Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೊಲೀಸರು ಮುಷ್ಕರಕ್ಕೆ ಮುಂದಾದರೆ ‘ಎಸ್ಮಾ’...

ಪೊಲೀಸರು ಮುಷ್ಕರಕ್ಕೆ ಮುಂದಾದರೆ ‘ಎಸ್ಮಾ’ ಜಾರಿ

ಪೊಲೀಸ್ ಮುಷ್ಕರ ನಿಷೇಧಿಸಿ ಆದೇಶ

ವಾರ್ತಾಭಾರತಿವಾರ್ತಾಭಾರತಿ1 Jun 2016 7:37 PM IST
share
ಪೊಲೀಸರು ಮುಷ್ಕರಕ್ಕೆ ಮುಂದಾದರೆ ‘ಎಸ್ಮಾ’ ಜಾರಿ

ಬೆಂಗಳೂರು, ಜೂ. 1: ‘ಸಾರ್ವಜನಿಕ ಸುವ್ಯವಸ್ಥೆ ಮತ್ತು ಪೊಲೀಸ್ ಸೇವೆ’ಗೆ ಸೇರಿದ ಎಲ್ಲ್ಲ ಸೇವೆ ಮತ್ತು ಉದ್ಯೋಗ ವರ್ಗಗಳನ್ನು ‘ಅತ್ಯಾವಶ್ಯಕ ಸೇವೆ’ ಎಂದು ಘೋಷಿಸಿದ್ದು, ಜೂ.4ರಂದು ಮುಷ್ಕರಕ್ಕೆ ಮುಂದಾಗುವ ಪೊಲೀಸ್ ಸಿಬ್ಬಂದಿ ವಿರುದ್ಧ ‘ಎಸ್ಮಾ’ ಜಾರಿಗೊಳಿಸಲಾಗುವುದು ಎಂದು ಪರೋಕ್ಷ ಎಚ್ಚರಿಕೆ ನೀಡಲಾಗಿದೆ.

ಪೊಲೀಸ್ ಸೇವೆಗೆ ಸೇರಿದ ಸಿಬ್ಬಂದಿಯು ಯಾವುದೇ ವಿಧವಾದ ಮುಷ್ಕರ ಹೂಡುವುದರಿಂದ ಸಾರ್ವಜನಿಕ ಸುವ್ಯವಸ್ಥೆ ಮತ್ತು ಸುರಕ್ಷತೆಗೆ ಧಕ್ಕೆ ಉಂಟಾಗಿ ಸಮಾಜದ ಸ್ವಾಸ್ಥ್ಯದ ಮೇಲೆ ತೀವ್ರ ದುಪ್ಪರಿಣಾಮ (ಕಳ್ಳತನ, ಕೊಲೆ, ಅತ್ಯಾಚಾರ, ಸುಲಿಗೆ, ದರೋಡೆ ಇನ್ನೂ ಮುಂತಾದ ಅಪರಾಧಗಳಿಂದ) ಬೀರಲಿದೆ.

ಆದುದರಿಂದ ಸಾರ್ವಜನಿಕ ಸುವ್ಯವಸ್ಥೆ ಮತ್ತು ಸುರಕ್ಷತೆ ದೃಷ್ಟಿಯಿಂದ ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ಅಧಿನಿಯಮ, 2013 (2015 ರ ಕರ್ನಾಟಕ ಅಧಿನಿಯಮ 25) ರ 3ನೇ ಪ್ರಕರಣದಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರಕಾರವು ಪೊಲೀಸ್ ಸೇವೆಗೆ ಸೇರಿದ ಎಲ್ಲ ಸಿಬ್ಬಂದಿಯು ಮುಷ್ಕರ ಹೂಡುವುದನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮುಷ್ಕರನಿರತ ಪೊಲೀಸ್ ವಿರುದ್ಧ ಕ್ರಮ: ಸಂವಿಧಾನ ಅನುಸೂಚಿ 7ರಲ್ಲಿನ 2ನೆ ಪಟ್ಟಿಯಲ್ಲಿರುವ ‘ಸಾರ್ವಜನಿಕ ಸುವ್ಯವಸ್ಥೆ’ ಮತ್ತು ‘ಪೊಲೀಸ್’ ಸಂಬಂಧಿಸಿದ ಎಲ್ಲ ಸೇವೆಗಳ ಕುರಿತು ರಾಜ್ಯ ಶಾಸನಾಂಗವು ಕಾನೂನು ರೂಪಿಸುವ ಅಧಿಕಾರ ಹೊಂದಿರುತ್ತದೆ.

ಅಪರಾಧ ಪತ್ತೆ ಹಾಗೂ ಸಾರ್ವಜನಿಕ ಸುವ್ಯವಸ್ಥೆಯ ನಿರ್ವಹಣೆಯೊಂದಿಗೆ ನಾಗರಿಕರ ಆಸ್ತಿ ಮತ್ತು ಜೀವವನ್ನು ರಕ್ಷಿಸುವುದು ಪೊಲೀಸ್ ಸಿಬ್ಬಂದಿಯ ಮೂಲ ಅತ್ಯಾವಶ್ಯಕ ಕರ್ತವ್ಯ. ಪೊಲೀಸ್ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯು ಕಾರ್ಯನಿರ್ವಹಿಸಲು ನಿರಾಕರಿಸಿದಲ್ಲಿ, ಸಾರ್ವಜನಿಕ ಸುವ್ಯವಸ್ಥೆ ಮತ್ತು ಸುರಕ್ಷತೆಗೆ ದಕ್ಕೆ ಉಂಟಾಗಿ, ಸಮಾಜದ ಸ್ವಾಸ್ಥ್ಯದ ಮೇಲೆ ತೀವ್ರ ದುಪ್ಪರಿಣಾಮ ಹೆಚ್ಚಾಗಿ ಸಾರ್ವಜನಿಕರ ಸುಗಮ ಜೀವನವು ಅಸ್ತವ್ಯಸ್ತವಾಗುವುದೆಂದು ಸರಕಾರ ಅಭಿಪ್ರಾಯಪಟ್ಟಿದೆ.

ಆದುದರಿಂದ ಸಾರ್ವಜನಿಕ ಸುವ್ಯವಸ್ಥೆ ಮತ್ತು ಸುರಕ್ಷತೆ ದೃಷ್ಟಿಯಿಂದ ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣೆ ಅದಿನಿಯಮ, 20(2015ರ ಕರ್ನಾಟಕ ಅಧಿನಿಯಮ 25) ರ 2ನೆ ಪ್ರಕರಣದ (1)ನೆ ಉಪ ಪ್ರಕರಣದ ಖಂಡದಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ರಾಜ್ಯ ಸರಕಾರವು ಪೊಲೀಸ್ ಸೇವೆಗೆ ಸೇರಿದ ಎಲ್ಲ್ಲ ಸೇವೆ ಮತ್ತು ಉದ್ಯೋಗ ವರ್ಗಗಳನ್ನು ಈ ಕಾಯ್ದೆಯ ಉದ್ದೇಶಗಳಿಗಾಗಿ ಅತ್ಯಾವಶ್ಯಕ ಸೇವೆ ಎಂದು ಪರಿಗಣಿಸಿ ಕೂಡಲೇ ಜಾರಿಗೆ ಬರುವಂತೆ ಈ ಮೂಲಕ ಘೋಷಿಸಿ ಆದೇಶ ಹೊರಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X