Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ಲ್ಯಾಕ್‌ಮೇಲ್ ಪ್ರಕರಣ : ಮೂಡುಬಿದಿರೆ...

ಬ್ಲ್ಯಾಕ್‌ಮೇಲ್ ಪ್ರಕರಣ : ಮೂಡುಬಿದಿರೆ ಬಜರಂಗದಳದ ಕಾರ್ಯಕರ್ತ ಸಹಿತ ಐವರ ಬಂಧನ

ವಾರ್ತಾಭಾರತಿವಾರ್ತಾಭಾರತಿ28 May 2016 7:04 PM IST
share
ಬ್ಲ್ಯಾಕ್‌ಮೇಲ್ ಪ್ರಕರಣ : ಮೂಡುಬಿದಿರೆ ಬಜರಂಗದಳದ ಕಾರ್ಯಕರ್ತ ಸಹಿತ ಐವರ ಬಂಧನ

   ಮೂಡುಬಿದಿರೆ : ಕಳೆದ ಕೆಲವು ಸಮಯಗಲಿಂದ ಹಣಕ್ಕಾಗಿ ಬೆದರಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಬಜರಂಗದಳ ಸಂಚಾಲಕ, ಸಂತೋಷ್ ಪೂಜಾರಿ ಸಹಿತ ಐವರನ್ನು ಮೂಡುಬಿದಿರೆ ಪೊಲೀಸರು ರೆಡ್‌ಹ್ಯಾಂಡಾಗಿ ಹಿಡಿದು ಬಂಧಿಸಿದ ಘಟನೆ ಶನಿವಾರ ಮೂಡುಬಿದಿರೆಯಲ್ಲಿ ನಡೆದಿದೆ.

     ಪುತ್ತಿಗೆ ಗುಡ್ಡೆಯಂಗಡಿಯ ನಿವಾಸಿ ರಾಘವೇಂದ್ರ ಭಟ್ ಎಂಬವರಿಗೆ ಸಂತೋಷ್ ಪೂಜಾರಿ ವಿಷಯವೊಂದನ್ನು ಮುಂದಿಟ್ಟು ಫೋನ್ ಮಾಡಿ ಬೆದರಿಸಿ 2 ಲಕ್ಷ ರೂಪಾಯಿಗಳನ್ನು ನೀಡದೆ ಇದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಈ ಬಗ್ಗೆ ರಾಘವೇಂದ್ರ ಭಟ್ ಅವರು ಪೊಲೀಸರ ಸಹಾಯ ಕೋರಿ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸರು ತನಿಖೆಗಿಳಿದು ಸಂತೋಷ್‌ನನ್ನು ರೆಡ್‌ಹ್ಯಾಂಡ್ ಆಗಿ ಹಿಡಿಯುವ ಕಾರ್ಯಾಚರಣೆಗಿಳಿದಿದ್ದರು.

   ಪೊಲೀಸರು ತಿಳಿಸಿದಂತೆ ರಾಘವೇಂದ್ರ ಭಟ್ ಅವರು ಕಾರ್ಯಾಚರಣೆಗೆ ಸಹಕರಿಸಿದ್ದರು. ಸಂತೋಷ್ ಪೂಜಾರಿ ಹಣಕ್ಕಾಗಿ ರಾಘವೇಂದ್ರ ಭಟ್ ಅವರಿಗೆ ಕರೆ ಮಾಡಿ ಹಣ ಪಡೆಯಲು ತಮ್ಮ ಮನೆಗೆ ಬರುವುದಾಗಿ ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಮುಂಚಿತವಾಗಿ ರಾಘವೇಂದ್ರ ಭಟ್ ಅವರ ಮನೆಗೆ ತೆರಳಿದ್ದರು. ಸಂತೋಷ್ ಮನೆಗೆ ಬಂದು ವ್ಯವಹಾರ ಕುದುರಿಸುತ್ತಿದ್ದಂತೆಯೇ ರೆಡ್‌ಹ್ಯಾಂಡಾಗಿ ಹಿಡಿದ ಪೊಲೀಸರು ಬಂಧಿಸಿದ್ದಾರೆ.ಸಂತೋಷ್ ಜೊತೆಗೆ ಈ ಕೃತ್ಯದಲ್ಲಿ ಮೂಡುಬಿದಿರೆ ಗಾಂಧಿನಗರದ ವೆಲ್ಡಿಂಗ್ ಶಾಪ್‌ನ ಪ್ರವೀಣ ಸಹಿತ ಬಂಟ್ವಾಳ, ಮಂಗಳೂರು ಕಾಪಿಕಾಡ್, ಅಡ್ಯಾರಿನ ನಿವಾಸಿಗಳಾದ ಮೂವರು ಭಾಗಿಯಾಗಿದ್ದು ಅವರನ್ನು ಕೂಡಾ ಮೂಡುಬಿದಿರೆ ಬಸ್ಸು ನಿಲ್ದಾಣದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

  ಮಾಜಿ ಸೈನಿಕನಾಗಿ ದೇಶ ಸೇವೆ ಮಾಡಿ ಅನಾರೋಗ್ಯದ ಕಾರಣದಿಂದ ಸೈನ್ಯವನ್ನು ತೊರೆದಿರುವ ಸಂತೋಷ್ ಪೂಜಾರಿ ಇತ್ತೀಚಿಗೆ ಮೂಡುಬಿದಿರೆಯಲ್ಲಿ ಮೊಬೈಲ್ ಅಂಗಡಿಯೊಂದನ್ನು ತೆರೆದು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಕೊಂಡಿದ್ದ. ಮೂಡುಬಿದಿರೆ ಪರಿಸರದಲ್ಲಿ ದನಸಾಗಾಟಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದ ಈತನ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ಕೆಲವೊಂದು ಪ್ರಕರಣಗಳು ದಾಖಲಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X