Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೇಮುಲಾ ಆತ್ಮಹತ್ಯೆ: ಸ್ಮಾರಕ...

ವೇಮುಲಾ ಆತ್ಮಹತ್ಯೆ: ಸ್ಮಾರಕ ಟೆಂಟ್‌ಗಳನ್ನು ತೆರವುಗೊಳಿಸಿದ ಹೈದರಾಬಾದ್ ವಿ.ವಿ.

ವಾರ್ತಾಭಾರತಿವಾರ್ತಾಭಾರತಿ28 May 2016 10:45 PM IST
share

 ಹೈದರಾಬಾದ್,ಮೇ 28: ಕಳೆದ ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ದಲಿತ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾರ ಸ್ಮರಣಾರ್ಥ ವಿದ್ಯಾರ್ಥಿಗಳು ಸ್ಥಾಪಿಸಿದ್ದ ಟೆಂಟ್‌ಗಳನ್ನು ವಿವಿ ಅಧಿಕಾರಿಗಳು ಶನಿವಾರ ತೆರವುಗೊಳಿಸಿದ ಬಳಿಕ ಹೈದರಾಬಾದ್ ವಿವಿಯಲ್ಲಿ ಪರಿಸ್ಥಿತಿ ಮತ್ತೊಮ್ಮೆ ಬಿಗಡಾಯಿಸಿದೆ.

ವಿವಿಯ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿನ ಎರಡು ಟೆಂಟ್‌ಗಳನ್ನು ನಸುಕಿನ ಎರಡು ಗಂಟೆಯ ಸುಮಾರಿಗೆ ತೆರವುಗೊಳಿಸಿ ವಾಹನದಲ್ಲಿ ಸಾಗಿಸಲಾಗಿದೆ ಎಂದು ಸಾಮಾಜಿಕ ನ್ಯಾಯಕ್ಕಾಗಿ ಜಂಟಿ ಕ್ರಿಯಾ ಸಮಿತಿ(ಜೆಎಸಿ)ಯ ಸದಸ್ಯ ವೈ.ಭಾಸ್ಕರ್ ತಿಳಿಸಿದರು.
ವೇಮುಲಾ ಆತ್ಮಹತ್ಯೆಗೆ ಮುನ್ನ ತಾನು ಇತರ ನಾಲ್ವರು ವಿದ್ಯಾರ್ಥಿಗಳೊಂದಿಗೆ ಧರಣಿ ಕುಳಿತಿದ್ದ ವಿವಿ ಕ್ಯಾಂಪಸ್‌ನಲ್ಲಿಯ ತಾಣವನ್ನು ‘ವೆಲಿವಾಡಾ (ದಲಿತ ಕಾಲನಿ)’ಎಂದು ಬಣ್ಣಿಸಿದ್ದರು. ಅವರ ಆತ್ಮಹತ್ಯೆಯ ಬಳಿಕ ವಿದ್ಯಾರ್ಥಿಗಳು ಅವರ ಸ್ಮರಣಾರ್ಥ ಇಲ್ಲಿ ಟೆಂಟ್‌ಗಳನ್ನು ಸ್ಥಾಪಿಸಿ ವೇಮುಲರ ಚಿತ್ರ,ಪೋಸ್ಟರ್‌ಗಳು ಮತ್ತು ಘೋಷಣೆಗಳನ್ನು ಪ್ರದರ್ಶಿಸಿದ್ದರು.
ಆದರೆ ಸ್ಥಳದಲ್ಲಿರುವ ವೇಮುಲಾರ ಪ್ರತಿಮೆ ಮತ್ತು ಬಿ.ಆರ್.ಅಂಬೇಡ್ಕರ್, ಜ್ಯೋತಿಬಾ ಪುಲೆ ಮತ್ತು ಕಾನ್ಶಿರಾಂ ಅವರ ಚಿತ್ರಗಳಿಗೆ ಅಧಿಕಾರಿಗಳು ಕೈ ಹಚ್ಚಿಲ್ಲ.
ರಜೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಿದ್ದು,ಕ್ಯಾಂಪಸ್‌ನಲ್ಲಿ ಉಳಿದಿರುವ ಸುಮಾರು 40 ವಿದ್ಯಾರ್ಥಿಗಳು ವಿವಿ ಅಧಿಕಾರಿಗಳ ಕ್ರಮವನ್ನು ಪ್ರತಿಭಟಿಸಿ ಧರಣಿಯನ್ನು ನಡೆಸಿದರು.

ಇದು ದಲಿತ ವಿದ್ಯಾರ್ಥಿಗೆ ಮಾಡಿರುವ ಅವಮಾನವಾಗಿದೆ. ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ವಿವಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ನಾವು ಚಿಂತನೆ ನಡೆಸುತ್ತಿದ್ದೇವೆ ಎಂದು ಜೆಎಸಿ ಸದಸ್ಯರೋರ್ವರು ತಿಳಿಸಿದರು.
ಕ್ಯಾಂಪಸ್‌ನಲ್ಲಿಯ ಟೆಂಟ್‌ಗಳು ಮತ್ತು ಸ್ಮಾರಕವನ್ನು 48 ಗಂಟೆಗಳಲ್ಲಿ ತೆರವುಗೊಳಿಸುವಂತೆ ವಿವಿ ಆಡಳಿತವು ಮೇ 20ರಂದು ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಪಿ.ಝುಹೈಲ್ ಅವರಿಗೆ ನೋಟಿಸ್ ನೀಡಿತ್ತು. ವಿದ್ಯಾರ್ಥಿ ನಾಯಕರು ರಜೆಯಲ್ಲಿ ತೆರಳಿರುವುದರಿಂದ ಅದನ್ನು ಸ್ವೀಕರಿಸಲು ವಿದ್ಯಾರ್ಥಿಗಳು ನಿರಾಕರಿಸಿದ್ದರು.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X