Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾಲವನ ಡಾ. ಕಾರಂತರ ಮನೆ ಪುನಶ್ಚೇತನ:...

ಬಾಲವನ ಡಾ. ಕಾರಂತರ ಮನೆ ಪುನಶ್ಚೇತನ: ಪ್ರಥಮ ಹಂತದ ಕಾಮಗಾರಿ ಪೂರ್ಣ

ವಾರ್ತಾಭಾರತಿವಾರ್ತಾಭಾರತಿ1 Jun 2016 7:53 PM IST
share
ಬಾಲವನ ಡಾ. ಕಾರಂತರ ಮನೆ ಪುನಶ್ಚೇತನ: ಪ್ರಥಮ ಹಂತದ ಕಾಮಗಾರಿ ಪೂರ್ಣ

ಪುತ್ತೂರು, ಜೂ. 1: ಕಳೆದ ಹಲವು ವರ್ಷಗಳಿಂದ ತೀರಾ ನಾದುರಸ್ತಿಯಲ್ಲಿದ್ದು ಪ್ಲಾಸ್ಟಿಕ್ ಟರ್ಪಾಲ್ ಹೊದಿಸಿಕೊಂಡು, ಬೀಳುವ ಹಂತದಲ್ಲಿದ್ದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ಸಾಹಿತ್ಯ, ಚಟುವಟಿಕೆಯ ಕೇಂದ್ರವಾಗಿದ್ದ ಪುತ್ತೂರಿನ ಪರ್ಲಡ್ಕದ ಬಾಲವನದಲ್ಲಿರುವ ಮನೆಯ ಮೂಲ ಸ್ವರೂಪ ಉಳಿಸಿಕೊಂಡು ಪುನಶ್ಚೇತನಗೊಳಿಸುವ ಕಾಮಗಾರಿಯಲ್ಲಿ ಒಂದು ಹಂತದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.

ಮನೆಯ ಮಾಡಿಗೆ ಹಂಚಿನ ಹೊದಿಕೆಯಾಗುವುದರೊಂದಿಗೆ ಮಳೆಗಾಲಕ್ಕೆ ಮುನ್ನವೇ ಮನೆ ಟರ್ಪಾಲು ಮುಕ್ತಗೊಂಡಿದೆ. ಬಾಲವನದಲ್ಲಿರುವ ಡಾ.ಕಾರಂತರ ಮನೆ ಕಳೆದ ಕೆಲ ವರ್ಷಗಳ ಹಿಂದೆಯೇ ಶಿಥಿಲಗೊಂಡಿತ್ತು. ಮನೆಯ ಮಾಡು ಸಂಪೂರ್ಣವಾಗಿ ಶಿಥಿಲಗೊಂಡಿದ್ದ ಹಿನ್ನಲೆಯಲ್ಲಿ ಕಳೆದ ಮಳೆಗಾಲದಲ್ಲಿ ಮಾಡಿಗೆ ಟರ್ಪಾಲು ಹೊದಿಸಿ ರಕ್ಷಿಸಬೇಕಾದ ಅನಿವಾರ್ಯತೆ ಬಂದಿತ್ತು. ಕೆಲ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾರಂತರ ಮನೆಯ ಪುನಶ್ಚೇತನ ಕಾಮಗಾರಿಗೆ ಈ ವರ್ಷದ ಆರಂಭದಲ್ಲೇ ಚಾಲನೆ ದೊರಕಿದೆ.

ಈ ಮಳೆಗಾಲಕ್ಕೆ ಮುನ್ನವೇ ಡಾ.ಕಾರಂತರ ಮನೆಯನ್ನು ಮೂಲ ಸ್ವರೂಪದಲ್ಲೇ ಪುನಶ್ಚೇತನಗೊಳಿಸುವ ಮೊದಲ ಹಂತದ ಕಾಮಗಾರಿ ನಡೆದಿದೆ. ಇದೀಗ ಮನೆಯ ಮೇಲ್ಛಾವಣಿ ಕೆಲಸ ಪೂರ್ಣಗೊಂಡಿದ್ದು, ಮನೆಯ ಮಾಡಿಗೆ ಹಂಚು ಏರುವುದರೊಂದಿಗೆ ಟರ್ಪಾಲ್‌ನಿಂದ ಮುಕ್ತಿ ದೊರಕಿದೆ.

ಡಾ. ಕಾರಂತರ ಮನೆಯ ಪುನಶ್ಚೇತನ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿದ್ದ ಇಂಟ್ಯಾಕ್ ಸಂಸ್ಥೆಯವರು ಒಪ್ಪಂದದ ಪ್ರಕಾರ ಕಳೆದ ಮಾ.31ರೊಳಗೆ ಮನೆಯ ಮೇಲ್ಛಾವಣಿ ಮಾಡಿನ ಕೆಲಸ ಪೂರ್ಣಗೊಳಿಸಿ, ಉಳಿದ ಕಾಮಗಾರಿಯನ್ನು ಮೇ ಅಂತ್ಯದೊಳಗೆ ಪೂರ್ಣಗೊಳಿಸಿ ಬಿಟ್ಟು ಕೊಡಬೇಕಾಗಿತ್ತು. ಆದರೆ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದ ಪರಿಣಾಮವಾಗಿ ಕಳೆದ ವಾರದ ಅಂತ್ಯಕಷ್ಟೇ ಮೇಲ್ಛಾವಣಿ ಕೆಲಸ ಮಾಡಿ ಹಂಚು ಹೊದಿಸುವ ಕೆಲಸ ಮುಗಿದಿತ್ತು.

ಕಾಮಗಾರಿ ವಹಿಸಿಕೊಂಡಿದ್ದ ಇಂಟ್ಯಾಕ್ ಸಂಸ್ಥೆಯ ಸಮನ್ವಯಗಾರ ಅರವಿಂದ್ ಮತ್ತು ಪಂಕಜ್ ಮೋದಿ ಬಾಲವನಕ್ಕೆ ಭೇಟಿ ನೀಡಿ ಮನೆಯಲ್ಲಿದ್ದ ಉಪಯೋಗಕ್ಕೆ ಬಾರದ ಮರಗಳನ್ನು ಗುರುತು ಹಾಕಿ ಹೋಗಿದ್ದ ಬಳಿಕ ಕಾಮಗಾರಿಗೆ ವೇಗ ಸಿಕ್ಕಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X