Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಥೆ ತಾನಾಗೇ ಹುಟು್ಟವ ಕಲಾಕೃತಿ: ಸಾಹಿತಿ...

ಕಥೆ ತಾನಾಗೇ ಹುಟು್ಟವ ಕಲಾಕೃತಿ: ಸಾಹಿತಿ ಡಾ. ನಾ.ಡಿಸೋಜ

ಕೃತಿ ಬಿಡುಗಡೆ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ28 May 2016 10:28 PM IST
share
ಕಥೆ ತಾನಾಗೇ ಹುಟು್ಟವ ಕಲಾಕೃತಿ: ಸಾಹಿತಿ ಡಾ. ನಾ.ಡಿಸೋಜ

ಸಾಗರ, ಮೇ 28: ಕಥೆಯನ್ನು ಲೇಖಕ ಹುಟ್ಟಿಸುವುದಿಲ್ಲ. ಕಥೆ ತಾನಾಗೆ ಹುಟ್ಟುವ ಕಲಾಕೃತಿ. ಮನಸಿನ ಹಲವು ಭಾವನೆಗಳನ್ನು ಸ್ಫುರಿಸುವ, ಚಿಂತನೆ ಹುಟ್ಟುಹಾಕುವ ಕೆಲಸವನ್ನು ಕಥೆ ಮಾಡುತ್ತದೆ ಎಂದು ಸಾಹಿತಿ ಡಾ. ನಾ.ಡಿಸೋಜ ಹೇಳಿದರು. ಇಲ್ಲಿನ ಸರಕಾರಿ ನೌಕರರ ಭವನದಲ್ಲಿ ಶುಕ್ರವಾರ ಜಿಲ್ಲಾ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ, ಡಾ. ಎಚ್.ಗಣಪತಿಯಪ್ಪ ಸೇವಾ ಟ್ರಸ್ಟ್, ಸಹೃದಯ ಬಳಗ ಹಾಗೂ ವೀತರಾಗ ಟ್ರಸ್ಟ್ ವತಿಯಿಂದ ಲೇಖಕ ಪ್ರಕಾಶ್ ಆರ್.ಕಮ್ಮಾರ್ ಬರೆದ ‘ಸುರಗಿ’ ಕಥಾ ಸಂಕಲನ ಹಾಗೂ ಸಾಹಿತಿ ವಿ. ಗಣೇಶ್ ಬರೆದ ‘ಕನ್ನಡದ ಪರಿಚಾರಕ ಪ್ರಕಾಶ್ ಕಮ್ಮಾರ್’ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು. ಮನುಷ್ಯನ ಜೊತೆ ಕಥೆಯೂ ಹುಟ್ಟುತ್ತದೆ. ಹೇಗೆ ದೀಪವಿಲ್ಲದ ಮನೆ ಇರುವುದಿಲ್ಲವೋ, ಅದೇ ರೀತಿ ಕಥೆ ಇಲ್ಲದ ಮನೆ ಇರುವುದಿಲ್ಲ. ಒಬ್ಬ ಮನುಷ್ಯ ಸತ್ತರೆ 10 ಕಥೆಗಳು ಅವನ ಜೊತೆ ಸಾಯುತ್ತದೆ. ಕಥೆಯ ಶಕ್ತಿಯೆ ಅಂತಹದ್ದಾಗಿದ್ದು, ಸಾಹಿತ್ಯದ ಇತರೇ ಪ್ರಕಾರಗಳಿಗಿಂತ ಕಥೆ ಅತ್ಯಂತ ಪರಿಣಾಮಕಾರಿ ಮಾಧ್ಯಮವಾಗಿದೆ ಎಂದರು. ಸಾಹಿತಿ ವಿ.ಗಣೇಶ್ ತನ್ನ ಕೃತಿಯಲ್ಲಿ ಪ್ರಕಾಶ್ ಆರ್. ಕಮ್ಮಾರ್ ಅವರ ಸಾಹಿತ್ಯ ಪರಿಚಾರಿಕೆಯನ್ನು ಸ್ಥೂಲವಾಗಿ ವಿವರಿಸಿದ್ದಾರೆ. ಪ್ರಕಾಶ್ ಕಮ್ಮಾರ್ ಶಿಕ್ಷಕರಾಗಿ, ಸಂಘಟಕರಾಗಿ, ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ನಡೆಸಿದ ಕಾರ್ಯಚಟುವಟಿಕೆ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ. ಅದೇ ರೀತಿ ಪ್ರಕಾಶ್ ತನ್ನ ‘ಸುರಗಿ’ ಕಥಾ ಸಂಕಲನದಲ್ಲಿ ಮಲೆನಾಡಿನ ಪರಿಸರ, ಜನಜೀವನ ಕುರಿತು 15ಕ್ಕೂ ಹೆಚ್ಚು ಕಥೆಗಳನ್ನು ರಚಿಸಿದ್ದಾರೆ. ಅದರಲ್ಲಿ ಶಿರವಾಳದ ಕನ್ನ, ರೇಖೆಗಳು, ನೂರು ನಿಮಿಷದಂತಹ ಕಥೆಗಳು ಅತ್ಯಂತ ಮನೋಜ್ಞವಾದದ್ದು ಎಂದರು. ಪ್ರತಿವರ್ಷ ಸಾವಿರಾರು ಪುಸ್ತಕಗಳು ಲೋಕಾರ್ಪಣೆಗೊಳ್ಳುತ್ತಿದೆ. ಆದರೆ ಓದುಗರ ಸಂಖ್ಯೆ ಮಾತ್ರ ಹೆಚ್ಚುತ್ತಿಲ್ಲ. ಜನರಿಗೆ ಪುಸ್ತಕವನ್ನು ಕೊಂಡು ಓದುವ ಅಭಿರುಚಿ ಕಡಿಮೆಯಾಗುತ್ತಿದೆ. ಜನರಿಗೆ ಪುಸ್ತಕ ಬೇಡವೆ ಎನ್ನುವ ಪ್ರಶ್ನೆ ಲೇಖಕರನ್ನು ಸಹಜವಾಗಿ ಕಾಡುತ್ತಿದೆ. ಈ ಪರಿಸ್ಥಿತಿ ಬದಲಾಗಬೇಕು. ನಮ್ಮ ಲೇಖಕರು ಬರೆದ ಕೃತಿಗಳನ್ನು ಖರೀದಿಸಿ ಓದುವತ್ತ ಸಾಹಿತ್ಯಾಸಕ್ತರು ಗಮನ ಹರಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ.ಮಂಜುನಾಥ್, ಪ್ರತಿವರ್ಷ 8 ಸಾವಿರಕ್ಕೂ ಅಧಿಕ ಕೃತಿಗಳು ಬಿಡುಗಡೆಗೊಳ್ಳುತ್ತಿದೆ. ಓದುಗರು ಇಷ್ಟಪಡುವ ಕೃತಿಗಳನ್ನು ರಚಿಸಿದಾಗ ಸಹಜವಾಗಿ ಹೆಚ್ಚು ಪ್ರಸರಣವಾಗುತ್ತದೆ. ಈ ನಿಟ್ಟಿನಲ್ಲಿ ಲೇಖಕರು ಗಮನ ಹರಿಸಬೇಕು. ಬಿಡುಗಡೆಯಾದ ಪುಸ್ತಕವನ್ನು ಓದುಗರಿಗೆ ತಲುಪಿಸುವ ಹೊಣೆಗಾರಿಕೆ ನಮ್ಮಂತಹ ಸಾಹಿತ್ಯ ಸಂಘಟನೆ ಮೇಲೆ ಇದೆ ಎಂದರು. ಈ ಸಂದರ್ಭದಲ್ಲಿ ಲೇಖಕರಾದ ಪ್ರಕಾಶ್ ಆರ್.ಕಮ್ಮಾರ್, ಸಾಹಿತಿ ವಿ.ಗಣೇಶ್, ಡಾ. ಎಚ್.ಗಣಪತಿಯಪ್ಪ, ಸೇವಾ ಟ್ರಸ್ಟ್ ಅಧ್ಯಕ್ಷ ಉಮೇಶ್ ಹಿರೇನೆಲ್ಲೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X