Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇದು ಅರ್ಧ ನ್ಯಾಯ, ಹೋರಾಟ ಮುಗಿದಿಲ್ಲ :...

ಇದು ಅರ್ಧ ನ್ಯಾಯ, ಹೋರಾಟ ಮುಗಿದಿಲ್ಲ : ಝಕಿಯಾ ಜಾಫ್ರಿ

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ

ವಾರ್ತಾಭಾರತಿವಾರ್ತಾಭಾರತಿ2 Jun 2016 4:21 PM IST
share
ಇದು ಅರ್ಧ ನ್ಯಾಯ, ಹೋರಾಟ ಮುಗಿದಿಲ್ಲ : ಝಕಿಯಾ ಜಾಫ್ರಿ

ನವದೆಹಲಿ : ಗೋಧ್ರಾ ಘಟನೆಯ ನಂತರ 2002ರಲ್ಲಿ ಗುಜರಾತಿನಲ್ಲಿ ನಡೆದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣದಲ್ಲಿ ವಿಹಿಂಪ ನಾಯಕನೊಬ್ಬ ಸೇರಿದಂತೆ 24 ಮಂದಿಯನ್ನು ಅಪರಾಧಿಗಳೆಂದು ಅಹಮದಾಬಾದಿನ ವಿಶೇಷ ನ್ಯಾಯಾಲಯ ಗುರುವಾರ ತನ್ನ ತೀರ್ಪಿನಲ್ಲಿ ಘೋಷಿಸಿದ್ದು36 ಇತರ ಆರೋಪಿಗಳನ್ನು ದೋಷಮುಕ್ತಗೊಳಿಸಿದೆ. ಈ ಘಟನೆಯಲ್ಲಿ ಮೃತಪಟ್ಟ 69 ಮಂದಿಯಲ್ಲಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿಯವರು ಒಬ್ಬರಾಗಿದ್ದರೆ, ಅವರ ಪತ್ನಿ ಝಕಿಯಾ ಜಾಫ್ರಿಗೆ ಈ ತೀರ್ಪು ಸಮಾಧಾನತಂದಿಲ್ಲ. ‘‘ಇದು ಅರ್ಧ ನ್ಯಾಯ, ನನ್ನ ಹೋರಾಟ ಮುಗಿದಿಲ್ಲ,’’ ಎಂದು ಅವರು ನ್ಯಾಯಾಲಯದ ತೀರ್ಪಿಗೆ ಪ್ರತಿಕ್ರಿಯಿಸಿದ್ದಾರೆ.

ತಾನು ಈ ತೀರ್ಪನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿಯೂ ಅವರು ಹೇಳಿದ್ದಾರೆ.

ದೋಷಮುಕ್ತಗೊಂಡವರಲ್ಲಿಹಾಲಿ ಬಿಜೆಪಿ ಕಾರ್ಪೊರೇಟರ್ ಬಿಪಿನ್ ಪಟೇಲ್ ಕೂಡ ಸೇರಿದ್ದಾರೆ. ಎಲ್ಲಾ ಆರೋಪಿಗಳು ಎದುರಿಸುತ್ತಿದ್ದ ಸಂಚಿನ ಆರೋಪವನ್ನೂ ಕೋರ್ಟ್ ಕೈಬಿಟ್ಟಿದ್ದು ಈ ಆರೋಪಕ್ಕೆಸೂಕ್ತ ಸಾಕ್ಷ್ಯಗಳಿಲ್ಲವೆಂದು ಹೇಳಿದೆ.

ನ್ಯಾಯಾಲಯ ದೋಷಿಗಳೆಂದು ಘೋಷಿಸಲ್ಪಟ್ಟವರಲ್ಲಿ11 ಮಂದಿಯ ಮೇಲೆ ಕೊಲೆ ಆರೋಪವಿದ್ದರೆ, ಉಳಿದ 13 ಮಂದಿ ಬೇರೆ ಅಪರಾಧಗಳಿಗೆ ದೋಷಿಗಳೆಂದು ಹೆಸರಿಸಲ್ಪಟ್ಟಿದ್ದಾರೆ. ಅವರೆಲ್ಲರಿಗೂನ್ಯಾಯಾಲಯ ಜೂನ್ 6ರಂದು ಶಿಕ್ಷೆಯ ಪ್ರಮಾಣಘೋಷಿಸಲಿದೆ.

ಈ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ನಡೆಯುತ್ತಿದ್ದು ಮೇ 31 ರಂದು ತೀರ್ಪು ನೀಡಬೇಕೆಂದು ಅದು ಅಹಮದಾಬಾದಿನ ವಿಶೇಷ ನ್ಯಾಯಾಲಯಕ್ಕೆಈ ಹಿಂದೆ ಸೂಚನೆ ನೀಡಿತ್ತು.ಈ ಪ್ರಕರಣದ 66 ಆರೋಪಿಗಳ ಪೈಕಿ 9 ಮಂದಿ ಜೈಲಿನಲ್ಲಿದ್ದರೆ, ಉಳಿದವರು ಈ ಹಿಂದೆಯೇ ಜಾಮೀನಿನ ಮೇಲೆ ಹೊರಬಂದಿದ್ದರು.

ಈ ಹತ್ಯಾಕಾಂಡವು ಪೂರ್ವ ನಿಯೋಜಿತವಾಗಿತ್ತಲ್ಲದೆ ಅಲ್ಪಸಂಖ್ಯಾತ ಸಮುದಾಯದ ಸದಸ್ಯರನ್ನು ಗುರಿಯಾಗಿಸಿತ್ತೆಂದುಸಂತ್ರಸ್ತರ ಪರ ವಕೀಲರು ವಾದಿಸಿದ್ದರೆ ಪ್ರತಿವಾದಿ ವಕೀಲರು ಇದನ್ನು ನಿರಾಕರಿಸಿದ್ದರಲ್ಲದೆ, ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿಹಲವಾರು ಸುತ್ತು ಗುಂಡು ಹಾರಿಸಿದ ನಂತರ ಗುಂಪೊಂದು ಹಿಂಸೆಗೆ ಕೈ ಹಾಕಿತ್ತೆಂದಿದ್ದಾರೆ.

ಗೋಧ್ರಾ ಘಟನೆ ನಡೆದ ಮರುದಿನವೇ, ಅಂದರೆ ಫೆಬ್ರವರಿ 28,2002 ರಂದು ಗುಲ್ಬರ್ಗ್ ಹತ್ಯಾಕಾಂಡ ನಡೆದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X