Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನತಾ ವ್ಯಾಯಾಮ ಶಾಲೆಯ ಜಮೀನು ವಿವಾ:...

ಜನತಾ ವ್ಯಾಯಾಮ ಶಾಲೆಯ ಜಮೀನು ವಿವಾ: ಆರೋಪ-ಪ್ರತ್ಯಾರೋಪ

ವಾರ್ತಾಭಾರತಿವಾರ್ತಾಭಾರತಿ4 Jun 2016 11:44 PM IST
share

ಉಡುಪಿ, ಜೂ.4: ಕ್ಷುಲ್ಲಕ ಕಾರಣಕ್ಕಾಗಿ ಕೆಲವು ವ್ಯಕ್ತಿಗಳ ಒತ್ತಡಕ್ಕೆ ಮಣಿದು ದೊಡ್ಡಣಗುಡ್ಡೆಯಲ್ಲಿರುವ ಜನತಾ ವ್ಯಾಯಾಮ ಶಾಲೆಯ ಜಮೀನನ್ನು ವಶಪಡಿಸಿಕೊಳ್ಳಲು ನಗರಸಭೆ ಮುಂದಾಗಿದೆ ಎಂದು ವ್ಯಾಯಾಮ ಶಾಲೆಯ ಅಧ್ಯಕ್ಷ ಡಿ.ರಾಮದಾಸ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಜನತಾ ವ್ಯಾಯಾಮ ಶಾಲೆ ದೊಡ್ಡಣಗುಡ್ಡೆಯ 72 ಸೆನ್ಸ್ ಜಾಗದಲ್ಲಿ 1967ರಿಂದ ಕಾರ್ಯಾಚರಿಸುತ್ತಿದೆ. ಸಂಸ್ಥೆಯ ಕಟ್ಟಡಕ್ಕೆ ನೀಡಿದ ಡೋರ್ ನಂ.ಅನ್ನು ಸಂಸ್ಥೆಯ ಗಮನಕ್ಕೆ ತಾರದೆ ಏಕಾಏಕಿ ರದ್ದುಗೊಳಿಸಿದ್ದು, ಇದರ ಹಿಂದೆ ಕೆಲವು ವ್ಯಕ್ತಿಗಳ ಹಿತಾಸಕ್ತಿ ಅಡಗಿದೆ ಎಂದು ಅವರು ಆರೋಪಿಸಿದರು.
 ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಕೆ.ರಘುಪತಿ ಭಟ್, ಪ್ರಭಾಕರ ಪೂಜಾರಿ, ರಾಧಾಕೃಷ್ಣ ಶೆಟ್ಟಿ,ವಿಠಲ ಗಾಣಿಗ, ಡಿ.ಬಾಲಕೃಷ್ಣ ಶೆಟ್ಟಿ, ಡಾ.ಅಮ್ಮುಂಜೆ ಅರವಿಂದ ನಾಯಕ್, ನರಸಿಂಹ ಶೆಟ್ಟಿ, ಸೀತಾರಾಮ ಶೆಟ್ಟಿ, ಬಾಬು ಗೌಡ, ಸರಸ್ವತಿ ಡಿ.ಶೆಟ್ಟಿ, ಚಂದ್ರಾವತಿ, ರಾಮಚಂದ್ರ ತಂತ್ರಿ ಮುಂತಾದವರು ಉಪಸ್ಥಿತರಿದ್ದರು.
 ಸರಕಾರಿ ಜಾಗ ತೆರವಿಗೆ ಆಗ್ರಹ: ಶಿವಳ್ಳಿ ಗ್ರಾಮದ ದೊಡ್ಡಣಗುಡ್ಡೆಯಲ್ಲಿ ಸರಕಾರಿ ಜಾಗವನ್ನು ಅತಿಕ್ರಮಿಸಿ ಅನಧಿಕೃತವಾಗಿ ಕಟ್ಟಡವನ್ನು ನಿರ್ಮಿಸಲಾಗಿದ್ದು, ಕೂಡಲೇ ತಹಶೀಲ್ದಾರ್ ಈ ಜಾಗವನ್ನು ವಶಪಡಿಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಸರಕಾರಿ ಭೂಮಿ ಸಂರಕ್ಷಣಾ ಸಮಿತಿಯ ಜನಾರ್ದನ ಭಂಡಾರ್ಕರ್ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಈ ಜಾಗದಲ್ಲಿ ಜನತಾ ವ್ಯಾಯಾಮ ಶಾಲೆಯನ್ನು ಮತ್ತು ಸಭಾಂಗಣವನ್ನು ನಿರ್ಮಿಸಿ ವಾಣಿಜ್ಯ ಉದ್ದೇಶಕ್ಕಾಗಿ ಬಳಸಲಾಗುತ್ತಿದೆ. ಅದೇ ರೀತಿ ಈ ಜಾಗದಲ್ಲಿ ಎರಡು ಅಂಗನವಾಡಿ ಕೇಂದ್ರಗಳನ್ನು ಅಕ್ರಮ ಚಟುವಟಿಕೆಗಳಿಗಾಗಿ ಬಳಸಿರುವ ಕುರಿತು ಜಿಲ್ಲಾಧಿಕಾರಿ ಹಾಗೂ ಪೌರಾಯುಕ್ತರಿಗೆ ದಾಖಲೆ ಸಹಿತ ದೂರು ನೀಡಲಾಗಿತ್ತು. ಆ ಹಿನ್ನೆಲೆಯಲ್ಲಿ ಪೌರಾಯುಕ್ತರು ಈ ಜಮೀನಿನಲ್ಲಿರುವ ಅನಧಿಕೃತ ಕಟ್ಟಡವನ್ನು ತೆರವುಗೊಳಿಸುವಂತೆ ಆದೇಶ ನೀಡಿದ್ದರು. ಅದರಂತೆ ಮೇ 19ರಂದು ಉಡುಪಿ ನಗರಸಭೆಯಿಂದ ಕಂದಾಯ ನಿರೀಕ್ಷಕರ ನೇತೃತ್ವದಲ್ಲಿ ಈ ಜಾಗವನ್ನು ವಶಕ್ಕೆ ತೆಗೆದುಕೊಳ್ಳಲು ಕಾರ್ಯಾಚರಣೆ ನಡೆದಿದ್ದು, ಇದಕ್ಕೆ ಕೆಲವು ಹಿಂದುತ್ವವಾದಿ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಸರಕಾರಿ ಆದೇಶ ಜಾರಿ ಮಾಡಲು ತಡೆಯೊಡ್ಡಿದ್ದರು ಎಂದು ಆರೋಪಿಸಿದರು
ಸುದ್ದಿಗೋಷ್ಠಿಯಲ್ಲಿ ನಗರಸಭೆ ಸದಸ್ಯರಾದ ಆರ್.ಕೆ.ರಮೇಶ್, ಸತೀಶ್ ಪುತ್ರನ್, ಶ್ರೀನಿವಾಸ್ ಹೆಬ್ಬಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X