Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯಲ್ಲಿ ಮುಂಗಾರು ಪೂರ್ವ ಮಳೆಯ...

ದಿಲ್ಲಿಯಲ್ಲಿ ಮುಂಗಾರು ಪೂರ್ವ ಮಳೆಯ ರೌದ್ರಾವತಾರ

ಮಗು ಬಲಿ-ಸಿಲುಕಿದ ಪ್ರಧಾನಿ-ವಿಮಾನ ಸಂಚಾರ ವ್ಯತ್ಯಯ

ವಾರ್ತಾಭಾರತಿವಾರ್ತಾಭಾರತಿ30 May 2016 8:21 PM IST
share
ದಿಲ್ಲಿಯಲ್ಲಿ ಮುಂಗಾರು ಪೂರ್ವ ಮಳೆಯ ರೌದ್ರಾವತಾರ

ಹೊಸದಿಲ್ಲಿ, ಮೇ 30: ನಿನ್ನೆ ರಾತ್ರಿಯಿಡೀ ಸುರಿದ ಗುಡುಗು ಸಹಿತ ಭಾರೀ ಮಳೆಗೆ ಮನೆಯೊಂದರ ಛಾವಣಿ ಕುಸಿದು ಮಗುವೊಂದು ಅಸು ನೀಡಿದೆ. ಮುಂಗಾರು ಪೂರ್ವ ಮಳೆಯು ಉತ್ತರ ಭಾರತದಾದ್ಯಂತ ಜನ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ವಿಮಾನಗಳ ಸಂಚಾರಕ್ಕೆ ಅಡಚಣೆಯಾಗಿದೆ. ವಿಮಾನ ನಿಲ್ದಾಣಗಳು ಜಿಲಾವೃತವಾಗಿವೆ. ಪ್ರಧಾನಿ ನರೇಂದ್ರ ಮೋದಿ ಜೈಪುರ ವಿಮಾನ ನಿಲ್ದಾಣದಲ್ಲಿ ಒಂದು ತಾಸಿಗೂ ಹೆಚ್ಚುಕಾಲ ಸಿಲುಕಿಕೊಂಡರು.

ಉತ್ತರ ಭಾರತದ ಕೆಲವು ಭಾಗಗಳಲ್ಲಿ 50 ಡಿಗ್ರಿ ಸೆಂಟಿಗ್ರೆಡ್ ತಲುಪಿದ್ದ ಭಾರೀ ತಾಪಮಾನದಿಂದ ಈ ಮುಂಗಾರು ಪೂರ್ವ ಮಳೆ ಮುಕ್ತಿ ನೀಡಿದೆಯಾದರೂ, ಸಾವು ಹಾಗೂ ವಿನಾಶವನ್ನೂ ಉಂಟು ಮಾಡಿದೆ. ಭಾರೀ ಮಳೆಯಿಂದಾದ ಭೂ ಕುಸಿತದಿಂದ ಕಳೆದ 48 ತಾಸುಗಳಲ್ಲಿ ಉತ್ತರಾಖಂಡದಲ್ಲಿ ಕನಿಷ್ಠ ಐವರು ಸಾವಿಗೀಡಾಗಿದ್ದಾರೆ.

ದಿಲ್ಲಿಯ ಮೋತಿಯಾಖಾನ್ ಪ್ರದೇಶದಲ್ಲಿ ನಿದ್ರಿಸುತ್ತಿದ್ದವರ ಮೇಲೆ ಛಾವಣಿಯ ತಗಡು ಬಿದ್ದು ಎರಡುವರೆ ವರ್ಷದ ಮಗುವೊಂದು ಮೃತಪಟ್ಟಿದೆಯೆಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಹೆಚ್ಚಿನ ವಿವರ ಲಬ್ಯವಾಗಿಲ್ಲ.

ಚಾಂದನಿ ಚೌಕ್‌ನ ಫತೇಪುರಿ ಪ್ರದೇಶದಲ್ಲಿ ಅಂಚೆಕಚೇರಿಯೊಂದರ ಗೋಡೆ ಕುಸಿದು ಬಿದ್ದು. ಹಲವು ವಾಹನಗಳು ಜಗರಿಗೊಂಡಿವೆ.

ಗುಜರಾತ್‌ನಿಂದ ತೇವದಿಂದ ಕೂಡಿದ ಗಾಳಿ ಹಾಗೂ ಬಂಗಾಕೊಲ್ಲಿಯಿಂದ ಬೀಸುವ ಪೂರ್ವ ಮಾರುತದಿಂದಾಗಿ ಹವಾಮಾನ ವೈಪರೀತ್ಯ ಉಂಟಾಗಿ ಬಿರುಗಾಳಿಯಿಂದ ಕೂಡಿದ ಗುಡುಗು ಸಹಿತ ಮಳೆ ಸುರಿಯಬಹುದೆಂಬ ಎಚ್ಚರಿಕೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ.

ಈ ರೀತಿ ಸಾಮಾನ್ಯವಾಗಿ ಆಗುವುದಿಲ್ಲವೆಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಬಿ.ಪಿ.ಯಾದವ್ ತಿಳಿಸಿದ್ದಾರೆ.

ದಿಲ್ಲಿಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಪ್ರಧಾನಿಯ ವಿಮಾವವನ್ನು ಅನಿವಾರ್ಯವಾಗಿ ಜೈಪುರದಲ್ಲಿ ಇಳಿಸಿಬೇಕಾಯಿತು. ಅವರು ಒಂದು ತಾಸಿಗಿಂತಲೂ ಹೆಚ್ಚುಕಾಲ ಟಾರ್‌ಮ್ಯಾಕ್‌ನಲ್ಲೇ ಕಾಯಬೇಕಾಯಿತು. ಅಂತಿಮವಾಗಿ ಮಧ್ಯರಾತ್ರಿಯ ಬಳಿಕ ವಿಮಾನ ದಿಲ್ಲಿಯಲ್ಲಿಳಿಯಿತು.

 ಮಧ್ಯರಾತ್ರಿಯ ಬಳಿಕದ 2 ಗಂಟೆಯವರೆಗೆ ದಿಲ್ಲಿಯಲ್ಲಿಳಿಯ ಬೇಕಾಗಿದ್ದ ಕನಿಷ್ಠ 40 ವಿಮಾನಗಳನ್ನು ಬೇರಡೆಗೆ ಕಳುಹಿಸ ಬೇಕಾಯಿತೆಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

ನೆವಾರ್ಕ್‌ನಿಂದ ದಿಲ್ಲಿಗೆ ಆಗಮಿಸುತ್ತಿದ್ದ ಯುನೈಟೆಡ್ ಏರ್‌ಲೈನ್ಸ್‌ನ ವಿಮಾನವೊಂದನ್ನು ಪ್ರತಿಕೂಲ ಹವಾಮಾನದ ಕಾರಣ ಮುಂಬೈಗೆ ಕಳುಹಿಸಲಾಯಿತು. ಅದರೊಳಗಿದ್ದ ಸುಮಾರು 300 ಪ್ರಯಾಣಿಕರು ವಿಮಾನದಲ್ಲೇ ರಾತ್ರಿಯನ್ನು ಕಳೆದರು.

ರಾತ್ರಿಯಿಡೀ ಸುರಿದ ಮಳೆ ಅಮೃತಸರ ಮಳೆ ಅಮೃತಸರ ವಿಮಾನ ನಿಲ್ದಾಣದಲ್ಲಿ ಅನೇಕ ಸಣ್ಣ ವಿಮಾನಗಳಿಗೆ ಹಾನಿ ಮಾಡಿದೆ. ನಿರ್ಗಮನ ಲಾಂಜ್ ನೀರಿನಿಂದ ತುಂಬಿತ್ತೆಂದು ಅಧಿಕಾರಿಗಳು ತಿಳಿಸಿದ್ದಾರೆ.

ದಿಲ್ಲಿಯಲ್ಲಿ ಗಾಳಿ ಸಹಿತ ಮಳೆಯಿಂದಾಗಿ ಹಲವಾರು ಮರಗಳು ಉರುಳಿ ಬಿದ್ದು, ಪ್ರಧಾನ ರಸ್ತೆಗಳಲ್ಲಿ ತಡೆಯಾಗಿದೆ. ಇದರಿಂದ ಭಾರೀ ವಾಹನ ಜಂಗುಳಿಯುಂಟಾಗಿ ಜನರು ಕಚೇರಿ ಹಾಗೂ ಕೆಲಸ ಕಾರ್ಯಗಳಿಗೆ ಹೋಗಲು ಪರದಾಡುವಂತಾಯಿತು.

ಮುಂಜಾನೆ 8:30ರವರೆಗೆ ಸಫ್ದರ್ ಜಂಗ್‌ನಲ್ಲಿ 0.4 ಮೀ.ಮೀ. ಪಾಲಂನಲ್ಲಿ 3.2 ಮೀ.ಮೀ. ರಿಜ್‌ನಲ್ಲಿ 0.4 ಮೀ.ಮೀ. ಹಾಗೂ ಆಯ ನಗರದಲ್ಲಿ 3 ಮೀ.ಮೀ ಮಳೆ ದಾಖಲಾಗಿದೆಯೆಂದು ಹವಾಮಾನ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಿಲ್ಲಿ-ಗುರ್ಗಾಂವ್ ಎಕ್ಸ್‌ಪ್ರೆಸ್ ವೇ, ಹಳೆ ದಿಲ್ಲಿ-ಗುರ್ಗಾಂವ್ ರಸ್ತೆ, ಸೆಕ್ಟರ್ 22/23 ರಸ್ತೆ; ಪಾಲಂವಿಹಾರ್ ಹಾಗೂ ಹಳೆ ಗುರ್ಗಾಂವ್‌ನ ಅನೇಕ ಕಡೆಗಳಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಹಳೆ ಹಾಗೂ ಹೊಸ ಗುರ್ಗಾಂವ್‌ನ ಅನೇಕ ಕಡೆಗಳಲ್ಲಿ ವಿದ್ಯುತ್ ವೈಫಲ್ಯ ಉಂಟಾಗಿತ್ತು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X