Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಝಿಕಾ ವೈರಸ್ ಭೀತಿ: ಒಲಿಂಪಿಕ್...

ಝಿಕಾ ವೈರಸ್ ಭೀತಿ: ಒಲಿಂಪಿಕ್ ಸ್ಥಳಾಂತರಕ್ಕೆ ವಿಜ್ಞಾನಿಗಳ ಆಗ್ರಹ

ಡಬ್ಲುಎಚ್‌ಓಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ28 May 2016 10:50 PM IST
share
ಝಿಕಾ ವೈರಸ್ ಭೀತಿ: ಒಲಿಂಪಿಕ್ ಸ್ಥಳಾಂತರಕ್ಕೆ ವಿಜ್ಞಾನಿಗಳ ಆಗ್ರಹ

ರಿಯೋಡಿಜನೈರೋ,ಮೇ 28: ಝಿಕಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ, ಬ್ರೆಜಿಲ್ ರಾಜಧಾನಿ ರಿಯೋಡಿಜನೈರೋದಲ್ಲಿ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟದ ಸ್ಥಳವನ್ನು ಬದಲಾಯಿಸಬೇಕೆಂದು, ಆರೋಗ್ಯ ತಜ್ಞರು ವಿಶ್ವ ಆರೋಗ್ಯ ಸಂಸ್ಥೆಯನ್ನು ಆಗ್ರಹಿಸಿದ್ದಾರೆ. ಅಂತಾರಾಷ್ಟೀಯ ಮಟ್ಟದ ಪ್ರಸಿದ್ಧ ವಿಜ್ಞಾನಿಗಳು, ಪ್ರೊಫೆಸರ್‌ಗಳು ಹಾಗೂ ಆರೋಗ್ಯ ತಜ್ಞರನ್ನೊಳಗೊಂಡ 150 ಮಂದಿ ಸಹಿಹಾಕಿರುವ ಪತ್ರವೊಂದರಲ್ಲಿ ಒಲಿಂಪಿಕ್ ಕ್ರೀಡಾಕೂಟವನ್ನು ಬೇರೆಡೆಗೆ ಸ್ಥಳಾಂತರಿಸಬೇಕೆಂದು ವಿಶ್ವ ಆರೋಗ್ಯ ಸಂಸ್ಥೆಯನ್ನು ಒತ್ತಾಯಿಸಲಾಗಿದೆ. ಆರೋಗ್ಯ ಹಾಗೂ ನೈರ್ಮಲ್ಯ ಪಾಲನೆಯಲ್ಲಿ ಬ್ರೆಝಿಲ್‌ನ ದಯನೀಯವಾದ ವೈಫಲ್ಯ ಕಂಡಿದೆಯೆಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ. ಅಮೆರಿಕ, ಬ್ರಿಟನ್,ಜಪಾನ್, ಕೆನಡ,ಜಪಾನ್, ಲೆಬನಾನ್,ಟರ್ಕಿ ಮತ್ತಿತರ ದೇಶಗಳ ತಜ್ಞರು ಈ ಪತ್ರಕ್ಕೆ ಸಹಿಹಾಕಿದ್ದಾರೆ. ಬ್ರೆಝಿಲ್, ಝಿಕಾ ವೈರಸ್ ಪೀಡಿತ ದೇಶಗಳ ಪೈಕಿ ಮುಂಚೂಣಿಯಲ್ಲಿದೆ.

  ಝಿಕಾ ವೈರಸ್ ಮೆದುಳಿನ ಬೆಳವಣಿಗೆ ಕುಂಠಿತ ಸೇರಿದಂತೆ ನವಜಾತ ಶಿಶುಗಳ ದೈಹಿಕ ಆರೋಗ್ಯ ಗಂಭೀರವಾದ ಅಪಾಯವನ್ನುಂಟು ಮಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯಸಂಸ್ಥೆಯ ಅಧಿಕಾರಿಗಳು, ಒಲಿಂಪಿಕ್ ಕ್ರೀಡಾಕೂಟ ನಡೆಯುವ ರಿಯೋ ಡಿ ಜನೈರೋಗೆ ಭೇಟಿ ನೀಡಿ ಪರಿಸ್ಥಿತಿಯ ಪರಾಮರ್ಶೆ ನಡೆಸಬೇಕೆಂದು ತಜ್ಞರು ಪತ್ರದಲ್ಲಿ ಆಗ್ರಹಿಸಿದ್ದಾರೆ. ಒಲಿಂಪಿಕ್ಸ್ ಕ್ರೀಡಾಕೂಟವನ್ನು ವೀಕ್ಷಿಸಲು ಜಗತ್ತಿನೆಲ್ಲೆಡೆಯಿಂದ 5 ಲಕ್ಷಕ್ಕೂ ಅಧಿಕ ಪ್ರವಾಸಿಗರು ಆಗಮಿಸಲಿರುವುದರಿಂದ ಝೈಕಾ ವೈರಸ್ ವಿಶ್ವದಾದ್ಯಂತ ಇನ್ನಷ್ಟು ವೇಗವಾಗಿ ಹರಡುವ ಸಾಧ್ಯತೆಯಿದೆಯೆಂದು ಅವರು ಹೇಳಿದ್ದಾರೆ.

 ಸ್ಥಳಾಂತರವಿಲ್ಲ: ಡಬ್ಲು ಎಚ್‌ಓ ಸ್ಪಷ್ಟನೆ ಝಿಕಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಒಲಿಂಪಿಕ್ ಕ್ರೀಡಾಕೂಟದ ಸಮಯ ಅಥವಾ ಸ್ಥಳದಲ್ಲಿ ಬದಲಾವಣೆ ಮಾಡಬೇಕೆಂಬ ವಿಜ್ಞಾನಿಗಳ ಆಗ್ರಹವನ್ನು ವಿಶ್ವ ಆರೋಗ್ಯ ಸಂಸ್ಥೆ ತಳ್ಳಿಹಾಕಿದೆ. ಒಲಿಂಪಿಕ್ಸ್‌ನಿಂದಾಗಿ ಝಿಕಾ ವೈರಸ್ ವಿಶ್ವವ್ಯಾಪಿಯಾಗಿ ಹರಡುವ ಸಾಧ್ಯತೆಯಿದೆಯೆಂಬ ತಜ್ಞರ ವಾದವನ್ನು ಅದು ಅಲ್ಲಗಳೆದಿದೆ.

ಒಲಿಂಪಿಕ್ಸ್ ಹಾಗೂ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟವು ರಿಯೋಡಿ ಜನೈರೋದಲ್ಲಿ ಆಗಸ್ಟ್ 5ರಿಂದ ಸೆಪ್ಟೆಂಬರ್ 18ರ ತನಕ ನಡೆಯಲಿದೆ. ಈ ಅವಧಿಯು ಬ್ರೆಝಿಲ್‌ನಲ್ಲಿ ಚಳಿಗಾಲವಾಗಿರುವುದರಿಂದ, ಸೊಳ್ಳೆಗಳು ಸಂಖ್ಯೆ ತುಂಬಾ ಕಡಿಮೆಯಿರುತ್ತದೆಯೆಂದವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X