Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಟ್ಕಳ: ರಾಬಿತಾ ಸೊಸೈಟಿಯಿಂದ ಸುರಕ್ಷ...

ಭಟ್ಕಳ: ರಾಬಿತಾ ಸೊಸೈಟಿಯಿಂದ ಸುರಕ್ಷ ಚಾಲನೆ ಹಾಗೂ ಸ್ವಚ್ಛ ಭಟ್ಕಳ ಯೋಜನೆ

ವಾರ್ತಾಭಾರತಿವಾರ್ತಾಭಾರತಿ2 Jun 2016 8:13 PM IST
share
ಭಟ್ಕಳ: ರಾಬಿತಾ ಸೊಸೈಟಿಯಿಂದ ಸುರಕ್ಷ ಚಾಲನೆ ಹಾಗೂ ಸ್ವಚ್ಛ ಭಟ್ಕಳ ಯೋಜನೆ

ಭಟ್ಕಳ, ಜೂ. 2: ಇಲ್ಲಿನ ಅನಿವಾಸಿ ಭಾರತೀಯರ ರಾಬಿತಾ ಸೂಸೈಟಿಯು ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಹಯೋಗದೊಂದಿಗೆ ಸುರಕ್ಷ ಚಾಲನೆ ಹಾಗೂ ಕ್ಲೀನ್ ಭಟ್ಕಳ ಯೋಜನೆ ರೂಪಿಸಿರುವುದಾಗಿ ರಾಬೀತಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮೊಹಿದ್ದೀನ್ ರುಕ್ನುದ್ದೀನ್ ಕೊಚ್ಚಾಪ್ಪುಹೇಳಿದ್ದಾರೆ.

 ಭಟ್ಕಳದ ಅಭಿವೃದ್ಧಿಯ ಕುರಿತಂತೆ ಅನಿವಾಸಿ ಭಾರತೀಯರು ದುಬೈಯಲ್ಲಿ ಕುಳಿತು ಕನಸು ಕಾಣುತ್ತಿದ್ದಾರೆ. ತಮ್ಮ ತಾಯ್ನೆಲದಲ್ಲಿ ನಿತ್ಯವೂ ಹಲವಾರು ಅಪಘಾತಗಳು ಸಂಭವಿಸುತ್ತಿದ್ದು, ವಾರದಲ್ಲಿ ಒಂದೆರಡು ಯುವ ಜೀವಗಳು ಅಪಘಾತಗಳಿಗೆ ಬಲಿಯಾಗುತ್ತಿದೆ. ಯುವಕರಲ್ಲಿ ಹಾಗೂ ಜನರಲ್ಲಿ ಅಪಘಾತಗಳ ಕುರಿತಂತೆ ಜಾಗೃತಿ ಮೂಡಿಸುವುದು ಸೇರಿದಂತೆ ವಿದ್ಯಾರ್ಥಿಗಳಿಗೆ ಈಗಿಂದಲೇ ಅವರನ್ನು ಸಿದ್ಧಗೊಳಿಸುವುದು ಯೋಜನೆಯ ಉದ್ದೇಶವಾಗಿದೆ.

ನಮ್ಮ ಯೋಜನೆ ಕೇವಲ ಮುಸ್ಲಿಮ್ ಸಮುದಾಯಕ್ಕೆ ಮಾತ್ರ ಸೀಮಿತವಾಗಿರದೆ ಇಲ್ಲಿನ ಎಲ್ಲ ಧರ್ಮಿಯರು ಪಾಲ್ಗೊಳ್ಳುವ, ಎಲ್ಲರ ಅಭಿವೃದ್ಧಿ ಬಯಸುವ ಯೋಜನೆಯಾಗಿದೆ. ಭಟ್ಕಳದ ವಿವಿಧ ಸಂಘಸಂಸ್ಥೆಗಳು, ಸರಕಾರಿ ಇಲಾಖೆಗಳು, ಮಂದಿರ ಮಸೀದಿ ಚರ್ಚುಗಳು ಆಡಳಿತ ವರ್ಗವನ್ನು ಸೇರಿಸಿಕೊಂಡು ಯೋಜನೆಯನ್ನು ಯಶಸ್ವಿಗೊಳಿಸಲಾಗುವುದು ಎಂದರು.

ಭಟ್ಕಳ ನಗರವು ಕಸದ ಗುಂಡಿಯಾಗಿದೆ. ಸಮರ್ಪಕವಾಗಿ ಕಸ ವಿಲೆವಾರಿ ಮಾಡುವುದು, ಭಟ್ಕಳ ನಗರವನ್ನು ಸ್ವಚ್ಛ ಹಾಗೂ ಸುಂದರಗೊಳಿಸುವುದು ನಮ್ಮ ಯೋಜನೆಯ ಭಾಗವಾಗಿದೆ. ಇದರಲ್ಲಿ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲಾ ವಿದ್ಯಾರ್ಥಿಗಳು, ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ವಿದ್ಯಾರ್ಥಿ ಹಾಗೂ ಪಾಲಕರಲ್ಲಿ ಜಾಗೃತಿಯನ್ನು ಮಾಡಲಾಗುವುದು. ಈ ಯೋಜನೆ ಕೇವಲ ಒಂದು ದಿನ ಅಥವಾ ವಾರದಲ್ಲಿ ಅನುಷ್ಟಾನಗೊಳಿಸಲು ಸಾಧ್ಯವಿಲ್ಲ. ಯೋಜನೆ ಅನುಷ್ಠಾನ ಕುರಿತಂತೆ ಮೊದಲು ವ್ಯಾಪಕ ಪ್ರಚಾರಾಂದೋಲನ ಹಮ್ಮಿಕೊಳ್ಳುವುದು, ಇದನ್ನು ಕಾರ್ಯಗತಗೊಳಿಸಲು ಭಟ್ಕಳದ ಸಮಸ್ತ ನಾಗರಿಕರ, ವಿವಿಧ ಸಂಘಸಂಸ್ಥೆಗಳ ಸಹಾಯ, ಸಹಕಾರವನ್ನು ಪಡೆದುಕೊಳ್ಳಲಾಗುವುದು ಎಂದು ವಿವರಿಸಿದರು.

 ನಗರ ವ್ಯಾಪ್ತಿಯ ಶಾಲೆಗಳಲ್ಲಿ ಸ್ವಚ್ಚತೆ ಕುರಿತಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸುವುದು, ಹಾಗೂ ಅತ್ಯಂತ ಸ್ವಚ್ಛ ಶಾಲೆಯನ್ನು ಗುರುತಿಸಿ ಅದಕ್ಕೆ ಇಕೋ ಶಾಲೆ ಪ್ರಶಸ್ತಿ ನೀಡುವುದು, ರಸ್ತೆ ಸುರಕ್ಷತೆ ಕುರಿತಂತೆ ಜನಜಾಗೃತಿಯನ್ನುಂಟು ಮಾಡಲು ಕಿರುಚಿತ್ರ, ಚಿತ್ರಮಂದಿರಗಳು, ಫೇಸ್ಬುಕ್, ವಾಟ್ಸ್‌ಆಪ್ ಮೂಲಕ ವ್ಯಾಪಕ ಪ್ರಚಾರವನ್ನು ಕೈಗೊಳ್ಳಲಾಗುವುದು ಎಂದು ಹೇಳಿದ ಮೊಯ್ದೀನ್, ಭಟ್ಕಳವವನ್ನು ಕೇವಲ ಭಯೋತ್ಪಾದನೆಯ ವಿಷಯದಲ್ಲಿ ಮಾತ್ರ ಗುರುತಿಸುವಂತೆ ಮಾಡಿದ ಮಾಧ್ಯಮಗಳು ಈಗ ಇಂತಹ ಯೋಜನೆಗಳ ಮೂಲಕ ಭಟ್ಕಳವೆಂದರೆ ಭಯೋತ್ಪಾದನೆಯಲ್ಲ. ಇಲ್ಲಿ ಹಲವು ಉತ್ತಮ ಯೋಜನೆಗಳು ಹಮ್ಮಿಕೊಳ್ಳುವ ಜನರಿದ್ದಾರೆ ಎನ್ನುವುದು ಸಮಾಜಕ್ಕೆ ತೋರಿಸಿಕೊಡುವುದು ಮಾಧ್ಯಮಗಳ ಕರ್ತವ್ಯವಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಅಬ್ದುಲ್ ಬಾಸಿತ್ ಹಾಫಿಝ್, ಜೈಲಾನಿ ಶಾಬಂದ್ರಿ, ಇಲ್ಯಾಸ್ ಸಿದ್ದಿಬಾಪ, ಮನಾಝಿರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X