Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ಯಾಂಕ್ ವಿರುದ್ಧ ಭಾರತೀಯ ದಂಪತಿಯಿಂದ...

ಬ್ಯಾಂಕ್ ವಿರುದ್ಧ ಭಾರತೀಯ ದಂಪತಿಯಿಂದ 10,082 ಕೋಟಿ ಪರಿಹಾರ ದಾವೆ

ಆಸ್ಟ್ರೇಲಿಯ ಇತಿಹಾಸದ ಅತಿ ದೊಡ್ಡ ಪರಿಹಾರ ಮೊಕದ್ದಮೆ

ವಾರ್ತಾಭಾರತಿವಾರ್ತಾಭಾರತಿ30 May 2016 7:54 PM IST
share
ಬ್ಯಾಂಕ್ ವಿರುದ್ಧ ಭಾರತೀಯ ದಂಪತಿಯಿಂದ 10,082 ಕೋಟಿ ಪರಿಹಾರ ದಾವೆ

ಮೆಲ್ಬರ್ನ್, ಮೇ 30: ಆಸ್ಟ್ರೇಲಿಯದ ಭಾರತೀಯ ಮೂಲದ ದಂಪತಿಯೊಂದು ಎಎನ್‌ಝಡ್ ಬ್ಯಾಂಕ್‌ನಿಂದ 150 ಕೋಟಿ ಡಾಲರ್ (ಸುಮಾರು 10,082 ಕೋಟಿ ರೂಪಾಯಿ) ಪರಿಹಾರ ಕೋರಿ ಇಂದು ನ್ಯಾಯಾಲಯದ ಮೆಟ್ಟಿಲು ಹತ್ತಿದೆ. ಇದು ಆಸ್ಟ್ರೇಲಿಯದ ನ್ಯಾಯಾಂಗ ಇತಿಹಾಸದಲ್ಲೇ ಪರಿಹಾರ ಕೋರಿ ಹೂಡಲಾದ ಅತಿ ದೊಡ್ಡ ದಾವೆಯಾಗಿದೆ.

ಸಾಲ ವಸೂಲಾತಿಯ ವೇಳೆ, ತನ್ನ ರಸಗೊಬ್ಬರ ಕಂಪೆನಿಯ ಶೇರುಗಳಿಗೆ ಕಡಿಮೆ ಬೆಲೆ ನಿಗದಿಪಡಿಸಿ ಹೆಚ್ಚು ಸಾಲವನ್ನು ಬ್ಯಾಂಕ್ ವಸೂಲು ಮಾಡಿದೆ ಎಂದು ಈ ದಂಪತಿ ಆರೋಪಿಸಿದೆ.

ಪಂಕಜ್ ಮತ್ತು ರಾಧಿಕಾ ಓಸ್ವಾಲ್ ವಿಕ್ಟೋರಿಯ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ. ವೆಸ್ಟರ್ನ್ ಆಸ್ಟ್ರೇಲಿಯದಲ್ಲಿರುವ ಓಸ್ವಾಲ್ ದಂಪತಿಯ ಕಂಪೆನಿ ಬಾರುಪ್ ಫರ್ಟಿಲೈಝರ್ಸ್‌ನ್ನು 2010ರಲ್ಲಿ ರಿಸೀವರ್‌ಗಳು ಮುಟ್ಟುಗೋಲು ಹಾಕಿದ ಬಳಿಕ ಕಂಪೆನಿಯನ್ನು ಮಾರಾಟ ಮಾಡುವಂತೆ ಒತ್ತಡ ಹೇರಲಾಗಿತ್ತು ಎನ್ನುವುದು ಮೊಕದ್ದಮೆಯ ಪ್ರಮುಖ ಅಂಶವಾಗಿದೆ.

ಆಸ್ಟ್ರೇಲಿಯ ಆ್ಯಂಡ್ ನ್ಯೂಝಿಲ್ಯಾಂಡ್ ಬ್ಯಾಂಕಿಂಗ್ ಗ್ರೂಪ್ (ಎಎನ್‌ಎಝ್) ಮತ್ತು ರಿಸೀವರ್ ಪಿಪಿಬಿ ತಮ್ಮ ರಸಗೊಬ್ಬರ ಉದ್ಯಮದ ಶೇರುಗಳಿಗೆ 150 ಕೋಟಿ ಡಾಲರ್‌ನಷ್ಟು ಕಡಿಮೆ ವೌಲ್ಯ ನಿಗದಿಪಡಿಸಿವೆ ಎಂದು ದಂಪತಿ ಆರೋಪಿಸಿದ್ದಾರೆ.

2010ರಲ್ಲಿ ಎಎನ್‌ಝಡ್ ಬ್ಯಾಂಕ್ ಬಾರುಪ್ ಕಂಪೆನಿಗಳ ಸಮೂಹಕ್ಕೆ ರಿಸೀವರ್‌ಗಳನ್ನು ನೇಮಿಸಿತ್ತು.

ಬಾರುಪ್ ಹೋಲ್ಡಿಂಗ್ಸ್‌ನಲ್ಲಿ ತಾವು ಹೊಂದಿದ್ದ 65 ಶೇಕಡ ಶೇರುಗಳನ್ನು 2012ರಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಲಾಗಿತ್ತು ಎಂದು ಒಸ್ವಾಲ್ಸ್ ದಂಪತಿ ಆರೋಪಿಸಿದ್ದಾರೆ.

ಕಂಪೆನಿಯ ಆಧಾರದಲ್ಲಿ ತಾವು ಪಡೆದುಕೊಂಡಿದ್ದ 90 ಕೋಟಿ ಡಾಲರ್ (ಸುಮಾರು 6,050 ಕೋಟಿ ರೂಪಾಯಿ) ಸಾಲವನ್ನು ವಸೂಲು ಮಾಡುವುದಕ್ಕಾಗಿ ಎಎನ್‌ಝಡ್ ಬ್ಯಾಂಕ್, ಬಾರುಪ್‌ನಲ್ಲಿ ತಾವು ಹೊಂದಿದ್ದ ಶೇರುಗಳನ್ನು ಕಡಿಮೆ ಬೆಲೆಗೆ ಮಾರಲಾಗಿತ್ತು ಎಂದು ಹೇಳಿದ್ದಾರೆ. ವಾಸ್ತವವಾಗಿ ತಮ್ಮ ಶೇರುಗಳು 250 ಕೋಟಿ ಡಾಲರ್ (16,804 ಕೋಟಿ ರೂಪಾಯಿ) ಬೆಲೆ ಬಾಳುತ್ತಿದ್ದವು ಎಂದು ಅವರು ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X