Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಎಂ ಕ್ಲಾಸ್ ತೆಗೆದುಕೊಳ್ಳಲು ನಾನೇನು...

ಸಿಎಂ ಕ್ಲಾಸ್ ತೆಗೆದುಕೊಳ್ಳಲು ನಾನೇನು ಮಗುವಲ್ಲ : ಶಾಸಕ ಮೊಯ್ದಿನ್ ಬಾವ

ವಾರ್ತಾಭಾರತಿವಾರ್ತಾಭಾರತಿ1 Jun 2016 7:15 PM IST
share
ಸಿಎಂ ಕ್ಲಾಸ್ ತೆಗೆದುಕೊಳ್ಳಲು ನಾನೇನು ಮಗುವಲ್ಲ : ಶಾಸಕ ಮೊಯ್ದಿನ್ ಬಾವ

ಮಂಗಳೂರು, ಜೂ.1: ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿರುವ ಸಹೋದರ ಬಿ.ಎಂ. ಫಾರೂಕ್ ಕುರಿತಂತೆ ಮುಖ್ಯಮಂತ್ರಿ ತನ್ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆಂಬ ಮಾಧ್ಯಮಗಳ ವರದಿ ಸುಳ್ಳು ಎಂದು ಶಾಸಕ ಮೊಯ್ದಿನ್ ಬಾವ ಸಮಜಾಯಿಷಿ ನೀಡಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ತಮ್ಮ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಹೋದರನ ಮೇಲೆ ಒತ್ತಡ ಹೇರಿ ನಾಮಪತ್ರ ಹಿಂತೆಗೆಯಲು ಹೇಳಬಹುದಿತ್ತು ಎಂದು ಸಿಎಂ ಹೇಳಿದರೇ ವಿನಃ, ಬೈದಿರಲಿಲ್ಲ. ಕೆಲವು ಮಾಧ್ಯಮಗಳಲ್ಲಿ ವರದಿಯಾದಂತೆ ನನಗೆ ಕ್ಲಾಸೂ ಕೊಟ್ಟಿಲ್ಲ, ಕ್ಲಾಸ್ ತೆಗೆಯಲು ನಾನೇನೂ ಮಗುವಲ್ಲ ಎಂದು ಹೇಳಿದರು.

ನನ್ನ ಸಹೋದರ ಜೆಡಿಎಸ್‌ನಿಂದ ರಾಜ್ಯಸಭೆಗೆ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ ಎಂದು ಹೇಳಿದ ಅವರು, ನಾನು ಪ್ರಾಮಾಣಿಕ ಕಾಂಗ್ರೆಸಿಗನಾಗಿದ್ದು, ಕಾಂಗ್ರೆಸಿನ ಅಧಿಕೃತ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದರು. ನನಗೆ ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಹಲವು ಮಂದಿ ಆಪ್ತ ಶಾಸಕರಿದ್ದರೂ ತಮ್ಮನಿಗೆ ಮತ ಹಾಕಲು ಯಾರಿಗೂ ಹೇಳಿಲ್ಲ. ನಾನು ಹಾಗೆ ಹೇಳಿದ್ದೇನೆಂದು ಯಾರಾದರೂ ಸಾಬೀತುಪಡಿಸಿದಲ್ಲಿ ರಾಜಕೀಯದಿಂದ ನಿವೃತ್ತನಾಗಲು ಸಿದ್ಧ. ಆಸ್ಕರ್ ರ್ನಾಂಡಿಸ್ ನನ್ನ ರಾಜಕೀಯ ಗುರು. ಅವರ ವಿರುದ್ಧ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು.

ನನಗೂ ಸಹೋದರನಿಗೂ ಕೌಟುಂಬಿಕ ಸಂಬಂಧ ಬಿಟ್ಟರೆ ವ್ಯವಹಾರ ಹಾಗೂ ರಾಜಕೀಯದಲ್ಲಿ ಯಾವುದೇ ಸಂಬಂಧವಿಲ್ಲ. ಕಳೆದ ಬುಧವಾರ ಬೆಂಗಳೂರಿನಲ್ಲಿ ಸಿಕ್ಕಿದ ಸಹೋದರ, ಕುಮಾರಸ್ವಾಮಿ ಜೆಡಿಎಸ್‌ನಿಂದ ಸ್ಪರ್ಧಿಸಲು ನನಗೆ ಅವಕಾಶ ನೀಡಿದ್ದಾರೆ. ಸಂಸದನಾಗುವ ಅವಕಾಶವಿದೆ ಎಂದು ತಿಳಿಸಿದ್ದ. ಈ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದೆ. ಅದನ್ನು ಅವರು ಗಂಭೀರವಾಗಿ ಪರಿಗಣಿಸಿರಲಿಲ್ಲ. ಮರುದಿನ ನನ್ನನ್ನು ಕರೆಸಿ, ನಿನ್ನ ಸಹೋದರನಿಗೆ ಹೆಸರು ವಾಪಸು ಪಡೆಯಲು ಒತ್ತಡ ಹೇರುವಂತೆ ಹೇಳಿದರು. ಅವರು ಹೇಳಿದಂತೆ ತಮ್ಮನಿಗೆ ಹೇಳಿದರೂ ಆತ ತನಗೂ ಸಾರ್ವಜನಿಕ ಸೇವೆ ಮಾಡುವ ಇಚ್ಛೆ ಇದೆ. ಅದಕ್ಕೆ ಅಡ್ಡ ಬರಬೇಡಿ ಎಂದು ವಾದ ಮಂಡಿಸಿದ. ಅವನ ಸ್ವಾತಂತ್ರಕ್ಕೆ ನಾನು ಅಡ್ಡಿಪಡಿಸುವುದು ಸರಿಯಲ್ಲ ಎಂದು ಸುಮ್ಮನಾದೆ ಎಂದು ಅವರು ಹೇಳಿದರು.

ಸಹೋದರನ ಯಾವುದೇ ವ್ಯವಹಾರದಲ್ಲಿ ನಾನು ಯಾವುದೇ ಪಾಲುದಾರಿಕೆ ಹೊಂದಿಲ್ಲ. ಜೊತೆಗೆ ದೇಶದ ಬೇರೆ ಬೇರೆ ರಾಜಕೀಯ ಇತಿಹಾಸವನ್ನು ಗಮನಿಸಿದಾಗ ಸಹೋದರರಿಬ್ಬರು, ಅಮ್ಮ ಮಗ ಸೇರಿದಂತೆ ಮನೆಯೊಳಗಿನವರೇ ಬೇರೆ ಬೇರೆ ಪಕ್ಷದಲ್ಲಿ ಸಮಾಜಸೇವೆ ಮಾಡುತ್ತಿರುವುದನ್ನು ಗಮನಿಸಬಹುದು ಎಂದವರು ಉದಾಹರಿಸಿದರು.

ಕಾರ್ಪೊರೇಟರ್ ಪ್ರವೀಣ್‌ಚಂದ್ರ ಆಳ್ವ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮೆಲ್ವಿನ್ ಡಿಸೋಜ, ಅರುಣ್ ಕುವೆಲ್ಲೊ, ಶ್ರೀಧರ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X