Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಇಟಿ ಫಲಿತಾಂಶ ಪ್ರಕಟ: ಬೆಂಗಳೂರು,...

ಸಿಇಟಿ ಫಲಿತಾಂಶ ಪ್ರಕಟ: ಬೆಂಗಳೂರು, ದಕ್ಷಿಣ ಕನ್ನಡಕ್ಕೆ ಮೊದಲ ರ‍್ಯಾಂಕ್

ವಾರ್ತಾಭಾರತಿವಾರ್ತಾಭಾರತಿ29 May 2016 12:00 AM IST
share
ಸಿಇಟಿ ಫಲಿತಾಂಶ ಪ್ರಕಟ: ಬೆಂಗಳೂರು, ದಕ್ಷಿಣ ಕನ್ನಡಕ್ಕೆ ಮೊದಲ ರ‍್ಯಾಂಕ್

ಬೆಂಗಳೂರು, ಮೇ 28: ಸಾಮಾನ್ಯ ಪ್ರವೇಶ ಪರೀಕ್ಷೆಯ(ಸಿಇಟಿ) ಫಲಿತಾಂಶವು ಪ್ರಕಟ ಗೊಂಡಿದ್ದು, ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವಿಭಾಗಗಳಲ್ಲೂ ದಕ್ಷಿಣ ಕನ್ನಡ ಮತ್ತು ಬೆಂಗಳೂರಿನ ವಿದ್ಯಾರ್ಥಿಗಳು ಮೊದಲ  ರ‍್ಯಾಂಕ್ ಗಳನ್ನು ಪಡೆದಿದ್ದಾರೆ.

ದಂತ ವೈದ್ಯಕೀಯ, ಕೃಷಿ, ಪಶುಸಂಗೋಪನೆ ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಜಿ.ಅನಂತ್, ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ವಿವಿಎಸ್ ಸರ್ದಾರ್ ಪಟೇಲ್ ಪಿಯು ಕಾಲೇಜಿನ ಮಿಲಿಂದ್ ಕುಮಾರ್ ವಾದಿರಾಜ್ ಮೊದಲ ರ‍್ಯಾಂಕ್ ಪಡೆದಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.

ಸಿಇಟಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸಿಇಟಿ ರ್ಯಾಂಕ್‌ಪಟ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆಗೆ 1,71,868 ಅಭ್ಯರ್ಥಿಗಳು ಹಾಜರಾಗಿದ್ದರು. ಅವರಲ್ಲಿ ಹುಡುಗರು 88,342, ಹುಡುಗಿಯರು 83,526. ಇವರಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳಿಗೆ 41,530, ಭಾರತೀಯ ವೈದ್ಯ ಪದ್ಧತಿ ಹಾಗೂ ಹೋಮಿಯೋಪತಿಗೆ 99,791, ಎಂಜಿನಿಯರಿಂಗ್‌ಗೆ 1,27,576, ಆರ್ಕಿಟೆಕ್ಚರ್‌ಗೆ 1,395, ಕೃಷಿಗೆ 96,341, ಪಶುಸಂಗೋಪನೆಗೆ 99,788, ಬಿ.ಫಾರ್ಮಗೆ 1,31,324 ಅಭ್ಯರ್ಥಿಗಳಿಗೆ ರ್ಯಾಂಕ್‌ಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಜೂ.3ರಿಂದ ದಾಖಲಾತಿ ಪರಿಶೀಲನೆ: ಸಿಇಟಿಯಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್‌ಗಳಲ್ಲಿ ರ್ಯಾಂಕ್ ಪಡೆದ ಅಭ್ಯರ್ಥಿಗಳ ದಾಖಲಾತಿಯನ್ನು ಪರಿಶೀಲಿಸಲಾಗುವುದು. ರ್ಯಾಂಕ್ ನೀಡಿದ ಮಾತ್ರಕ್ಕೆ ಅಭ್ಯರ್ಥಿಗಳಿಗೆ ಸೀಟು ಹಂಚಿಕೆ ಮಾಡಿಕೊಳ್ಳುವ ಅರ್ಹತೆ ಬರುವುದಿಲ್ಲ. ದಾಖಲಾತಿ ಪರಿಶೀಲನೆಯ ನಂತರ ಅರ್ಹತೆಯನ್ನು ಪರಿಗಣಿಸಲಾಗುವುದು ಎಂದು ಸಚಿವ ಜಯಚಂದ್ರ ತಿಳಿಸಿದ್ದಾರೆ.
ದಾಖಲಾತಿ ಪರಿಶೀಲನೆಗೆ 15 ಕೇಂದ್ರಗಳು: ಸಿಇಟಿಯಲ್ಲಿ ರ್ಯಾಂಕ್ ಪಡೆದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯನ್ನು ದಾವಣಗೆರೆ, ಬಳ್ಳಾರಿ, ರಾಯಚೂರು, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಕಾರವಾರ, ಮಂಗಳೂರು, ಶಿವಮೊಗ್ಗ, ಹಾಸನ, ಮೈಸೂರು, ತುಮಕೂರು, ಬೀದರ್ ಹಾಗೂ ಬೆಂಗಳೂರಿನಲ್ಲಿ ನಡೆಯುವುದು.

ವೈದ್ಯಕೀಯ, ದಂತ ವೈದ್ಯಕೀಯ
-ಜಿ.ಅನಂತ್-ಮೊದಲ ರ್ಯಾಂಕ್(ಆಳ್ವಾಸ್ ಪಿಯು ಕಾಲೇಜು, ಮೂಡುಬಿದಿರೆ)
-ಸಂಜಯ್ ಎಂ.ಗೌಡರ್-ಎರಡನೆ ರ್ಯಾಂಕ್(ಶೇಷಾದ್ರಿಪುರಂ ಕಾಲೇಜು, ಬೆಂಗಳೂರು)
-ವಚನಾ ಶ್ರೀ ಪಾಟೀಲ್-ಮೂರನೆ ರ್ಯಾಂಕ್(ಶಾಹೀನ್ ಐಎನ್‌ಡಿಪಿ ಪಿಯು ಕಾಲೇಜು, ಬೀದರ್)

ಹೋಮಿಯೋಪತಿ
-ಸಂಜಯ್ ಎಂ.ಗೌಡರ್- ಮೊದಲ ರ್ಯಾಂಕ್(ಶೇಷಾದ್ರಿಪುರಂ ಕಾಲೇಜು, ಬೆಂಗಳೂರು)
-ವಚನಾ ಶ್ರೀ ಪಾಟೀಲ್ -ಎರಡನೆ ರ್ಯಾಂಕ್(ಶಾಹೀನ್ ಐಎನ್‌ಡಿಪಿ ಪಿಯು ಕಾಲೇಜು, ಬೀದರ್)
-ಜಿ.ಅನಂತ್-ಮೂರನೆ ರ್ಯಾಂಕ್(ಆಳ್ವಾಸ್ ಪಿಯು ಕಾಲೇಜು, ಮೂಡುಬಿದಿರೆ)

ಎಂಜಿನಿಯರಿಂಗ್
-ಮಿಲಿಂದ ಕುಮಾರ್ ವಾದಿರಾಜ್- ಮೊದಲ ರ್ಯಾಂಕ್(ವಿವಿಎಸ್ ಸರ್ದಾರ್ ಪಟೇಲ್ ಪಿಯು ಕಾಲೇಜು, ಬೆಂಗಳೂರು)
-ನಿರಂಜನ್ ಕಾಮತ್- ಎರಡನೆ ರ್ಯಾಂಕ್(ಎಕ್ಸ್‌ಪರ್ಟ್ ಪಿಯು ಕಾಲೇಜು, ಮಂಗಳೂರು)
-ದಿವ್ಯಾ ಎ.ಜಮಖಂಡಿ- ಮೂರನೆ ರ್ಯಾಂಕ್(ಕೆಎಲ್‌ಇಎಸ್ ಪಿಯು ಕಾಲೇಜು, ಬೆಂಗಳೂರು)

ಆರ್ಕಿಟೆಕ್ಚರ್
-ಸಿ.ಆರ್.ಮೃದುಲಾ-ಮೊದಲ ರ್ಯಾಂಕ್(ಸಿಎಂಆರ್ ನ್ಯಾಷನಲ್ ಪಬ್ಲಿಕ್ ಕಾಲೇಜು, ಬೆಂಗಳೂರು)
-ಐಶ್ವರ್ಯ ಮಹದೇವನ್-ಎರಡನೆ ರ್ಯಾಂಕ್(ದ ಅಮೃತಾ ಅಕಾಡಮಿ, ಬೆಂಗಳೂರು)
-ನೇಹಾ ಸರಹ ಅಬ್ರಹಾಂ-ಮೂರನೆ ರ್ಯಾಂಕ್(ಸೋಫಿಯಾ ಹೈಸ್ಕೂಲ್, ಬೆಂಗಳೂರು)
ಕೃಷಿ
-ಜಿ.ಅನಂತ್-ಮೊದಲ ರ್ಯಾಂಕ್(ಆಳ್ವಾಸ್ ಪಿಯು ಕಾಲೇಜು, ಮೂಡುಬಿದಿರೆ)
-ಎಚ್.ಎಲ್.ಪ್ರವೀಣ್ ರಾಜ್-ಎರಡನೆ ರ್ಯಾಂಕ್(ಮಾಸ್ಟರ್ಸ್‌ ಪಿಯು ಕಾಲೇಜು, ಹಾಸನ)
-ಸಂಪತ್ ಕೋಟಿ-ಮೂರನೆ ರ್ಯಾಂಕ್(ವಿದ್ಯಾಮಂದಿರ್ ಪಿಯು ಕಾಲೇಜು, ಬೆಂಗಳೂರು)

ಪಶುಸಂಗೋಪನೆ
-ಜಿ.ಆನಂತ್-ಮೊದಲ ರ್ಯಾಂಕ್(ಆಳ್ವಾಸ್ ಪಿಯು ಕಾಲೇಜು, ಮೂಡಬಿದರೆ)
-ಸಂಜಯ್ ಎಂ.ಗೌಡರ್-ಎರಡನೆ ರ್ಯಾಂಕ್(ಶೇಷಾದ್ರಿಪುರಂ ಪಿಯು ಕಾಲೇಜು, ಬೆಂಗಳೂರು)
ವಚನಾ ಶ್ರೀ ಪಾಟೀಲ್-ಮೂರನೆ ರ್ಯಾಂಕ್(ಶಾಹೀನ್ ಐಎನ್‌ಡಿಪಿ ಪಿಯು ಕಾಲೇಜು, ಬೀದರ್)

ಬಿ.ಫಾರ್ಮ
-ಮಿಲಿಂದ್ ಕುಮಾರ್ ವಾದಿರಾಜ್-ಮೊದಲ ರ್ಯಾಂಕ್(ವಿವಿಎಸ್ ಸರ್ದಾರ್ ಪಟೇಲ್ ಪಿಯು ಕಾಲೇಜು, ಬೆಂಗಳೂರು)
-ನಿರಂಜನ್ ಕಾಮತ್-ಎರಡನೆ ರ್ಯಾಂಕ್(ಎಕ್ಸ್‌ಪರ್ಟ್ ಪಿಯು ಕಾಲೇಜು, ಮಂಗಳೂರು)
-ಆರ್.ರಾಹುಲ್-ಮೂರನೆ ರ್ಯಾಂಕ್(ಆರ್‌ವಿ ಪಿಯು ಕಾಲೇಜು, ಬೆಂಗಳೂರು)

ಮೊದಲ 5 ರ‍್ಯಾಂಕ್ ಗಳಿಗೆ ಉಚಿತ ಸೀಟು

ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ಕೋರ್ಸ್‌ಗಳಲ್ಲಿ ಮೊದಲ ಐದು ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಸೀಟು ಕೊಡ ಲಾಗುವುದು. ಈ ವಿದ್ಯಾರ್ಥಿಗಳು ಕೋರ್ಸ್ ಮುಗಿಯುವರೆಗೂ ಯಾವುದೇ ಶುಲ್ಕವನ್ನು ಕಟ್ಟಬೇಕಾಗಿರುವುದಿಲ್ಲ. ಪ್ರತಿಯೊಂದು ಖರ್ಚು ವೆಚ್ಚವನ್ನು ಸರಕಾರವೇ ಭರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X