Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಮಲಿನ ಗಾಳಿಯನ್ನು ಸೇವಿಸಿದಿರಿ ಜೋಕೆ

ಮಲಿನ ಗಾಳಿಯನ್ನು ಸೇವಿಸಿದಿರಿ ಜೋಕೆ

ವಾಯುಮಾಲಿನ್ಯದಿಂದ ರಕ್ತದೊತ್ತಡ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ5 Jun 2016 11:38 AM IST
share
ಮಲಿನ ಗಾಳಿಯನ್ನು ಸೇವಿಸಿದಿರಿ ಜೋಕೆ

ಕಲ್ಲಿದ್ದಲು ಉರಿಸುವುದು, ವಾಹನದ ಹೊಗೆ, ಗಾಳಿಯಲ್ಲಿರುವ ಧೂಳು ಮತ್ತು ಕೊಳೆಗಳು ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ತರಬಹುದು ಎಂದು ಹೊಸ ಅಧ್ಯಯನವೊಂದು ಎಚ್ಚರಿಸಿದೆ. ಅಧಿಕ ರಕ್ತದೊತ್ತಡವನ್ನು ಸಿಸ್ಟೋಲಿಕ್ ಬ್ಲಡ್ ಪ್ರೆಶರ್ ಎಂದು ವ್ಯಾಖ್ಯಾನಿಸಬಹುದು. ಅಧ್ಯಯನ ಹೇಳಿರುವ ಪ್ರಕಾರ ಅಲ್ಪಾವಧಿ ಮತ್ತು ಧೀರ್ಘಾವಧಿಯಲ್ಲಿ ವಾಯು ಸಂಬಂಧಿತ ಮಾಲಿನ್ಯಗಳಿಗೆ ತೆರೆದುಕೊಳ್ಳುವುದು ಆರೋಗ್ಯಕ್ಕೆ ಅಪಾಯಕಾರಿ.

ಉರಿಯುವ ಇದ್ದಿಲಿನ ಇಂಧನದಿಂದ ಗಾಳಿಗೆ ಸೇರುವ ಸಲ್ಫರ್ ಡೈ ಆಕ್ಸೈಡ್ ಮತ್ತು ಗಾಳಿಯಲ್ಲಿರುವ ಕಣಗಳಿಂದ, ಕೊಳೆ, ಧೂಳು, ಹೊಗೆ ಮತ್ತು ದ್ರವರೂಪದ ಭಾಷ್ಪಗಳಿಂದ ನೈಟ್ರೋಜನ್ ಆಕ್ಸೈಡ್ ಗಾಳಿಯಿಂದ ಮಾನವ ದೇಹಕ್ಕೆ ಹೋಗುತ್ತದೆ. ಇವುಗಳು ಅತಿಯಾಗಿ ರಕ್ತದ ಒತ್ತಡದ ಮಟ್ಟವನ್ನು ಏರಿಸಲಿವೆ. ವಾಯು ಮಾಲಿನ್ಯದಿಂದ ರಕ್ತದೊತ್ತಡ ಹೆಚ್ಚಾಗುವ ಬಗ್ಗೆ ಅಧ್ಯಯನದಲ್ಲಿ ಸಾಕಷ್ಟು ಸಾಕ್ಷ್ಯಗಳು ಸಿಕ್ಕಿವೆ ಎಂದು ಅಧ್ಯಯನ ಮಾಡಿರುವ ಚೀನಾದ ಸಾರ್ವಜನಿಕ ಆರೋಗ್ಯ ಸಂಸ್ಥೆಯ ಸಂಶೋಧಕ ತಾವೋ ಲಿಯು ಹೇಳಿದ್ದಾರೆ. ಇಷ್ಟೇ ಅಲ್ಲದೆ, ವಾಯು ಮಾಲಿನ್ಯವು ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡಕ್ಕೂ ಕಾರಣವಾಗಬಹುದು. ರಕ್ತನಾಳಗಳಲ್ಲಿ ಬದಲಾವಣೆಗಳನ್ನೂ ತರುವ ಸಾಧ್ಯತೆಯಿದೆ. ಅಧಿಕ ರಕ್ತದೊತ್ತಡವನ್ನು ಹೃದಯ ರೋಗಗಳು ಮತ್ತು ಹೃದಯಾಘಾತಗಳಿಗೆ ಕಾರಣವಾಗುವ ಅಪಾಯವೆಂದು ಈಗಾಗಲೇ ಗುರುತಿಸಲಾಗಿದೆ. ಹೀಗಾಗಿ ಜನರು ಅಧಿಕ ವಾಯು ಮಾಲಿನ್ಯ ಮಟ್ಟಗಳಿರುವ ದಿನಗಳಲ್ಲಿ ಹೊರಗೆ ಹೋಗುವುದನ್ನು ಕಡಿಮೆ ಮಾಡಬೇಕು. ಮುಖ್ಯವಾಗಿ ಈಗಾಗಲೇ ಅಧಿಕ ರಕ್ತದೊತ್ತಡದ ಸಮಸ್ಯೆ ಇರುವವರು ಸಣ್ಣ ಮಟ್ಟಿಗೆ ವಾಯುಮಾಲಿನ್ಯದ ಸ್ಥಿತಿಯನ್ನು ಎದುರಿಸಿದರೂ ಸಮಸ್ಯೆಗೆ ಒಳಗಾಗುತ್ತಾರೆ ಎಂದು ಲಿಯು ಹೇಳಿದ್ದಾರೆ.

ಸಂಶೋಧಕರ ತಂಡವು 17 ಅಧ್ಯಯನಗಳ ವಿಶ್ಲೇಷಣೆ ಮಾಡಿದೆ. ಅದರಲ್ಲಿ 1,08,000 ಅಧಿಕ ರಕ್ತದೊತ್ತಡ ಇರುವ ರೋಗಿಗಳು ಮತ್ತು 2,20,000 ರಕ್ತದೊತ್ತಡ ಸಮಸ್ಯೆ ಇಲ್ಲದವರನ್ನು ವಿಶ್ಲೇಷಿಸಲಾಗಿದೆ. ಹಾಗೆ ರಕ್ತದೊತ್ತಡದ ಅಪಾಯದ ಮೇಲೆ ಪರಿಣಾಮ ಬೀರುವ ಎಲ್ಲಾ ರೀತಿಯ ವಾಯು ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲಾಗಿದೆ. ಸಮೀಪದ ವಾಯು ಮಾಲಿನ್ಯ ನಿಯಂತ್ರಣ ನಿಲ್ದಾಣಗಳ ವಿವರಗಳನ್ನು ಪಡೆದು ವಾಯು ಮಾಲಿನ್ಯವನ್ನು ವಿಶ್ಲೇಷಿಸಲಾಗಿದೆ.

ಕೃಪೆ: indianexpress.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X