Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಾವೂರು ಪ್ರೌಢಶಾಲೆಯಲ್ಲಿ ಮಳೆನೀರು...

ಪಾವೂರು ಪ್ರೌಢಶಾಲೆಯಲ್ಲಿ ಮಳೆನೀರು ಮರುಪೂರಣ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ4 Jun 2016 6:42 PM IST
share
ಪಾವೂರು ಪ್ರೌಢಶಾಲೆಯಲ್ಲಿ ಮಳೆನೀರು ಮರುಪೂರಣ ಮಾಹಿತಿ

ಕೊಣಾಜೆ, ಜೂ 4:  ಹಿಂದೆಲ್ಲಾ 100ರಿಂದ200 ಅಡಿಯಲ್ಲಿ ನೀರು ಸಿಗುತ್ತಿತ್ತಾದರೂ ಇಂದು 600 ಅಡಿಯಲ್ಲೂ ನೀರು ಸಿಗುತ್ತಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಮಾತ್ರ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕಾಡುತ್ತಿತ್ತಾದರೂ ಈ ವರ್ಷ ದ.ಕ.ಜಿಲ್ಲೆಯಲ್ಲೂ ನೀರಿನ ಅಭಾವ ಅತಿಯಾಗಿ ಕಾಡಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲೂ ಜಲಕ್ಷಾಮದ ಮುನ್ಸೂಚನೆ ಇದಾಗಿದ್ದು ಈಗಲೇ ಎಚ್ಚರಗೊಳ್ಳಬೇಕು, ಯಾವುದೇ ಖರ್ಚಿಲ್ಲದೆ ಮಳೆಗಾಲದಲ್ಲಿ ತೆರೆದ ಬಾವಿ ಅಥವಾ ಕೊಳವೆ ಬಾವಿಗಳಿಗೆ ನೀರಿಂಗಿಸುವ ಮೂಲಕ ಮುಂದಿನ ವರ್ಷ ನೀರು ಸಮಸ್ಯೆಯಿಂದ ಪಾರಾಗಬಹುದು ಎಂದು ಮಳೆನೀರು ಪೂರಣ ತಜ್ಞ ಅಬ್ದುಲ್ ಖಾದರ್ ಹೇಳಿದರು.

ಎಸ್‌ಬಿಟಿ ಪಾವೂರು ಶಾಖೆ, ನಿರಂತರ ಸೋಶಿಯಲ್ ಸರ್ಕಲ್ ಇದರ ಸಹಯೋಗದಲ್ಲಿ ಶನಿವಾರ ಪಾವೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಜಲಪೂರಣ ಮಾಹಿತಿ ಮತ್ತು ಮಳೆನೀರ ಕೊಯ್ಲು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

ಹೊಸ ಮನೆ, ಕಟ್ಟಡ ನಿರ್ಮಾಣ ಸಂದರ್ಭ ಸ್ಥಳೀಯ ಸಂಸ್ಥೆಗಳು ಪರವಾನಿಗೆ ನೀಡುವಾಗ ಮಳೆನೀರು ಮರುಪೂರಣ ಕಡ್ಡಾಯಗೊಳಿಸಲಿ. ಇತ್ತೀಚೆಗೆ ಮರಗಳನ್ನು ಅತಿಯಾಗಿ ಕಡಿಯಲಾಗುತ್ತಿದ್ದು ಇದರ ಪರಿಣಾಮ ತಾಪಮಾನ ಹೆಚ್ಚಾಗುತ್ತಿದೆ. ಇದನ್ನು ಗಮನದಲ್ಲಿಟ್ಟು ಮರಗಳನ್ನು ಹೆಚ್ಚಾಗಿ ನೆಡುವ ಮೂಲಕ ಮುಂದಿನ ಪೀಳಿಗೆಗೆ ತಾಪಮಾನದಿಂದ ಮುಕ್ತಗೊಳಿಸಬೇಕು. ಶಾಲಾ ಮಟ್ಟದಲ್ಲೇ ಈ ಬಗ್ಗೆ ಜಾಗೃತಿ ಮೂಡಿಸಬೇಕಿದ್ದು, ಪಾವೂರು ಶಾಲೆ ಈ ವಿಷಯದಲ್ಲಿ ಮಾದರಿ ಎಂದರು.

    ಪಾವೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಟಿ.ಫಿರೋಜ್ ಮಾತನಾಡಿ, ಪಾವೂರು ಗ್ರಾಮದಲ್ಲೂ ಈ ವರ್ಷ ನೀರಿನ ಸಮಸ್ಯೆ ಅತಿಯಾಗಿ ಕಾಡಿದೆ, ಪೋಡಾರ್ ಎನ್ನುವ ಪ್ರದೇಶದ ಹೆಂಗಸರು ನೀರು ನೀಡುವಂತೆ ಒತ್ತಾಯಿಸಿ ಕರೆ ಮಾಡಿ ಕಣ್ಣೀರಿಟ್ಟಿದ್ದಾರೆ. ಜಿಲ್ಲೆಯಲ್ಲಿ ಎಷ್ಟೇ ಮಳೆ ಬಂದರೂ ಚರಂಡಿಯಲ್ಲಿ ಹರಿಯುವ ಕಾರಣ ಸಮಸ್ಯೆ ಎದುರಾಗುತ್ತಿದ್ದು, ಮಳೆನೀರು ತಡೆದಿಡುವ ಪ್ರಯತ್ನ ಶಾಲೆಯಿಂದ ಆರಂಭಗೊಂಡಿರುವ ಹೆಮ್ಮೆ ತಂದಿದೆ ಎಂದು ತಿಳಿಸಿದರು.

ನಾಟಿಮದ್ದು ತಜ್ಞ ಉಗ್ಗಪ್ಪ ಪೂಜಾರಿ ನಾಟಿಮದ್ದಿನ ಮಾಹಿತಿ ನೀಡಿದರು. ಎಸ್‌ಬಿಟಿ ಪಾವೂರು ಶಾಖೆಯ ವ್ಯವಸ್ಥಾಪಕ ಅಮಿತ್ ಪುಂದಿರ್ ಹಾಗೂ ಸಿಬ್ಬಂದಿ ಪೂಜಾರ್ ಲೋಕೇಶ್ ಉಪಸ್ಥಿತರಿದ್ದರು.

ಶಾಲೆಯ ಮುಖ್ಯ ಶಿಕ್ಷಕ ಡಾ.ಪ್ರಶಾಂತ್ ಕೆ.ಎಸ್. ಪ್ರಾಸ್ತಾವಿಕವಾಗಿ ಮಾತನ ಮಾತನಾಡಿದರು. ಶಿಕ್ಷಕ ಕರುಣಾ ವಂದಿಸಿದರು. ಶಿಕ್ಷಕಿ ಆಶಾವೀರಾವಾಸ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X