Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ರಾಮಾಯಣ, ಮಹಾಭಾರತ ಮತ್ತು ಧರ್ಮ ಕರ್ವೆ...

ರಾಮಾಯಣ, ಮಹಾಭಾರತ ಮತ್ತು ಧರ್ಮ ಕರ್ವೆ ಅವರ ಹೊಸ ಒಳನೋಟಗಳು

-ಕಾರುಣ್ಯ-ಕಾರುಣ್ಯ1 Jun 2016 10:41 PM IST
share
ರಾಮಾಯಣ, ಮಹಾಭಾರತ ಮತ್ತು ಧರ್ಮ ಕರ್ವೆ ಅವರ ಹೊಸ ಒಳನೋಟಗಳು

‘ರಾಮಾಯಣ, ಮಹಾಭಾರತ ಮತ್ತು ಧರ್ಮ’ ಇರಾವತಿ ಕರ್ವೆ ಅವರ ಇನ್ನೊಂದು ಮಹತ್ವದ ಕೃತಿ. ಚಂದ್ರಕಾಂತ ಪೋಕಳೆ ಅವರು ಇದನ್ನು ಮರಾಠಿಯಿಂದ ಕನ್ನಡಕ್ಕೆ ಇಳಿಸಿದ್ದಾರೆ. ಇರಾವತಿ ಕರ್ವೆ ತಮ್ಮ ‘ಯುಗಾಂತ’ ಕೃತಿಯ ಮೂಲಕ ಈಗಾಗಲೇ ಕನ್ನಡಿಗರಿಗೆ ಸಾಕಷ್ಟು ಪರಿಚಿತರು. ಇವರ ಯುಗಾಂತ ಕೃತಿ ಮೂರು ಬಾರಿ ಬೇರೆ ಬೇರೆ ಅನುವಾದಕರಿಂದ ಕನ್ನಡ ಭಾಷೆಗೆ ಇಳಿದಿದೆ. ಮತ್ತು ಕನ್ನಡದಲ್ಲಿ ಈ ಗ್ರಂಥವನ್ನು ಮುಂದಿಟ್ಟುಕೊಂಡು ಮಹಾಭಾರತದ ಕುರಿತಂತೆ ಸಾಕಷ್ಟು ಚರ್ಚೆಗಳು ನಡೆದಿವೆ. ಮಹಾಭಾರತ ಪಾತ್ರಗಳನ್ನು ಬೇರೆ ಬೇರೆ ಆಯಾಮ ಗಳಿಂದ ಚರ್ಚಿಸಿದ ಕೃತಿ ‘ಯುಗಾಂತ’. ‘ರಾಮಾಯಣ, ಮಹಾಭಾರತ ಮತ್ತು ಧರ್ಮ’ ಚರ್ಚೆಯ ವಿಸ್ತೃತ ರೂಪವಾಗಿದೆ. ಇಲ್ಲಿ ರಾಮಾಯಣ ಮತ್ತು ಮಹಾಭಾರತ ನಡೆದ ಕಾಲಘಟ್ಟವನ್ನು ಮುಂದಿಟ್ಟುಕೊಂಡು ಕರ್ವೆ ಚರ್ಚೆ ನಡೆಸುತ್ತಾರೆ. ರಾಮಾಯಣ ಮತ್ತು ಮಹಾಭಾರತವನ್ನು ಜೊತೆಯಾಗಿಟ್ಟು ನೋಡುವ ಲೇಖಕಿ, ರಾಮಾಯಣದ ಮೂಲ ಜಾನಪದ ಕತೆಯಾಗಿರಬೇಕು ಎಂದು ಅಂದಾಜಿಸುತ್ತಾರೆ.

ಹಾಗೆಯೇ ಮಹಾಭಾರತವೂ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ರಾಜಮನೆತನದ ತಲೆಮಾರಿನ ನಿಖರ ಇತಿಹಾಸ ಮತ್ತು ಕೆಲವು ಹಳೆಯ ಚರಿತ್ರೆಗಳನ್ನು ಒಳಗೊಂಡು ವ್ಯಾಸನಿಂದ ಸಂಸ್ಕರಿಸಲ್ಪಟ್ಟ ಕಾವ್ಯವಾಗಿದೆ ಎಂದು ಅಭಿಪ್ರಾಯ ಪಡುತ್ತಾರೆ. ಪಿತೃಪ್ರಧಾನ ಮತ್ತು ಬಹುಪತ್ನಿತ್ವ ಕುಟುಂಬ ಪದ್ಧತಿಯಲ್ಲಿ ಯಾವ ಸಂಘರ್ಷ ಮತ್ತು ದ್ವೇಷ ನಿರ್ಮಾಣವಾಗುತ್ತದೆಯೋ ಅದನ್ನು ನಿವಾರಣೆ ಮಾಡುವ ಬೇರೆ ಬೇರೆ ದಾರಿಗಳಾಗಿ ರಾಮಾಯಣ ಮತ್ತು ಮಹಾಭಾರತವನ್ನು ಲೇಖಕಿ ಒಂದೆಡೆ ಕಾಣುತ್ತಾರೆ. ಅಯೋಧ್ಯಾ ಕಾಂಡ, ಅರಣ್ಯಕಾಂಡ, ಧರ್ಮ ಇವುಗಳ ನಡುವಿನ ತಿಕ್ಕಾಟವನ್ನು ಕುತೂಹಲಕರವಾಗಿ ಶೋಧಿಸುತ್ತಾ ಹೋಗುವ ಕರ್ವೆ ರಾಮಾಯಣ ಮತ್ತು ಮಹಾಭಾರತದ ಹೊಸ ಹೊಳಹುಗಳನ್ನು ನಮ್ಮಲ್ಲಿ ಬಿತ್ತುತ್ತಾರೆ. ಕರ್ವೆಯವರ ಓದು, ರಾಮಾಯಣ ಮತ್ತು ಮಹಾಭಾರತದ ಓದುವ ಕ್ರಮವನ್ನು ನಮ್ಮಾಳಗೆ ಬದಲಿಸುತ್ತದೆ. ಮಾನವಶಾಸ್ತ್ರಜ್ಞೆಯಾಗಿರುವ ಇರಾವತಿ ಕರ್ವೆ, ಒಂದು ಕಾವ್ಯದೊಳಗಿರುವ ಬೇರೆ ಬೇರೆ ಪಾತ್ರಗಳ ಮನಸ್ಸಿನೊಳಗೆ ಇಳಿಯುವುದು ಮತ್ತು ಅದನ್ನು ಅಧ್ಯಯನ ಮಾಡುತ್ತಾ ಆ ಕಾಲಘಟ್ಟವನ್ನು ತೆರೆದಿಡುವುದು ವಿಶೇಷವಾಗಿದೆ. ನವಕರ್ನಾಟಕ ಪ್ರಕಾಶನ ಹೊರತಂದಿರುವ ಈ ಕೃತಿಯ ಮುಖಬೆಲೆ 120 ರೂ. ಆಸಕ್ತರು 080-30578020 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯ
-ಕಾರುಣ್ಯ
Next Story
X