Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರ್ಥಿಕ ನೀತಿಗಳ ವಿರುದ್ಧ ಹೋರಾಡಲು ವಸಂತ...

ಆರ್ಥಿಕ ನೀತಿಗಳ ವಿರುದ್ಧ ಹೋರಾಡಲು ವಸಂತ ಆಚಾರಿ ಕರೆ

ಸಿಐಟಿಯು 2ನೆ ಮಂಗಳೂರು ನಗರ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ30 May 2016 9:25 PM IST
share
ಆರ್ಥಿಕ ನೀತಿಗಳ ವಿರುದ್ಧ ಹೋರಾಡಲು ವಸಂತ ಆಚಾರಿ ಕರೆ

ಮಂಗಳೂರು, ಮೇ 30: ಕೇಂದ್ರ ಸರಕಾರವು ಕಾರ್ಮಿಕರ ಪರವಾದ ಕಾನೂನುಗಳನ್ನು ದುರ್ಬಲಗೊಳಿಸಿ, ಮಾಲಕರು ಹಾಗೂ ಬಂಡವಾಳಶಾಹಿಗಳ ಪರವಾದ ನೀತಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆಯೇರಿಕೆಗೆ ಅವಕಾಶ ಮಾಡಿಕೊಟ್ಟಿದೆ. ಕಾರ್ಮಿಕ ಪರವಾದ 44 ಕಾನೂನುಗಳನ್ನು 6 ಘಟಕಗಳಲ್ಲಿ ಸಂಯೋಜಿಸಿ ಮಾಲಕರ ಪರವಾಗಿ ತಿದ್ದುಪಡಿಗೊಳಿಸಲಾಗುತ್ತಿದೆ. ಪ್ರೊವಿಡೆಂಟ್ ಫಂಡ್ ರದ್ದುಗೊಳಿಸಿ, ಅಭದ್ರ ನೂತನ ಪಿಂಚಣಿ ಯೋಜನೆಯನ್ನು ಕಾರ್ಮಿಕರಿಗೆ ಜಾರಿಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಸಿಐಟಿಯು ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಆಚಾರಿ ಹೇಳಿದ್ದಾರೆ.

ಅವರು ಮಂಗಳೂರಿನ ಬೋಳಾರ ಟೈಲ್ ವರ್ಕರ್ಸ್ ಯೂನಿಯನ್ ಸಭಾಂಗಣದ ಕಾಂ.ರಾಮಚಂದ್ರ ಬೋಳಾರ ವೇದಿಕೆಯಲ್ಲಿ ಜರಗಿದ ಸಿಐಟಿಯು 2ನೆ ಮಂಗಳೂರು ನಗರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಎರಡು ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಸರಕಾರವು ಹಿಂದಿನ ಸರಕಾರದ ಆರ್ಥಿಕ ನೀತಿಗಳನ್ನು ಸಂಪೂರ್ಣವಾಗಿ ಕೈಬಿಡುವುದಾಗಿಯೂ, ಕಾರ್ಮಿಕರ ಹಾಗೂ ಬಡಜನರ ಪರವಾದ ಆಡಳಿತ ನಡೆಸುವುದಾಗಿ ಭರವಸೆ ನೀಡಿದ್ದರು. ಆದರೆ ಹಿಂದಿನ ಕಾಂಗ್ರೆಸ್ ಸರಕಾರದ ನವಉದಾರವಾದೀ ನೀತಿಗಳನ್ನು ಈಗಿನ ಕೇಂದ್ರ ಸರಕಾರ ಜಾರಿ ಮಾಡುತ್ತಿದೆ ಎಂದರು.

ಸರಕಾರಗಳು ಜನತೆಗೆ ನೀಡುವ ವಿವಿಧ ಸಬ್ಸಿಡಿಗಳನ್ನು ನಿಲ್ಲಿಸಬೇಕು. ಕಾರ್ಮಿಕರಿಗೆ ನೀಡುವ ಸಾಮಾಜಿಕ ಭದ್ರತೆಯನ್ನು ಅನುತ್ಪಾದಕ ವೆಚ್ಚ ಎಂದು ಪರಿಗಣಿಸಿ ಅದನ್ನು ಕೈಬಿಡಲು ಒತ್ತಾಯಿಸುತ್ತದೆ. ಈ ನೀತಿಗಳಿಂದಾಗಿ ದೇಶದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ. ಬೆಲೆಯೇರಿಕೆಗೆ ನಿಯಂತ್ರಣವಿಲ್ಲ. ಕಾರ್ಮಿಕ ವರ್ಗ ಇಂಥ ನೀತಿಗಳ ವಿರುದ್ಧ ಹೋರಾಡುತ್ತಿರುವಾಗ, ಸರಕಾರಗಳು ಕಾರ್ಮಿಕರ ಮೇಲೆ ಹಲವು ರೀತಿಯಲ್ಲಿ ದಾಳಿ ಮಾಡುತ್ತಿದೆ ಎಂದು ಅವರು ಎಚ್ಚರಿಕೆ ನೀಡಿದರು.

ನಿಜವಾಗಿ ಬಹುಸಂಖ್ಯಾತರಾಗಿರುವ ಕಾರ್ಮಿಕರು ಒಗ್ಗೂಡುವುದನ್ನು ಆಳುವ ಕೇಂದ್ರ ಸರಕಾರ ಸಹಿಸುತ್ತಿಲ್ಲ. ಹಾಗಾಗಿ ಹಿಂದುತ್ವದ ವಿಚಾರವನ್ನು ವಿಶೇಷವಾಗಿ ಪ್ರಚಾರಗೊಳಿಸಿ, ಕಾರ್ಮಿಕರ ಒಗ್ಗಟ್ಟನ್ನು ಮುರಿಯಲು ಯತ್ನಿಸಲಾಗುತ್ತಿದೆ. ಕಾರ್ಮಿಕ ವರ್ಗವನ್ನು ರಾಷ್ಟ್ರ ವಿರೋಧಿಗಳೆಂದೂ, ಹಿಂದುತ್ವವಾದಿಗಳನ್ನು ರಾಷ್ಟ್ರಪ್ರೇಮಿಗಳೆಂದೂ ನಿರೂಪಿಸಲಾಗುತ್ತಿದೆ. ಕಾರ್ಮಿಕರ ಒಗ್ಗಟ್ಟನ್ನು ಮುರಿಯುವ, ಕಾರ್ಮಿಕ ಕಾನೂನುಗಳನ್ನು ದುರ್ಬಲಗೊಳಿಸುವ ಕೇಂದ್ರ ಸರಕಾರದ ನೀತಿಗಳ ವಿರುದ್ಧ ತೀವ್ರ ಥರದ ಹೋರಾಟವನ್ನು ಕಾರ್ಮಿಕ ವರ್ಗ ನಡೆಸಬೇಕಾಗುತ್ತದೆ ಎಂದು ವಸಂತ ಆಚಾರಿ ಹೇಳಿದರು.

ಸಪ್ಟೆಂಬರ್ 2ರಂದು ಅಖಿಲ ಭಾರತ ಮುಷ್ಕರವನ್ನು ಕಾರ್ಮಿಕ ಸಂಘಟನೆಗಳು ಸಂಯುಕ್ತವಾಗಿ ಹಮ್ಮಿಕೊಂಡಿದ್ದು, ಮಂಗಳೂರು ನಗರದ ಕಾರ್ಮಿಕ ಸಂಘಟನೆಗಳು ಈ ಮುಷ್ಕರವನ್ನು ಯಶಸ್ವಿಗೊಳಿಸಿ, ಕೇಂದ್ರ ಸರಕಾರ ತನ್ನ ಕಾರ್ಮಿಕ ವಿರೋಧಿ ನೀತಿಯನ್ನು ಕೈಬಿಡುವಂತೆ ಮಾಡಲು ವಸಂತ ಆಚಾರಿ ಕರೆ ನೀಡಿದರು.

ಸಮ್ಮೇಳನದ ಅಧ್ಯಕ್ಷತೆಯನ್ನು ಸಿಐಟಿಯು ನಗರ ಅಧ್ಯಕ್ಷರಾದ ಜಯಂತಿ ಬಿ. ಶೆಟ್ಟಿ ಅವರು ವಹಿಸಿದ್ದರು.

ಸಿಐಟಿಯು ನಗರ ಸಮಿತಿಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಮುಖಂಡರಾದ ಬಾಬು ದೇವಾಡಿಗ, ಭಾರತಿ ಬೋಳಾರ, ಯೋಗೀಶ್ ಜಪ್ಪಿನಮೊಗರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X