Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯನ್ನು ರಕ್ಷಿಸಲು ‘ತುದಿಯಿಂದ’...

ಮಹಿಳೆಯನ್ನು ರಕ್ಷಿಸಲು ‘ತುದಿಯಿಂದ’ ಹಿಂದೆ ಬಂದ ಬ್ರಿಟನ್‌ನ ಮಾಜಿ ಯೋಧ

ಮಾನವೀಯತೆ ಮೆರೆದು ಎವರೆಸ್ಟ್‌ಗಿಂತಲೂ ಎತ್ತರಕ್ಕೇರಿದ ಪರ್ವತಾರೋಹಿ

ವಾರ್ತಾಭಾರತಿವಾರ್ತಾಭಾರತಿ2 Jun 2016 1:35 PM IST
share
ಮಹಿಳೆಯನ್ನು ರಕ್ಷಿಸಲು ‘ತುದಿಯಿಂದ’ ಹಿಂದೆ ಬಂದ ಬ್ರಿಟನ್‌ನ ಮಾಜಿ ಯೋಧ

ಕೊಲ್ಕತ್ತಾ, ಜೂ.2: ಬ್ರಿಟಿಷ್ ನಾಗರಿಕ ಜಾನ್ ಬ್ರಿನ್ಸ್‌ಮೇ ಕಳೆದ ವಾರ ತಮ್ಮ ಮೌಂಟ್ ಎವರೆಸ್ಟ್ ಪರ್ವತಾರೋಹಣವನ್ನು ಯಶಸ್ವಿಯಾಗಿ ಪೂರೈಸುತ್ತಿದ್ದರೆ ಇದೀಗ ಅವರ ಹೆಸರು ಈ ವಿಶ್ವದ ಅತ್ಯಂತ ಎತ್ತರದ ಪರ್ವತವೇರಿದ 5,000ಕ್ಕೂ ಹೆಚ್ಚು ಪರ್ವತಾರೋಹಿಗಳ ಪಟ್ಟಿಯಲ್ಲಿ ಸೇರಿ ಬಿಡುತ್ತಿತ್ತು. ಆದರೆ ಜಾನ್ ಮಾನವೀಯತೆ ಮೆರೆಯುವ ಮೂಲಕ ಪರ್ವತಕ್ಕಿಂತಲೂ ಎತ್ತರಕ್ಕೇರಿದ್ದಾರೆ.
ಜಾನ್ ಮೌಂಟ್ ಎವರೆಸ್ಟ್‌ನ ತುತ್ತ ತುದಿ ತಲುಪಲು ಇನ್ನೇನು 450 ಮೀಟರ್ ಮಾತ್ರ ಬಾಕಿಯಿತ್ತು. ಅವರಿಗೆ ಅದಾಗಲೇ ಶುಭ ಹಾರೈಕೆಗಳ ಸಂದೇಶಗಳು ಬರಲಾರಂಭಿಸಿದ್ದವು. ಆದರೆ ಅಷ್ಟರಲ್ಲಿ ಭಾರತೀಯ ಪರ್ವತಾರೋಹಿ ಸುನೀತಾ ಹಝ್ರ ಪರ್ವತದಿಂದ ಕೆಳಗಿಳಿಯುವ ಸಮಯದಲ್ಲಿ ಜಾರಿಬಿದ್ದಿದ್ದಾರೆ ಹಾಗೂ ಅವರು ಆಮ್ಲಜನಕದ ಕೊರತೆ ಎದರಿಸುತ್ತಿದ್ದಾರೆ ಎಂಬ ವಿಚಾರ ಜಾನ್‌ರ ಗಮನಕ್ಕೆ ಬಂದಿತು. ಇದರಿಂದ ಕೂಡಲೇ ಕಾರ್ಯಪ್ರವೃತ್ತರಾದ ಜಾನ್ ತಂಡದ ಇತರರು ತಮ್ಮ ಪರ್ವತಾರೋಹಣವನ್ನು ಮುಂದುವರಿಸಿದರೂ ಅವರನ್ನೆಲ್ಲ ಬಿಟ್ಟು ಸುನೀತಾರನ್ನು ರಕ್ಷಿಸಲು ಮುಂದಾದರು. ಅಷ್ಟೇ ಅಲ್ಲ ಅದರಲ್ಲಿ ಅವರು ಯಶಸ್ವಿಯೂ ಆದರು.
ಜಾನ್ ಆಕೆಗೆ ಸಹಾಯ ಮಾಡುತ್ತಿದ್ದಾಗ ಹಲವು ಪರ್ವತಾರೋಹಿಗಳು ಅಲ್ಲಿಂದ ಹಾದು ಹೋದರೂ ಯಾರೂ ಅವರ ಸಹಾಯಕ್ಕೆ ಬರಲಿಲ್ಲ ಎಂದು ಬೇಸರಿಸುತ್ತಾರೆ ಜಾನ್.
‘‘ಮೌಂಟ್ ಎವರೆಸ್ಟ್‌ನ ತುತ್ತತುದಿಗೇರುವ ಅವಕಾಶವನ್ನು ಕಳೆದುಕೊಂಡೆನೆಂಬ ದುಃಖವಿದೆ. ಆದರೆ ಎಲ್ಲದಕ್ಕಿಂತ ಹೆಚ್ಚಾಗಿ ಒಂದು ಜೀವ ಉಳಿಸಿದ ಸಂತೋಷ ನನಗಿದೆ’’ಎಂದು ಜಾನ್‌ಹೇಳುವಾಗ ನಿಜವಾಗಿಯೂ ಅವರ ಬಗ್ಗೆ ಹೆಮ್ಮೆಯೆನಿಸುತ್ತದೆ.
‘‘ನನ್ನ ಜೀವ ಉಳಿದಿದೆಯೆಂದಾದರೆ ಅದಕ್ಕೆ ಜಾನ್ ಕಾರಣ, ನಾನು ಮನೆಗೆ ಹಿಂದಿರುಗಿ ನನ್ನ ಮಗುವಿನ ಮುಖ ನೋಡಬಹುದಾಗಿದ್ದರೆ ಅದಕ್ಕೂ ಅವರೇ ಕಾರಣ. ಬೇರಿನ್ನೇನು ಹೇಳಲಿ?’’ ಎಂದು ಗದ್ಗದಿತರಾಗಿ ನುಡಿಯುತ್ತಾರೆ ಬಂಗಾಳದ ಹಝ್ರ.
ಮಾಜಿ ಯೋಧರಾಗಿರುವ ಜಾನ್ ಅವರು ಬಾಸ್ನಿಯಾ, ಇರಾಕ್, ಅಫ್ಗಾನಿಸ್ಥಾನಗಳಲ್ಲಿ ಸೇವೆ ಸಲ್ಲಿಸಿದ್ದು, ಬಾಂಬ್ ದಾಳಿಯೊಂದರಲ್ಲಿ ತಮ್ಮ ಒಂದು ಕಣ್ಣನ್ನು ಕಳೆದುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X