Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಕ್ಷಣಾ ಉತ್ಪಾದನೆ ಕ್ಷೇತ್ರದತ್ತ...

ರಕ್ಷಣಾ ಉತ್ಪಾದನೆ ಕ್ಷೇತ್ರದತ್ತ ರಿಲಯನ್ಸ್ ಹೆಜ್ಜೆ

ವಾರ್ತಾಭಾರತಿವಾರ್ತಾಭಾರತಿ30 May 2016 8:46 PM IST
share
ರಕ್ಷಣಾ ಉತ್ಪಾದನೆ ಕ್ಷೇತ್ರದತ್ತ ರಿಲಯನ್ಸ್ ಹೆಜ್ಜೆ

ಹೊಸದಿಲ್ಲಿ/ಮುಂಬೈ, ಮೇ 30: ಅನಿಲ್ ಅಂಬಾನಿಯವರ ರಿಲಯನ್ಸ್ ಗುಂಪು ತನ್ನ ಚರಿತ್ರೆಯಲ್ಲೇ ಸೇನಾ ಹೆಲಿಕಾಪ್ಟರ್, ಕ್ಷಿಪಣಿ ವ್ಯವಸ್ಥೆ ಅಥವಾ ಜಲಾಂತರ್ಗಾಮಿಗಳನ್ನು ನಿರ್ಮಿಸಿಲ್ಲ. ಆದರೆ, ಇದು ಇಂತಹ ಎಲ್ಲ ಸೇನಾ ಪರಿಕರಗಳ ಉತ್ಪಾದನೆಯ ಗುತ್ತಿಗೆಗಳನ್ನು ಗೆಲ್ಲುವ ಭಾರತೀಯ ಉದ್ಯಮಿಯ ಆಸೆಗೆ ತಡೆಯಾಗಿಲ್ಲ.
ಕಳೆದ ದಶಕದಲ್ಲಿ ಹಲವು ಸಾಹಸಗಳಿಗೆ ಕೈಹಾಕಿದ್ದ ಹಾಗೂ ಕೆಲವದರಲ್ಲಿ ವಿಫಲರಾಗಿದ್ದ ಅಂಬಾನಿ, ರಿಲಯನ್ಸನ್ನು ಭಾರೀ ರಕ್ಷಣಾ ಉತ್ಪಾದನೆ ಕಂಪೆನಿಯನ್ನಾಗಿ ಪರಿವರ್ತಿಸುವ ಧೈರ್ಯದ ಹೆಜ್ಜೆಯಿರಿಸಿದ್ದಾರೆ. ಅದು ಈಗಾಗಲೇ ರೂ. 840 ಶತಕೋಟಿಯ ಸರಕಾರಿ ಗುತ್ತಿಗೆಗಳಿಗೆ ಬಿಡ್ ಸಲ್ಲಿಸಿದೆ. ಆದರೆ, ಅವುಗಳಲ್ಲಿ ಯಾವುದನ್ನೂ ಇದುವರೆಗೆ ಗೆದ್ದಿಲ್ಲವೆಂದು ಹಿರಿಯ ಕಾರ್ಯವಾಹಿಯೊಬ್ಬರು ತಿಳಿಸಿದ್ದಾರೆ.
 ಆದರೆ, ಅವರ ಕಾರ್ಯವ್ಯೆದ ಯಶಸ್ಸು, ತಾನು ಅತ್ಯಾಧುನಿಕ ಉಪಕರಣಗಳನ್ನು ತಯಾರಿಸಬಲ್ಲೆನೆಂಬುದನ್ನು ಸರಕಾರಿ ಅಧಿಕಾರಿಗಳು ಹಾಗೂ ಅಂತಾರಾಷ್ಟ್ರೀಯ ಪಾಲುದಾರರ ಮನವೊಲಿಸುವ ಸಾಮರ್ಥ್ಯವನ್ನು ಭಾಗಶಃ ಅವಲಂಬಿಸಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಭಾರತದ ಕುಖ್ಯಾತ ನಿಧಾನಗತಿಯ ರಕ್ಷಣಾ ಖರೀದಿ ಪ್ರಕ್ರಿಯೆಗೆ ವೇಗ ನೀಡುವರೇ ಎಂಬುದು ಸಹ ಅದರ ನಿರ್ಧಾರಕವಾಗಿದೆ.
ಪ್ರಧಾನಿ ಮೋದಿ ತನ್ನ ‘ಮೇಕ್ ಇನ್ ಇಂಡಿಯಾ’ ಯೋಜನೆಯಲ್ಲಿ ರಕ್ಷಣಾ ಉಪಕರಣಗಳಿಗೆ ಆದ್ಯತೆ ನೀಡಿದ್ದಾರೆ. ಸ್ಥಳೀಯ ಪಾಲುದಾರರನ್ನು ಪಡೆದು, ತಂತ್ರಜ್ಞಾನ ವರ್ಗಾವಣೆ ಮಾಡಿ, ಕೆಲವು ಉತ್ಪಾದನೆಗಳನ್ನು ಭಾರತಕ್ಕೆ ನೀಡುವಂತೆ ಅವರು ವಿದೇಶಿ ಕಂಪೆನಿಗಳನ್ನು ಒತ್ತಾಯಿಸಿದ್ದಾರೆ.
ಮುಂದಿನ 10 ವರ್ಷಗಳಲ್ಲಿ ಸರಕಾರವು ಸೇನೆಯ ಬಲವರ್ಧನೆಗಾಗಿ 250 ಶತಕೋಟಿ ಡಾಲರ್‌ಗಳ ರಕ್ಷಣಾ ಗುತ್ತಿಗೆಗಳನ್ನು ನೀಡುವ ನಿರೀಕ್ಷೆಯಿದೆ. ಅದರಲ್ಲಿ ಗಣನೀಯ ಭಾಗ ತಮಗೆ ದೊರೆಯಬಹುದೆಂಬ ಆಶಾವಾದವಿದೆಯೆಂದು ರಿಲಯನ್ಸ್ ಡಿಫೆನ್ಸ್‌ನ ಮುಖ್ಯ ಕಾರ್ಯಕಾರಿ ಆರ್.ಕೆ. ಧಿಂಗ್ರಾ ಹೇಳಿದ್ದಾರೆ.
ಆದರೆ, ಈ ವಿಭಾಗದಲ್ಲಿ ಬೇಗನೆ ಹಣವಾಗುವುದಿಲ್ಲ. ಅದಕ್ಕೆ ಅಪಾರ ಅನುಭವ, ಉನ್ನತಿ ತಾಂತ್ರಿಕ ಸಂಸ್ಕೃತಿ, ಬಂಡವಾಳ ಹಾಗೂ ದೀರ್ಘಾವಧಿ ವ್ಯವಹಾರ ಯೋಜನೆ ಬೇಕೆಂದು ಸಾಬ್ ಇಂಡಿಯಾ ಟೆಕ್ನಾಲಜೀಸ್‌ನ ಮುಖ್ಯಸ್ಥ ಜಾನ್ ವೈಡರ್ ಸ್ಟ್ರೋಮ್ ಅಭಿಪ್ರಾಯಿಸಿದ್ದಾರೆ.
ಆದರೂ, ಸಾಬ್ ಹಾಗೂ ರಿಲಯನ್ಸ್, ಭಾರತೀಯ ಜಲಸೇನೆ ಹಾಗೂ ತಟ ರಕ್ಷಕ ಪಡೆಗಾಗಿ ಮುಂದಿನ ತಲೆಮಾರಿನ ಯುದ್ಧ ಪ್ರಬಂಧನ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಒಟ್ಟಾಗಿ ಕೆಲಸ ಮಾಡುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X