Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವಾಭಿಮಾನಿಗಳಾಗಿ ಬದುಕಿ ಎಂದು...

ಸ್ವಾಭಿಮಾನಿಗಳಾಗಿ ಬದುಕಿ ಎಂದು ಪೊಲೀಸರಿಗೆ ಕರೆ ನೀಡಿದ ನಕ್ಸಲರು

ವಾರ್ತಾಭಾರತಿವಾರ್ತಾಭಾರತಿ4 Jun 2016 10:21 PM IST
share
ಸ್ವಾಭಿಮಾನಿಗಳಾಗಿ ಬದುಕಿ ಎಂದು ಪೊಲೀಸರಿಗೆ ಕರೆ ನೀಡಿದ ನಕ್ಸಲರು

ತೀರ್ಥಹಳ್ಳಿ, ಜೂ.4: ಇಲ್ಲಿನ ಗಾರ್ಡರ ಗದ್ದೆ ಬಸ್‌ಸ್ಟಾಪ್‌ನಲ್ಲಿ ನಕ್ಸಲರ ಬ್ಯಾನರ್‌ವೊಂದು ಪತ್ತೆಯಾಗಿದ್ದು, ಅದರಲ್ಲಿ ಪೊಲೀಸರಿಗೆ ನಮ್ಮೆಂದಿಗೆ ಸ್ವಾಭಿಮಾನಿಗಳಾಗಿ ಬದುಕಿ ಎಂದು ಕರೆ ನೀಡಿದ್ದಾರೆ.

 ಇಂದು ರಾಜ್ಯಾದ್ಯಂತ ಪೊಲೀಸರು ಒಂದು ದಿನದ ಮುಷ್ಕರ ಹೂಡುವರೆಂದು ಸುದ್ದಿಯಾಗಿದ್ದು, ಅದೇ ಸಂದರ್ಭದಲ್ಲಿ ನಕ್ಸಲರದು ಎಂದು ಹೇಳಲಾಗಿರುವ ಈ ಬ್ಯಾನರಿನಲ್ಲಿ ಸೂರ್ಯನನ್ನು ಅಂಗೈನಿಂದ ಮುಚ್ಚಲು ಸಾಧ್ಯವಿಲ್ಲ. ಅಧಿಕಾರಶಾಹಿ ದಬ್ಬಾಳಿಕೆಯ ಸರಕಾರದ ನೀತಿಯಿಂದ ದುರ್ಬಲರ, ಬಡವರ ಶೋಷಣೆ ನಿರಂತರ. ಹಾಗಾಗಿ ಪೊಲೀಸರು ಈ ದಯನೀಯ ಸ್ಥಿತಿಯಿಂದ ಹೊರಬಂದು ನಮ್ಮನ್ನು ಬೆಂಬಲಿಸಿ ಸ್ವಾಭಿಮಾನಿಗಳಾಗಿ ಬದುಕಿ. ಜೀತದಾಳಾಗಿ ಬದುಕುವ ಬದಲು ನಮ್ಮನ್ನು ಬೆಂಬಲಿಸಿ -ಸಿಪಿಐ (ಮಾವೋವಾದಿ) ಎಂದು ಬರೆಯಲಾಗಿದೆ.

ಆಗುಂಬೆ ಪ್ರದೇಶದಲ್ಲಿ ನಕ್ಸಲರು ಕಾಣಿಸಿಕೊಳ್ಳುವುದು ವಿರಳವಾಗಿದೆ. ಅವರ ಕಾರ್ಯ ಚಟುವಟಿಕೆಯನ್ನು ನಿಲ್ಲಿಸಿದ್ದಾರೆ ಎನ್ನುವ ಹೊತ್ತಿಗೆ ಈ ಬ್ಯಾನರ್ ಕಾಣಿಸಿಕೊಂಡಿರುವುದು ಪೊಲೀಸ್ ಇಲಾಖೆಗೆ ತಲೆನೋವು ಉಂಟುಮಾಡಿದೆ.

ವಾಸ್ತವವಾಗಿ ಆಗುಂಬೆ ಪ್ರದೇಶದ ಸುತ್ತಮುತ್ತಲ ಹಳ್ಳಿಗಳು ಈಗಲೂ ಸಹ ಕುವೆಂಪುರವರ ಕಾದಂಬರಿಗಳಲ್ಲಿ ಕಂಡು ಬರುವಂತಹ ರಸ್ತೆಗಳ ವರ್ಣನೆಯಂತಹ ಸಾರಿಗೆ ವ್ಯವಸ್ಥೆಯನ್ನು ಹೊಂದಿದ್ದು, ಬದಲಾಗಿಲ್ಲ. ಅಲ್ಲದೇ ನಕ್ಸಲರು ಕಾಣಿಸಿಕೊಳ್ಳುವವರೆಗೂ ಚುನಾಯಿತ ಪ್ರತಿನಿಧಿಗಳಾಗಲಿ, ಸರಕಾರವಾಗಲಿ ಅಲ್ಲಿಗೆ ರಸ್ತೆ, ನೀರು, ವಿದ್ಯುತ್ ಸಂಪರ್ಕಗಳನ್ನು ಕಲ್ಪಿಸಿಕೊಡಬೇಕೆಂದು ಗಂಭೀರವಾಗಿ ಪ್ರಯತ್ನಿಸಿಯೂ ಇರಲಿಲ್ಲ.

2005ರಲ್ಲಿ ನಕ್ಸಲ್ ನಾಯಕ ಸಾಕೇತನ್ ರಾಜನ್ ಎನ್‌ಕೌಂಟರ್ ಬಳಿಕ ನಕ್ಸಲರು ದೊಡ್ಡ ಮಟ್ಟದಲ್ಲಿ ಇಲ್ಲಿ ಕಾರ್ಯಾಚರಣೆ ನಡೆಸುತ್ತಿರುವುದು ಬಯಲಿಗೆ ಬಂದಿತ್ತು. ಬಳಿಕ ಆಗುಂಬೆಯಲ್ಲಿ ನಕ್ಸಲ್ ನಿಗ್ರಹ ದಳವನ್ನು ಸ್ಥಾಪಿಸಲಾಗಿತ್ತಲ್ಲದೇ, ಅದು ಇಂದಿಗೂ ಕೂಡ ಕಾರ್ಯ ನಿರ್ವಹಿಸುತ್ತಿದೆ. ಅನುದಾನಗಳು ಕೂಡ ಕೋಟಿಗಳ ಲೆಕ್ಕದಲ್ಲಿ ಬಂದಿದ್ದರೂ ಹೇಳಿಕೊಳ್ಳುವಂತಹ ಕೆಲಸ ನಡೆದಿಲ್ಲ ಎನ್ನುತ್ತಾರೆ ಇಲ್ಲಿನ ಗ್ರಾಮಸ್ಥರು. ಅಲ್ಲದೆ ನಕ್ಸಲ್ ಪ್ಯಾಕೇಜ್ ನೆರವನ್ನು ಅಭಿವೃದ್ಧಿಯ ಹೆಸರಿನಲ್ಲಿ ದುರುಪಯೋಗ ಮಾಡಿಕೊಳ್ಳಲಾಗುತ್ತಿದ್ದು, ಗ್ರಾಮಗಳಿಗೆ ಅದರ ಪ್ರಯೋಜನ ತಲುಪಿದ್ದು ಸಹ ತೃಪ್ತಿದಾಯಕ ಮಟ್ಟದಲ್ಲಿಲ್ಲ ಎನ್ನುವುದು ಕೂಡ ಇಲ್ಲಿ ಸಾಮಾನ್ಯವಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಪೊಲೀಸರಿಗೆ ದಾಸ್ಯದಿಂದ ಹೊರ ಬನ್ನಿ ಎಂದು ನಕ್ಸಲರು ಕರೆ ನೀಡಿರುವುದು ಚರ್ಚೆಗೆ ಈಡಾಗಿದೆ. ವಿಚಾರ ತಿಳಿದ ತಕ್ಷಣ ಡಿವೈಎಸ್ಪಿ ರಾಮಚಂದ್ರ ನಾಯ್ಕಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಬ್ಯಾನರ್‌ನ್ನು ವಶಕ್ಕೆ ಪಡೆದುಕೊಂಡಿದ್ದು ಕ್ರಮ ಕೈಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X