Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಥುರಾ ಹಿಂಸಾಚಾರ: ರಾಜಕೀಯ...

ಮಥುರಾ ಹಿಂಸಾಚಾರ: ರಾಜಕೀಯ ಆರೋಪ-ಪ್ರತ್ಯಾರೋಪ

ವಾರ್ತಾಭಾರತಿವಾರ್ತಾಭಾರತಿ4 Jun 2016 10:31 PM IST
share
ಮಥುರಾ ಹಿಂಸಾಚಾರ: ರಾಜಕೀಯ ಆರೋಪ-ಪ್ರತ್ಯಾರೋಪ

ಮಥುರಾ, ಜೂ.4: ಮಥುರಾದ ಹೃದಯ ಭಾಗದಲ್ಲಿರುವ ವಿಸ್ತಾರವಾದ ಉದ್ಯಾನವನಕ್ಕೆ ಪ್ರವೇಶಿಸಿದ ಸುಮಾರು ಒಂದು ಸಾವಿರ ಪೊಲೀಸರ ಮೇಲೆ ಅಡಗು ದಾಳಿಗಳು ನಡೆದವು. ಮರಗಳ ಮೇಲಿನಿಂದ ಅವರ ಮೇಲೆ ಗುಂಡಿನ ಮಳೆ ಸುರಿಯಿತು. ನೆಲದಲ್ಲಿ ಸುಮಾರು 3 ಸಾವಿರದಷ್ಟಿದ್ದ ಅತಿಕ್ರಮಣಕಾರರ ಭೀಕರ ಗುಂಪೊಂದು ಖಡ್ಗ, ದೊಣ್ಣೆ ಹಾಗೂ ಗ್ರೆನೇಡ್‌ಗಳನ್ನು ಉಪಯೋಗಿಸಿ ಜೇನುನೊಣಗಳಂತೆ ಪೊಲೀಸರ ಮೇಲೆರಗಿದರು. ಗ್ಯಾಸ್ ಸಿಲಿಂಡರ್‌ಗಳಿಗೆ ಬೆಂಕಿ ಹಚ್ಚಿದಾಗ ಜ್ವಾಲೆಗಳು ಭುಗಿಲೆದ್ದವು. ಎರಡು ವರ್ಷಗಳ ಹಿಂದೆ ತಾವು ಝಂಡಾ ಊರಿದ್ದ ಜವಾಹರಬಾಗನ್ನು ಅತಿಕ್ರಮಣಕಾರರು ತೆರವುಗೊಳಿಸಬೇಕಾದರೆ 2 ತಾಸು ಹಿಡಿಯಿತು.

24 ಮಂದಿ ಹಿಂಸಾಚಾರಕ್ಕೆ ಬಲಿಯಾದರು. ಅವರಲ್ಲಿಬ್ಬರು ಪೊಲೀಸ್ ಅಧಿಕಾರಿಗಳಾದರೆ, ಉಳಿದವರು, ಸ್ವಯಂಘೋಷಿತ ‘ಸ್ವಾಧೀನ್ ಭಾರತ್ ವಿಧಿಕ್ ಸತ್ಯಾಗ್ರಹ್’ ಎಂಬ ಪಂಥವೊಂದರ ಸದಸ್ಯರು. ತಾವು ರಾಜಕೀಯ ಹಾಗೂ ಸಾಮಾಜಿಕ ಕ್ರಾಂತಿಕಾರಿಗಳೆಂದು ಹೇಳಿಕೊಳ್ಳುತ್ತಿರುವ ಅವರು, ಚುನಾವಣೆಗಳ ರದ್ದತಿ ಹಾಗೂ ಪ್ರತಿಯೊಬ್ಬನಿಗೆ ಅಗ್ಗದ ಇಂಧನಕ್ಕಾಗಿ ತಾವು ಹೋರಾಡುತ್ತಿದ್ದೇವೆಂದು ಪ್ರತಿಪಾದಿಸುತ್ತಿದ್ದಾರೆ.
ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಹಾಗೂ ಮುಂದಿನ ಪ್ರಧಾನಿ ಯಾರೆಂದು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಉತ್ತರಪ್ರದೇಶದಲ್ಲಿ ಈ ದುರಂತವು ತಕ್ಷಣವೇ ರಾಜಕೀಯದೊಂದಿಗೆ ಬೆರಕೆಯಾಗಿದೆ.


ತಾನು ಮುಖ್ಯಮಂತ್ರಿ ಅಖಿಲೇಶ್ ಯಾದವ್‌ಗೆ ದೂರವಾಣಿ ಕರೆ ಮಾಡಿ ಕೇಂದ್ರದಿಂದ ಸರ್ವಸಾಧ್ಯ ನೆರವಿನ ಭರವಸೆ ನೀಡಿದ್ದೇನೆಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಟ್ವೀಟಿಸಿದ್ದರು. ಆದರೆ, ಅವರ ಸಹಾಯಕ ಕಿರೇನ್ ರಿಜಿಜು, ಈ ಅನಾಹುತ ಒಂದು ‘ವೈಫಲ್ಯ’ವಾಗಿದೆ. ಅದೇಕಾಯಿತೆಂಬ ಕುರಿತು ರಾಜ್ಯ ಸರಕಾರ ತನಿಖೆ ನಡೆಸಬೇಕೆಂದಿದ್ದಾರೆ. ಉತ್ತರಪ್ರದೇಶದ ಬಿಜೆಪಿ ಅಧ್ಯಕ್ಷ ಕೇಶವ ಪ್ರಸಾದ್ ವೌರ್ಯ ಇನ್ನೊಂದು ಹೆಜ್ಜೆ ಮುಂದೆ ಹೋಗಿ, ಈ ಪಂಥಕ್ಕೆ ಮುಖ್ಯಮಂತ್ರಿಯ ಚಿಕ್ಕಪ್ಪ ಹಾಗೂ ಸಚಿವ ಶಿವಪಾಲ್ ಯಾದವ್‌ರ ಆಶ್ರಯವಿದೆಯೆಂದು ಆರೋ ಪಿಸಿದ್ದಾರೆ. ಅದಕ್ಕೆ ತಿರುಗೇಟು ನೀಡಿರುವ ಯಾದವ್, ‘ಆರೋಪ ಸಾಬೀತುಪಡಿಸಿ, ಇಲ್ಲವೇ ಬಹಿರಂಗವಾಗಿ ಕ್ಷಮೆ ಯಾಚಿಸಿ’ ಎಂದು ಸವಾಲು ಹಾಕಿದ್ದಾರೆ.
ಪಕ್ಷಪಾತರಹಿತ ತನಿಖೆಯ ಪಣ ತೊಟ್ಟಿರುವ ಮುಖ್ಯಮಂತ್ರಿ, ಪ್ರಮಾದವೊಂದು ಸಂಭವಿಸಿದೆ. ಪೊಲೀಸರು ಸರಿಯಾದ ಸನ್ನದ್ಧತೆ ಮಾಡಿಕೊಂಡಿರಲಿಲ್ಲ ಎಂದಿದ್ದಾರೆ.
ತಮ್ಮ ಜಾತಿಯವರನ್ನು ಓಲೈಸಲು ಮುಖ್ಯಮಂತ್ರಿ ಹಾಗೂ ಅವರ ಕುಟುಂಬಿಕರ ಒತ್ತಾಸೆಯಂತೆ, ಪೊಲೀಸ್ ಪಡೆಯಲ್ಲಿ ಯಾದವರನ್ನು ಅಳತೆ ಮೀರಿ ನೇಮಕ ಮಾಡಿಕೊಂಡಿರುವುದೇ ಯಾದವರ ಪ್ರಾಬಲ್ಯದ ಈ ಪಂಥವು ಅನೇಕ ವರ್ಷಗಳಿಂದ ಬೆಳೆದು ಬರಲು ಅವಕಾಶ ನೀಡಿತೆಂದು ಬಿಜೆಪಿಯ ಇತರ ನಾಯಕರು ಆರೋಪಿಸಿದ್ದಾರೆ.
ಆದರೆ, ಒಂದಂತೂ ಸ್ಪಷ್ಟ. ಆ ಪಂಥವು ಸಂಗ್ರಹಿಸಿರುವ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕಗಳನ್ನು ಪೊಲೀಸರು ಅಥವಾ ಆಡಳಿತಾಧಿ ಕಾರಿಗಳ ಗಮನಕ್ಕೆ ಬಾರದೆ ಸಂಗ್ರಹಿಸುವುದು ಭಾರೀ ಕಷ್ಟ. ಅದರ ಬಳಿ ಭಾರೀ ಶಸ್ತ್ರಾಸ್ತ್ರಗಳಿರುವುದು ಈ ಹಿಂದಿನ ತೆರವು ಪ್ರಯತ್ನಗಳ ವೇಳೆಯೇ ಸಾಬೀತಾಗಿತ್ತು.
ಮಥುರೆಯ ಸಂಸದೆ ಹೇಮಾಮಾಲಿನಿಯವರ ಕಾರಣದಿಂದಾಗಿ ಬಿಜೆಪಿ ಭಾರೀ ಹಿನ್ನಡೆ ಕಂಡಿದೆ. ಹಿಂಸಾಚಾರ ನಡೆದ ಕೆಲವೇ ತಾಸುಗಳ ಬಳಿಕ, ಸಂಸದೆ, ತನ್ನ ಇತ್ತೀಚಿನ ಚಿತ್ರದ ತನ್ನ ಫೊಟೊಗಳನ್ನು ಟ್ವೀಟರ್‌ಗೆ ಹಾಕಿದ್ದರು. ಬಳಿಕ ಅವುಗಳನ್ನು ಹೇಮಮಾಲಿನಿ, ಅಳಿಸಿದ್ದು, ತಾನು ಮಥುರೆಗೆ ಹೋಗುತ್ತಿದ್ದೇನೆಂದು ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X