ್ನು ಪರಿಣಾಮಕಾರಿಯಾಗಿ ಹೇಳುವ ವಿಧಾನವನ್ನು ಅಳವಡಿಸಲಾಗಿದೆ. ಸ್ವರಭಾರ ಸಹಿತವಾಗಿ, ಧ್ವನಿಯ ಏರಿಳಿತ ಮಾಡುತ್ತಾ, ದೃಶ್ಯಾವಳಿಗಳ ಮೂಲಕ ಮಕ್ಕಳು ನೋಡುತ್ತಾ, ಶಿಕ್ಷಕರ ಮಾರ್ಗದರ್ಶನದಂತೆ ತಮ್ಮ ಕೈಯಲ್ಲಿರುವ ಪುಸ್ತಕದಲ್ಲಿ ಕಾಣುವ ಬಣ್ಣಬಣ್ಣದ ಚಿತ್ರಗಳನ್ನು ಗಮನಿಸುತ್ತಾ ಆನಂದದಿಂದ ಕಲಿಯುತ್ತಾರೆ. ನಂತರ ನಾಲ್ಕನೆಯ ಹಂತದಲ್ಲಿ ಪರಿಣಾಮಕಾರಿ ಓದುಗಾರಿಕೆಗೆ ಮಕ್ಕಳನ್ನು ಹೇಗೆ ತಯಾರಿಮಾಡಬೇಕೆಂಬುದರ ಕುರಿತು ತರಬೇತಿ ನೀಡುತ್ತಾರೆ. ಹೀಗೆ ಬಾಲ್ಯದಲ್ಲಿ ಇಂಗ್ಲಿಷ್ ಕಲಿಕೆಗೆ ಭದ್ರ ಬುನಾದಿ ಹಾಕುವುದರ ಮೂಲಕ ಭವಿಷ್ಯದಲ್ಲಿ ಅವರು ಆತ್ಮವಿಶ್ವಾಸದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವಂತೆ ಮಕ್ಕಳಿಗೆ ತರಬೇತಿ ನೀಡಲಾಗುವುದು.

ಚೆನ್ನೈನಲ್ಲಿ ಸ್ಥಾಪಿತವಾದ ಸಂಸ್ಥೆ ಇಂದು ಭಾರತದಾದ್ಯಂತ 1500 ಶಾಲೆಗಳಲ್ಲಿ ಇಂಗ್ಲಿಷನ್ನು ಪರಿಣಾಮಕಾರಿಯಾಗಿ ಕಲಿಸುತ್ತಿದೆ ಈ ಸಂಸ್ಥೆಯಲ್ಲಿ ನುರಿತ ಅನುಭವೀ ಅಧ್ಯಾಪಕರ ವೃಂದವಿದ್ದು ಅದರಲ್ಲಿ ನಿಯೋಜಿಸಲಾದ ಓರ್ವ ಶಿಕ್ಷಕರು ಸಂಸ್ಥೆಯ ‘ಕರಡಿ ಪಾಥ್’ ಸಂಯೋಜಕರ ಜೊತೆ ಸತತವಾಗಿ ಸಂಪರ್ಕದಲ್ಲಿದ್ದು ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಕಾಲಕಾಲಕ್ಕೆ ಪರಿಶೀಲಿಸುತ್ತಿರುತ್ತಾರೆ. ಮಕ್ಕಳ ಕಲಿಕಾ ಮಟ್ಟವನ್ನಾಧರಿಸಿ ರಚಿಸಲಾದ ಸಿ.ಡಿ. ಹಾಗೂ ಡಿ.ವಿ.ಡಿಗಳನ್ನು ಹಾಗೂ ಇತರೆ ಕಲಿಕಾ ಉಪಕರಣಗಳನ್ನು ಪ್ರತಿಯೊಂದು ಮಗುವಿಗೂ ವಿತರಿಸಲಾಗುತ್ತದೆ. ಕಾರ್ಯಕ್ರಮದ ಪೂರ್ವಭಾವಿಯಾಗಿ ಆ ವಿಭಾಗದ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರಿನಿಂದ ಆರ್.ಉದಯಕುಮಾರ್ ಅವರು ಆಗಮಿಸಿ ಈ ವಿನೂತನ ಪರಿಣಾಮಕಾರೀ ಕಲಿಕಾ ವಿಧಾನದ ಕುರಿತು ಮಾಹಿತಿ ಹಾಗೂ ತರಬೇತಿ ನೀಡಿದರು. ಶಾಲಾ ಪ್ರಾಂಶುಪಾಲ ಪಿ.ಭುಜಂಗಶೆಟ್ಟಿ ಅವರನ್ನೊಳಗೊಂಡಂತೆ ಶಾಲೆಯ ಎಲ್ಲಾ ಅಧ್ಯಾಪಕ ವೃಂದದವರು ಈ ಕಾರ್ಯಾಗಾರದಲ್ಲಿ ಪಾಲ್ಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X