Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಈ ಗ್ರಾಮದಲ್ಲಿ ಸಣ್ಣ ಕೃಷಿ ಉಪಕರಣಗಳೂ...

ಈ ಗ್ರಾಮದಲ್ಲಿ ಸಣ್ಣ ಕೃಷಿ ಉಪಕರಣಗಳೂ ಬಾಡಿಗೆಗೆ ಲಭ್ಯ!

*ಸಣ್ಣ ರೈತರಿಗೆ ವರದಾನ

ವಾರ್ತಾಭಾರತಿವಾರ್ತಾಭಾರತಿ5 Jun 2016 6:38 PM IST
share
ಈ ಗ್ರಾಮದಲ್ಲಿ ಸಣ್ಣ ಕೃಷಿ ಉಪಕರಣಗಳೂ ಬಾಡಿಗೆಗೆ ಲಭ್ಯ!

ಮಂಗಳೂರು, ಜೂ.5: ಸಾವಿರಾರು ಎಕರೆಯ ಉಳುಮೆ, ಕೃಷಿ ಚಟುವಟಿಕೆಗಳಿಗೆ ಕೃಷಿ ಯಂತ್ರಗಳು ಸಲಕರಣೆಗಳು ಬಾಡಿಗೆಗೆ ನೀಡುವುದನ್ನು ಕೇಳಿದ್ದೇವೆ, ನೋಡಿದ್ದೇವೆ. ಆದರೆ ಸಣ್ಣ ರೈತರಿಗೆ ವರ್ಷದಲ್ಲಿ ಕೆಲ ದಿನಗಳು ಮಾತ್ರ ಅಗತ್ಯವಿರುವ ಬುಟ್ಟಿ, ಹಾರೆ, ಪಿಕ್ಕಾಸುಗಳನ್ನು ಬಾಡಿಗೆ ನೀಡುವುದನ್ನು ಕೇಳಿದ್ದೀರಾ? ನೋಡಿದ್ದೀರಾ?

ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಇಂತಹ ಒಂದು ಸಣ್ಣ ರೈತ ಸ್ನೇಹಿ ಸೌಲಭ್ಯವನ್ನು ಇಲ್ಲಿನ ಸೇವಾ ಸಹಕಾರಿ ಸಂಘಗಳ ನಾಲ್ಕು ಶಾಖೆಗಳ ಮೂಲಕ ಒದಗಿಸಲಾಗುತ್ತಿದೆ. ಸೆಂಟ್ಸ್‌ಗಟ್ಟಲೆ ಜಾಗಗಳಲ್ಲಿ ಕೃಷಿ ಮಾಡುವ ರೈತರಿಗೆ ಅನುಕೂಲವಾಗುವಂತೆ ಇಡ್ಕಿದು ಸೇವಾ ಸಹಕಾರಿ ಸಂಘಗಳ ಮೂಲಕ ರೈತರಿಗೆ ದಿನಕ್ಕೆ ತಲಾ 10 ರೂ. ದರದಲ್ಲಿ ಹಾರೆ, ಪಿಕ್ಕಾಸು, ಬುಟ್ಟಿಗಳನ್ನು ನೀಡಲಾಗುತ್ತದೆ. ಗ್ರಾಮದ ರೈತರು ಸೇವಾ ಸಹಕಾರಿ ಸಂಘದ ಕಚೇರಿಗಳಿಗೆ ಭೇಟಿ ನೀಡಿ ಈ ಸೌಲಭ್ಯವನ್ನು ಪಡೆಯಬಹುದು. ಅದಕ್ಕಾಗಿ ರೈತ ಸಂಘದ ಸದಸ್ಯನಾಗಿರಬೇಕೆಂಬ ನಿಯವೇನೂ ಇಲ್ಲ. ಸಂಘದ ಕಚೇರಿ ಪುಸ್ತಕದಲ್ಲಿ ಹೆಸರು ಬರೆಯಿಸಿಕೊಂಡು ಸಲಕರಣೆಗಳನ್ನು ಪಡೆದುಕೊಳ್ಳಬಹುದು. ಕಳೆದ ಒಂದೂವರೆ ವರ್ಷಗಳಿಂದ ಈ ಸೌಲಭ್ಯ ಗ್ರಾಮದ ಸಣ್ಣ ರೈತರಿಗೆ ಲಭ್ಯವಾಗುತ್ತಿದೆ.

ಕೈಗಾಡಿಗಳೂ ಬಾಡಿಗೆಗಿವೆ

ಇಲ್ಲಿ ಸಣ್ಣ ಪುಟ್ಟ ಕೃಷಿ ಸಲಕರಣೆಗಳ ಜತೆ ಕೈಗಾಡಿಗಳನ್ನು ಕೂಡಾ ದಿವೊಂದಕ್ಕೆ 40 ರೂ. ಬಾಡಿಗೆಯಲ್ಲಿ ಸಣ್ಣ ರೈತ ತನಗೆ ಅಗತ್ಯವಿರುವ ದಿನಗಳಲ್ಲಿ ಪಡೆದು ಉಪಯೋಗಿಸಬಹುದಾಗಿದೆ. ಕುಳ, ಇಡ್ಕಿದು, ಸೂರ್ಯ ಹಾಗೂ ಮಿತ್ತೂರು ಸೇವಾ ಸಹಕಾರಿ ಸಂಘಗಳ ಮೂಲಕ ಈ ಸೌಲಭ್ಯವನ್ನು ಒದಗಿಸಲಾಗುತ್ತಿದೆ.

‘‘ದೊಡ್ಡ ರೈತರು ತಮಗೆ ವರ್ಷವಿಡೀ ಅಗತ್ಯವಿರುವ ಕೃಷಿ ಸಲಕರಣೆಗಳನ್ನು ಖರೀದಿಸಿ ತಮ್ಮಲ್ಲಿ ಇಟ್ಟುಕೊಳ್ಳುವಷ್ಟು ಸಮರ್ಥಗಿರುತ್ತಾರೆ. ಆದರೆ ಸಣ್ಣ ರೈತರು ತಮ್ಮ ಗದ್ದೆ, ತೋಟ ಅಥವಾ ಕೈತೋಟಗಳಲ್ಲಿ ಕೆಲ ದಿನಗಳ ಕೆಲಸಕ್ಕಾಗಿ ಸಾವಿರಾರು ರೂ. ಬೆಲೆ ಬಾಳುವ ಈ ಸಣ್ಣ ಪುಟ್ಟ ಸಲಕರಣೆಗಳನ್ನು ಖರೀದಿಸಲು ಸಾಧ್ಯವಾಗುವುದಿಲ್ಲ. ಇದನ್ನು ಮನಗಂಡು ಇಡ್ಕಿದು ಸೇವಾ ಸಹಕಾರಿ ಸಂಘವು ಈ ಕ್ರಮಕ್ಕೆ ಮುಂದಾಗಿದೆ. ಕಳೆದ ಒಂದೂವರೆ ವರ್ಷಗಳಿಂದ ಈ ಸೌಲಭ್ಯವನ್ನು ರೈತರಿಗೆ ಸಂಘದ ನಾಲ್ಕು ಶಾಖೆಗಳ ಮೂಲಕ ಒದಗಿಸಲಾಗುತ್ತಿದೆ. ದಿನವೊಂದಕ್ಕೆ 10ರಿಂದ 15ರಷ್ಟು ಸಣ್ಣ ರೈತರು ಇದರ ಉಪಯೋಗ ಪಡೆಯುತ್ತಿದ್ದಾರೆ’’ ಎನ್ನುತ್ತಾರೆ ಇಡ್ಕಿದು ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಬಿ. ಗೋಪಾಲಕೃಷ್ಣ ಭಟ್.

‘‘ಸುಮಾರು 25,000 ರೂ. ವೌಲ್ಯದ ಸಣ್ಣ ಕೃಷಿ ಸಲಕರಣೆಗಳನ್ನು ಸಂಘವು ಖರೀದಿಸಿ, ಬಾಡಿಗೆ ನೀಡುವುದನ್ನು ಆರಂಭಿಸಿ ಕಳೆದ ಒಂದೂವರೆ ವರ್ಷದಲ್ಲಿ 60,000 ರೂ.ಗಳನ್ನು ಬಾಡಿಗೆಯಿಂದಲೇ ಆದಾಯ ಗಳಿಸಿದೆ. ರೈತರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಮಗೆ ಬೇಕಾದ ದಿನಗಳಲ್ಲಿ ಸಣ್ಣ ರೈತರು ಈ ಸಲಕರಣೆಗಳನ್ನು ಬಾಡಿಗೆಗೆ ಪಡೆದು ಉಪಯೋಗಿಸಿ ಹಿಂತಿರುಗಿಸುತ್ತಾರೆ’’ ಎಂದು ಅವರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X