Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಡಿಯನ್ ಓಪನ್ ಸರ್ಫಿಂಗ್: 2ನೆ ದಿನ...

ಇಂಡಿಯನ್ ಓಪನ್ ಸರ್ಫಿಂಗ್: 2ನೆ ದಿನ ಚೆನ್ನೈ ಸರ್ಫರ್‌ಗಳ ಪ್ರಾಬಲ್ಯ

ವಾರ್ತಾಭಾರತಿವಾರ್ತಾಭಾರತಿ28 May 2016 11:50 PM IST
share

ಮಂಗಳೂರು, ಮೇ 28: ರಾಜ್ಯ ಪ್ರವಾಸೋದ್ಯಮ ಇಲಾಖೆ, ಸರ್ಫಿಂಗ್ ಫೆಡರೇಶನ್ ಇಂಡಿಯಾ, ಮಂತ್ರ ಸರ್ಫ್ ಕ್ಲಬ್ ಹಾಗೂ ಆಲ್ ಕಾರ್ಗೋ ಪ್ರಾಯೋಜಕತ್ವದಲ್ಲಿ ಇಲ್ಲಿನ ಸಸಿಹಿತ್ಲು ಬೀಚ್‌ನಲ್ಲಿ ನಡೆಯುತ್ತಿರುವ ಮೊದಲ ಆವೃತ್ತಿಯ ಇಂಡಿಯನ್ ಓಪನ್ ಸರ್ಫಿಂಗ್‌ನ ಎರಡನೆ ದಿನವಾದ ಶನಿವಾರ ಚೆನ್ನೈ ಸರ್ಫರ್‌ಗಳು ಪ್ರಾಬಲ್ಯ ಮೆರೆದಿದ್ದಾರೆ.

ಕರ್ನಾಟಕದಲ್ಲಿ ಮೊದಲ ಬಾರಿ ತ್ರಿದಿನ ಸರ್ಫಿಂಗ್ ಸ್ಪರ್ಧೆ ನಡೆಯುತ್ತಿದ್ದು, ರವಿವಾರ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ನಡೆಯುತ್ತವೆ.

2ನೆ ದಿನ ಅಂಡರ್-16, ಜೂನಿಯರ್(17-22 ವರ್ಷ), ಸೀನಿಯರ್(23-28 ವರ್ಷ) ಹಾಗೂ ಮುಕ್ತ ವಿಭಾಗಗಳಲ್ಲಿ ಮೊದಲ ಸುತ್ತಿನ ಸ್ಪರ್ಧೆ ಏರ್ಪಡಿಸಲಾಗಿತ್ತು. ನಾಲ್ಕು ವಿಭಾಗದಲ್ಲಿ ಕೌಶಲ್ಯ ಪ್ರದರ್ಶಿಸುವ ಸರ್ಫರ್‌ಗಳು ಸೆಮಿಫೈನಲ್‌ಗೆ ತೇರ್ಗೆಡೆಯಾಗುತ್ತಾರೆ.

ಅಂಡರ್-16 ವಿಭಾಗದಲ್ಲಿ ಪಾಂಡಿಚೇರಿಯ ಪರ್ಸಿವಲ್ ಫಯೊನ್, ಡಿ. ಸಂಜಯ್, ಸಂತೋಷನ್, ಮಣಿಕಂಠನ್ ನಿತೀಶ್, ಸಂಜಯ್ ಸೆಲ್ವಮಣಿ ಹಾಗೂ ತಮಿಳುನಾಡಿನ ಮಣಿವನ್ನನ್, ಯುವರಾಜ್ ಸೆಮಿಫೈನಲ್‌ಗೆ ತಲುಪಿದರು. ಜೂನಿಯರ್(17-22ವರ್ಷ)ವಿಭಾಗದಲ್ಲಿ ಚೆನ್ನೈನ ಆರ್.ಗೋವಿಂದ್, ಅಜಿತ್ ಕುಮಾರ್, ಸತೀಶ್, ಮಣಿಮನ್ನನ್ ಹಾಗೂ ಸೂರ್ಯ ಪಿ., ಚಿನ್ನಕೊಂಡ(ವಿಝಾಗ್), ಸ್ವಪ್ನಿಲ್ ಭಿಂಗೆ(ಗೋವಾ), ಸ್ಥಳೀಯ ಸರ್ಫರ್ ದೀಕ್ಷಿತ್ ಕೆ. ಸುವರ್ಣ ಸೆಮಿಫೈನಲ್ ಸುತ್ತಿಗೆ ತಲುಪಿದ್ದಾರೆ.

ಸೀನಿಯರ್ ವಿಭಾಗದಲ್ಲಿ ವರ್ಗೀಸ್(ಕೇರಳ), ಧರಣಿ ಸೆಲ್ವಕುಮಾರ್, ವಿಕ್ಕಿ ವಿ, ರಘುಲ್ ಪನೀರ್, ರಾಜ್ ಸೇಕರ್, ಮಣಿಕಂಠನ್‌ಡಿ.(ಎಲ್ಲರೂ ಚೆನ್ನೈ) ಸೆಮಿ ಫೈನಲ್‌ಗೆ ತಲುಪಿದರು.

 ಮುಕ್ತ ವಿಭಾಗದಲ್ಲಿ ಕೇರಳದ ಅರೊವಿಲ್ ಸಮೈ ರೆವೋಲ್ ಹಾಗೂ ವರ್ಗೀಸ್, ಆರ್.ಗೋವಿಂದ್, ಸೇಕರ್ ಪಚೈ, ಧರಿಣಿೆ(ಎಲ್ಲರೂ ಚೆನ್ನೈ), ಕಿರಣ್ ಕುಮಾರ್ (ಮಂಗಳೂರು),ಬೆಲಿಝ್ ಪಿನೆಲ್, ಡಿಲ್ಲನ್ ಇಂಹೊಫ್(ಫ್ರಾನ್ಸ್), ಮಾರ್ಸೆಲ್ಲೊ(ಬ್ರೆಝಿಲ್),ಡಸ್ಟಿನ್ ಎಲ್ಲಿಸನ್(ಕ್ಯಾಲಿಫೋರ್ನಿಯ), ಡೇವಿಡ್ ಹರ್ನ್(ಆಸ್ಟ್ರೇಲಿಯ) ರವಿವಾರ ನಡೆಯಲಿರುವ ಸೆಮಿ ಫೈನಲ್‌ಗೆ ತೇರ್ಗಡೆಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X