Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಪು ಪುರಸಭೆ: ಅಧ್ಯಕ್ಷರಾಗಿ ಸೌಮ್ಯ,...

ಕಾಪು ಪುರಸಭೆ: ಅಧ್ಯಕ್ಷರಾಗಿ ಸೌಮ್ಯ, ಉಪಾಧ್ಯಕ್ಷ ಕೆ.ಎಚ್.ಉಸ್ಮಾನ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ4 Jun 2016 5:33 PM IST
share
ಕಾಪು ಪುರಸಭೆ: ಅಧ್ಯಕ್ಷರಾಗಿ ಸೌಮ್ಯ, ಉಪಾಧ್ಯಕ್ಷ ಕೆ.ಎಚ್.ಉಸ್ಮಾನ್ ಆಯ್ಕೆ

ಕಾಪು : ನೂತನ ಕಾಪು ಪುರಸಭೆಯ ಚೊಚ್ಚಲ ಅಧ್ಯಕ್ಷರಾಗಿ ಮೊದಲ 20ತಿಂಗಳ ಅವಧಿಗೆ ಕಾಂಗ್ರೆಸ್ ಪಕ್ಷದ ಸೌಮ್ಯ ಹಾಗೂ ಉಪಾಧ್ಯಕ್ಷರಾಗಿ ಕೆ.ಎಚ್.ಉಸ್ಮಾನ್ ಆಯ್ಕೆಯಾದರು.

ಕಾಪು ಪುರಸಭಾ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಚುನಾವಣಾ ಪ್ರಕ್ರಿಯಲ್ಲಿ ಕೋತಲ್‌ಕಟ್ಟೆ ವಾರ್ಡ್‌ನಿಂದ ಕಾಂಗ್ರೆಸ್ ಪಕ್ಷದಿಂದ ಚುನಾಯಿತರಾಗಿದ್ದ ಸೌಮ್ಯ ಸಂಜೀವ ಅವರು ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಕೊಂಬಗುಡ್ಡೆ ವಾರ್ಡ್‌ನಿಂದ ಚುನಾಯಿತರಾಗಿದ್ದ ಅರುಣ್ ಶೆಟ್ಟಿ ಪಾದೂರು ಅವರನ್ನು ಕಾಂಗ್ರೆಸ್‌ನ ಕೊಪ್ಪಲಂಗಡಿ ವಾರ್ಡ್‌ನಿಂದ ಆಯ್ಕೆಯಾದ ಕೆ.ಎಚ್.ಉಸ್ಮಾನ್ ಅವರು 11-13ಮತಗಳಿಂದ ಸೋಲಿಸಿ ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಕೆ.ಎಚ್.ಉಸ್ಮಾನ್ ಹಾಗೂ ಶಾಬು ಸಾಹೇಬ್ ಬಿಜೆಪಿಯಿಂದ ಅರುಣ್ ಶೆಟ್ದ ಪಾದೂರು ನಾಮಪತ್ರ ಸಲ್ಲಿಸಿದ್ದದರು. ಈ ವೇಳೇ ಶಾಬು ಸಾಹೇಬ್ ನಾಮಪತ್ರ ಹಿಂದೆಗೆದುಕೊಂಡರು. ಕೈ ಎತ್ತುವ ಮೂಲಕ ಆಯ್ಕೆಪ್ರಕ್ರಿಯೆ ನಡೆಯಿತು. ಉಸ್ಮಾನ್ ಪರ ಸಚಿವ ವಿನಯಕುಮಾರ್ ಸೊರಕೆ ಸೇರಿ 13ಮತಗಳನ್ನು ಪಡೆದರೆ ಅರುಣ್ ಶೆಟ್ಟಿ ಅವರಿಗೆ 11ಮತಗಳನ್ನು ಲಭಿಸಿತು.

ಉಡುಪಿ ತಹಶೀಲ್ದಾರ್ ಟಿ.ಜಿ.ಗುರುಪ್ರಸಾದ್ ಚುನಾವಣಾ ಪ್ರಕ್ರಿಯೆ ನಡೆಸಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಘೋಷಿಸಿದರು.

ಪದವೀಧರೆಯಾಗಿರು ಸೌಮ್ಯ: 28 ವರ್ಷದ ಸೌಮ್ಯ ಸಂಜೀವ ಮೊದಲ ಬಾರಿಗೆ ಪಕ್ಷದ ಪರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇಲ್ಲಿನ ಬಬ್ಬುಸ್ವಾಮಿ ದೈವಸ್ಥಾನದ ಗುರಿಕಾರ ಸಂಜೀವ ಹಾಗೂ ಬೇಬಿ ದಂಪತಿಯ ಪುತ್ರಿಯಾಗಿದ್ದಾರೆ. ಬಿಎ, ಬಿಎಡ್ ಪದವೀಧರೆಯಾಗಿದ್ದು, ಪ್ರಸ್ತುತ ಕಾಪುವಿನ ಉಳಿಯರಗೋಳಿ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈಕೆ ಕೋತಲ್‌ಕಟ್ಟೆ ವಾರ್ಡ್‌ನಿಂದ ಆಯ್ಕೆಯಾಗಿದ್ದರು.

52ವರ್ಷದ ಕೆ.ಎಚ್.ಉಸ್ಮಾನ್ ಅವರು ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಪಿಯುಸಿ ಶಿಕ್ಷಣದ ಬಳಿಕ ಇಲೆಕ್ಟ್ರಿಕಲ್ ಡಿಪ್ಲೋಮಾ ಮುಗಿಸಿದ ಇವರು ಇಲೆಕ್ಟ್ರಿಕಲ್ ಸಂಸ್ಥೆಯೊಂದನ್ನು ಕಾಪುವವಿನಲ್ಲಿ ನಡೆಸುತಿದ್ದಾರೆ. ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಇವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿಯುತಿದ್ದರು. ಕೊಪ್ಪಲಂಗಡಿ ವಾರ್ಡ್‌ನಿಂದ ಆಯ್ಕೆಯಾಗಿದ್ದಾರೆ.

ಮೀಸಲಾತಿ: ಚುನಾವಣೆಯ ಮೊದಲೇ ಕಾಪು ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡಿತ್ತು. ಈ ಪ್ರಕಾರ ಅಧ್ಯಕ್ಷ ಸ್ಥಾನ ಪರಿಶಿಷ್ಠ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಪರಿಶಿಷ್ಠ ಜಾತಿ ಮಹಿಳೆ ಕಾಂಗ್ರೆಸ್‌ನಲ್ಲಿ ಇಬ್ಬರು ಇದ್ದು, ಬಿಜೆಪಿಯಲ್ಲಿ ಯಾವುದೇ ಅಭ್ಯರ್ಥಿಗಳು ಇರಲಿಲ್ಲ. ಇದರಿಂದಾಗಿ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿಲ್ಲ. ಆದರೆ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗವಾಗಿದ್ದರಿಂದ ಕಾಂಗ್ರೆಸ್‌ನಲ್ಲಿ ಪೈಪೋಟಿ ಇತ್ತು. ಈ ಲಾಭ ಪಡೆಯಲು ಬಿಜೆಪಿಯು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿತ್ತು.

ಮೂಲಸೌಕರ್ಯಕ್ಕೆ ಆದ್ಯತೆ: ಕಾಪು ಪರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು, ರಸ್ತೆ ಸಂಪರ್ಕ, ತ್ಯಾಜ್ಯ ವಿಲೇವರಿ ಬಗ್ಗೆ ಮೊದಲ ಆದ್ಯತೆ ನೀಡಲಾಗುವುದು. ಸಚಿವರಾದ ವಿನಯಕುಮಾರ್ ಸೊರಕೆ ಹಾಗೂ ಹಿರಿಯರ ಮಾರ್ಗದರ್ಶನದಿಂದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು ಎಂದು ಅಧ್ಯಕ್ಷರಾಗಿ ಆಯ್ಕೆಯಾದ ಸೌಮ್ಯ ಸಂಜೀವ ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.

ಮಾದರಿ ಪುರಸಭೆ: ಕಾಪುವನ್ನು ಎಲ್ಲಾ ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸಿ ಮಾದರಿ ಪುರಸಭೆಯಾಗಿ ರಾಜ್ಯ, ರಾಷ್ಟ್ರದಲ್ಲಿ ಗುರುತಿಸುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತೇವೆ. ಗಂಭೀರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡುವುದಲ್ಲದೆ. ಸಮಸ್ಯೆ ಹೇಳಿಕೊಂಡು ಬರುವವರ ಸಮಸ್ಯೆಯನ್ನು ಕೂಡಲೇ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಉಪಾಧ್ಯಕ್ಷರಾಗಿ ಆಯ್ಕೆಯಾದ ಕೆ.ಎಚ್.ಉಸ್ಮಾನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X