Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಟ್ಕಳ: ಹೆದ್ದಾರಿ ಕಾಮಗಾರಿಯಿಂದಾಗಿ...

ಭಟ್ಕಳ: ಹೆದ್ದಾರಿ ಕಾಮಗಾರಿಯಿಂದಾಗಿ ಬಾವಿಯ ನೀರು ಕಲುಷಿತ

ವಾರ್ತಾಭಾರತಿವಾರ್ತಾಭಾರತಿ2 Jun 2016 8:52 PM IST
share
ಭಟ್ಕಳ: ಹೆದ್ದಾರಿ ಕಾಮಗಾರಿಯಿಂದಾಗಿ ಬಾವಿಯ ನೀರು ಕಲುಷಿತ

ಭಟ್ಕಳ, ಜೂ.2: ಮಳೆಗಾಲದ ಆರಂಭಕ್ಕೂ ಮುನ್ನ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯಿಂದ ಬೆಳಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆದ್ರಕೇರಿಯ ಕುಡಿಯುವ ನೀರಿನ ಬಾವಿ ಸಂಪೂರ್ಣ ಕಲುಷಿತಗೊಂಡು ಕುಡಿಯುವ ನೀರಿಗೂ ತತ್ವಾರ ಆದ ಘಟನೆ ವರದಿಯಾಗಿದೆ.

ತಾಲೂಕಿನಲ್ಲಿ ಕಳೆದ 2-3 ತಿಂಗಳಿನಿಂದ ಕುಡಿಯುವ ನೀರಿಗಾಗಿ ಜನತೆ ಪರದಾಡುತ್ತಿದ್ದರೂ ಕೂಡಾ ಬೆಳಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆದ್ರಕೇರಿಯ ರಮಾನಂದ ಅವೃತರ ಮನೆಯ ಬಾವಿಯಲ್ಲಿ ಸಾಕಷ್ಟು ನೀರಿತ್ತು. ಇವರು ಮಾತ್ರವಲ್ಲದೇ ಆಸುಪಾಸಿನ ಜನತೆ ಕೂಡಾ ಉಪಯೋಗಿಸುತ್ತಿದ್ದರು. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಸುತ್ತಮುತ್ತಲಿನ ನೀರೆಲ್ಲಾ ಇವರ ಬಾವಿಗೆ ಇಂಗಿ ಹೋಗಿದ್ದು ಬಾವಿಯ ನೀರು ಸಂಪೂರ್ಣ ಕಲುಷಿತಗೊಂಡಿದೆ.

ಇವರ ಬಾವಿಯ ಪಕ್ಕದಲ್ಲಿಯೇ ಸಿ.ಡಿ.ಯೊಂದನ್ನು ನಿರ್ಮಿಸುತ್ತಿರುವ ಐಆರ್‌ಬಿ. ಕಂಪೆನಿ ಕಳೆದ ಕೆಲವು ದಿನಗಳ ಹಿಂದೆ ನೆಲ ಸಮತಟ್ಟು ಮಾಡಲು ಹೋಗಿ ಎಡವಟ್ಟು ಮಾಡಿದೆ. ಸುತ್ತಮುತ್ತಲಿನ ಕಲುಷಿತ ನೀರು ಸಂಪೂರ್ಣ ಇವರ ಬಾವಿಯ ಕಡೆಗೇ ಬರುವಂತಾಗಿದ್ದು ಘಟನೆಗೆ ಕಾರಣವಾಗಿದೆ. ಅಲ್ಲದೇ ವಿಶೇಷ ಭೂಸ್ವಾಧೀನಾಧಿಕಾರಿಗಳು ಭೂ ಸ್ವಾಧೀನಪಡಿಸಿಕೊಳ್ಳುವಾಗ ಇವರ ಬಾವಿಯನ್ನು ಬಿಟ್ಟು ಬಿಟ್ಟಿದ್ದರೂ, ಇವರ ಬಾವಿಯ ಪಕ್ಕದಲ್ಲಿಯೇ ನಿರ್ಮಿಸುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿ ಖಾಯಂ ಆಗಿ ಬಾವಿಗೆ ಕೆಸರು ನೀರು ನುಗ್ಗುವ ಭೀತಿ ಇವರನ್ನು ಕಾಡುತ್ತಿದ್ದು ಬಾವಿ ಇದ್ದರೂ ಸಹ ಇಲ್ಲದಂತಾಗುವುದು ಎನ್ನುವುದು ಅವೃತರ ಅಳಲಾಗಿದೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಕೃಷಿಕ ಸಮಾಜದ ಉತ್ತರ ಪ್ರಾಂತ ಪ್ರಮುಖ ಶ್ರೀಧರ ಹೆಬ್ಬಾರ್ ಕಾಮಗಾರಿ ನಡೆಸುತ್ತಿರುವವರೊಂದಿಗೆ ಮಾತನಾಡಿದ್ದು ತಕ್ಷಣ ತಾತ್ಕಾಲಿಕ ಪರಿಹಾರ ಮಾಡಿಕೊಡುವ ಭರವಸೆಯನ್ನು ನೀಡಿದ್ದಾರೆ. ಸಹಾಯಕ ಕಮಿಷನರ್‌ರ ಗಮನಕ್ಕೂ ಕೂಡಾ ವಿಷಯವನ್ನು ತಂದಿದ್ದು ಶನಿವಾರ ಬಂದು ಸ್ಥಳ ಪರಿಶೀಲನೆ ಮಾಡುವ ಭರವಸೆಯನ್ನು ನೀಡಿದ್ದಾರೆನ್ನಲಾಗಿದೆ.

ಸ್ಥಳದಲ್ಲಿ ಸೇರಿದ್ದ ಜನರು ಐಆರ್‌ಬಿ. ಕಂಪೆನಿಯ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದು ತಕ್ಷಣ ತಾಲೂಕಿನಲ್ಲಿ ಮಳೆಗಾಲದಲ್ಲಿ ಎಲ್ಲೆಲ್ಲಿ ನೀರು ತುಂಬಿ ತೊಂದರೆಯಾಗುತ್ತದೆ ಎನ್ನುವ ಸಮೀಕ್ಷೆ ನಡೆಸಿ ತಕ್ಷಣ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ.

ಪರಿಹಾರ ಕೊಡದೇ ಬಾವಿ ಒತ್ತುವರಿ

ಈಗಾಗಲೇ ರಮಾನಂದ ಅವೃತರಿಗೆ ಜಾಗದ ಬಾಬ್ತು ಪರಿಹಾರವನ್ನು ನೀಡಲಾಗಿದ್ದು ಅದರಲ್ಲಿ ಬಾವಿಯ ಕುರಿತು ಉಲ್ಲೇಖವೇ ಇಲ್ಲವಾಗಿದೆ. ಲಕ್ಷಾಂತರ ರೂ.ಖರ್ಚು ಮಾಡಿ ಬಾವಿಯನ್ನು ಮಾಡಿದ್ದು ಪೈಸೆ ಪರಿಹಾರವನ್ನು ನೀಡದೆ ಬಾವಿಯನ್ನು ಒತ್ತುವರಿ ಮಾಡುತ್ತಿರುವುದು ಚಿಂತೆಗೆ ಕಾರಣವಾಗಿದೆ. ಪರಿಹಾರವನ್ನು ನೀಡಿದರೂ ಈ ರೀತಿಯಾಗಿ ವಿಫುಲವಾಗಿ ನೀರು ದೊರೆಯುವ ಸ್ಥಳ ಬೇರೊಂದಿಲ್ಲ ಎನ್ನುವ ಅವರು, ತಮಗೆ ಇಷ್ಟೇ ನೀರಿರುವ ಇನ್ನೊಂದು ಬಾವಿಯನ್ನು ಕಂಪೆನಿಯೇ ಕೊರೆಸಿ ಕೊಡಲಿ ಎನ್ನುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X