Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ...

ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸ್ಥಳಾಂತರಕ್ಕೆ ಜಾಗ ಗುರುತು

ವಾರ್ತಾಭಾರತಿವಾರ್ತಾಭಾರತಿ2 Jun 2016 10:24 PM IST
share
ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸ್ಥಳಾಂತರಕ್ಕೆ ಜಾಗ ಗುರುತು

ಮೂಡಿಗೆರೆ, ಜೂ.2: ಪಟ್ಟಣದ ಹೃದಯ ಭಾಗದಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣವನ್ನು ಸ್ಥಳಾಂತರಿಸಲು ಈಗಾಗಲೇ ಜಾಗ ಗುರುತಿಸಲಾಗಿದೆ ಎಂದು ಶಾಸಕ ಬಿ.ಬಿ.ನಿಂಗಯ್ಯ ಹೇಳಿದ್ದಾರೆ.

 ಅವರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ನಡೆದ ವಾಹನ ದಟ್ಟಣೆ ಪರಿಹಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಟ್ಟಣದ ವಿದ್ಯಾನಗರದಲ್ಲಿ ಶುಕ್ರವಾರ ನಡೆಯುವ ಸಂತೆಯಿಂದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಓದಿಗೆ ತೊಂದರೆಯುಂಟಾಗುವ ದೂರುಗಳಿವೆ. ಆದ್ದರಿಂದ ಸಂತೆಯನ್ನು ಅದೇ ಸ್ಥಳದಲ್ಲಿ ರವಿವಾರ ನಡೆಸಲು ಜನಾಭಿಪ್ರಾಯ ಪಡೆದು ನಿರ್ಧರಿಸಲಾಗುವುದು ಅಥವಾ ಸಂತೆಯ ಸ್ಥಳಾಂತರಗೊಳಿಸಲು ಜಾಗವನ್ನು ಗುರುತಿಸಲಾಗುವುದು ಎಂದರು.

ಕೆ.ಎಂ.ರಸ್ತೆಯು ರಾಷ್ಟ್ರೀಯ ಹೆದ್ದಾರಿಯಾಗಿ ರುವುದರಿಂದ ಬೈಪಾಸ್ ರಸ್ತೆ ಅಥವಾ ಈ ರಸ್ತೆಯನ್ನು ಹೆದ್ದಾರಿ ಪ್ರಾಧಿಕಾರವೇ ಅಗಲಗೊಳಿಸುತ್ತದೆ. ಪಟ್ಟಣದ ರಸ್ತೆ ಅಭಿವೃದ್ಧಿಗೆ ಸರಕಾರದಿಂದ 5ಕೋಟಿ ರೂ. ಅನುದಾನ ಈಗಾಗಲೇ ಬಿಡುಗಡೆಯಾಗಿದೆ. ಈ ಹಣದಲ್ಲಿ ಪಟ್ಟಣದ ಎಲ್ಲ ಬಡಾವಣೆಗಳ ರಸ್ತೆಗಳಿಗೂ ಕಾಂಕ್ರಿಟೀಕರಣಗೊಳಿಸಲಾಗುವುದು. ಎಂ.ಜಿ.ರಸ್ತೆ, ಪಿ.ಟಿ.ರಸ್ತೆ, ಜೆ.ಎಂ.ರಸ್ತೆ, ತತ್ಕೊಳ ರಸ್ತೆ ಅಗಲೀಕರಣಕ್ಕೆ ಕ್ರಮ ಜರಗಿಸಲಾಗುವುದು ಎಂದು ತಿಳಿಸಿದರು.

ಟ್ರಾಕ್ಟರ್ ಹಾಗೂ ಟಿಪ್ಪರ್‌ಗಳ ಚಾಲಕರು ಮನಸೋ ಇಚ್ಛೆಯಂತೆ ಪಟ್ಟಣದ ಬಹುತೇಕ ಎಲ್ಲ ರಸ್ತೆಗಳಲ್ಲೂ ಮರಳು ಹಾಗೂ ಜೆಲ್ಲಿಯನ್ನು ನಡು ರಸ್ತೆಗೆ ಸುರಿದು ವಾಹನಗಳ ಸಂಚಾರಕ್ಕೆ ತೊಂದರೆ ಉಂಟು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ರಾಕ್ಟರ್ ಹಾಗೂ ಟಿಪ್ಪರ್ ಮತ್ತು ಟಿಲ್ಲರ್‌ಗಳಂತ ವಾಹನಗಳನ್ನು ಹಗಲು ಪಟ್ಟಣದ ಸಣ್ಣಪುಟ್ಟ ಸ್ಥಳಗಳಲ್ಲಿ ರಸ್ತೆಗಳಲ್ಲಿ ಸಂಚರಿಸುವುದನ್ನು ತಡೆಯಬೇಕಾಗಿದೆ. ಮೂಡಿಗೆರೆ ಬಸ್ ನಿಲ್ದಾಣ ಹಾಗೂ ಕೊಟ್ಟಿಗೆಹಾರದಲ್ಲಿ ಪೊಲೀಸ್ ಚೌಕಿ ನಿರ್ಮಿಸಬೇಕು. ವಾಹನ ದಟ್ಟಣೆ ನಿರ್ವಹಣೆಗೆ ಟ್ರಾಫಿಕ್ ಪೊಲೀಸ್ ನಿಯೋಜಿಸಬೇಕು. ಕೊರತೆ ಇರುವ ಪೊಲೀಸ್ ಠಾಣೆಗಳಿಗೆ ಸಿಬ್ಬಂದಿ ನಿಯೋಜಿಸಬೇಕು ಎಂದು ಕರ್ನಾಟಕ ಬ್ಯಾರಿ ಅಕಾಡೆಮಿ ಸದಸ್ಯ ಕಿರುಗುಂದ ಅಬ್ಬಾಸ್ ಸಭೆಯಲ್ಲಿ ಒತ್ತಾಯಿಸಿದರು.

ಅರಣ್ಯ ಇಲಾಖೆ ಕಚೇರಿಯಿಂದ ಪೊಲೀಸ್ ಠಾಣೆವರೆಗೆ ಕಾರು ಮತ್ತು ಬೈಕ್‌ಗಳಿಗೆ ಪಾರ್ಕಿಂಗ್ ಸ್ಥಳವನ್ನು ನಿಗದಿಪಡಿಸಿ ವಾಹನ ದಟ್ಟಣೆ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಬಿಎಸ್ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕವಳ್ಳಿ ರಮೇಶ್ ಆಗ್ರಹಿಸಿದರು.

ಸಭೆಯಲ್ಲಿ ಸಾರ್ವಜನಿಕರ ಸಮಗ್ರ ಅಭಿಪ್ರಾಯ ಪಡೆಯುವ ಮೂಲಕ ವಾಹನಗಳ ದಟ್ಟಣೆಯನ್ನು ನಿಯಂತ್ರಿಸಲು ಒಮ್ಮತದ ಕೆಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಟಿ.ಎ.ಮದೀಶ್, ಸದಸ್ಯೆ ಪೂರ್ಣಿಮಾ ಮಲ್ಯ, ವೃತ್ತ ನಿರೀಕ್ಷಕ ಜಗದೀಶ್, ಪಿಎಸೈ ಗವಿರಾಜ್, ಪಿಡಬ್ಲ್ಯೂಡಿ ಇಂಜಿನಿಯರ್ ಎ.ಸಿ.ಹಳಿಮನಿ, ಪತ್ರಕರ್ತ ಸಂಘದ ಅಧ್ಯಕ್ಷ ನಯನ ತಳವಾರ, ಮುಸ್ಲಿಮ್ ವೇದಿಕೆ ಅಧ್ಯಕ್ಷ ಸಿ.ಕೆ.ಇಬ್ರಾಹಿಂ, ಮುಹಮ್ಮದ್ ಶಬ್ಬೀರ್, ಗಣೇಶ್, ಸುದೀರ್, ಕಾಂಗ್ರೆಸ್ ಮುಖಂಡ ಬೆಟ್ಟಗೆರೆ ಮನೋಜ್, ಬಿಜೆಪಿ ಮುಖಂಡ ಹೆಸಗಲ್ ಗಿರೀಶ್, ಬಿಎಸ್ಪಿ ತಾಲೂಕು ಕಾರ್ಯದರ್ಶಿ ರಾಮು, ಸಮಾಜ ಸೇವಕ ಫಿಶ್ ಮೋಣು, ಜಯಕರ್ನಾಟಕ ಸಂಘದ ಅಧ್ಯಕ್ಷ ಸುದೀರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X