Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ,...

ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಚಾಲಕನಿಗೆ ಹಲ್ಲೆಗೈದು ಕಾರು ಕೊಂಡೊಯ್ದ ಬ್ಯಾಂಕ್ ತಂಡ

ಸಾಲ ವಸೂಲಾತಿಗೆ ಬಂದ ತಂಡದಿಂದ ಕೃತ್ಯ: ನ್ಯಾಯಾಲಯಕ್ಕೆ ದೂರು

ವಾರ್ತಾಭಾರತಿವಾರ್ತಾಭಾರತಿ5 Jun 2016 8:33 PM IST
share
ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಚಾಲಕನಿಗೆ ಹಲ್ಲೆಗೈದು ಕಾರು ಕೊಂಡೊಯ್ದ ಬ್ಯಾಂಕ್ ತಂಡ

ವಿಟ್ಲ, ಜೂ.5: ಕಾರು ಖರೀದಿಗೆ ಪಡೆದ ಸಾಲದ ಮೊತ್ತ ಮರು ಪಾವತಿಸಲು ವಿಳಂಬವಾಗಿದೆ ಎನ್ನುವ ನೆಪವೊಡ್ಡಿ ಪುತ್ತೂರಿನ ಖಾಸಗಿ ಬ್ಯಾಂಕ್ ಸಿಬ್ಬಂದಿಯ ಸುಮಾರು ಹತ್ತು ಜನರ ತಂಡವೊಂದು ಕಾರಿನಲ್ಲಿದ್ದ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ ಕಾರು ಮಾಲಕನ ಮೇಲೆ ಹಲ್ಲೆ ನಡೆಸಿ ಬೆಲೆ ಬಾಳುವ ವಾಚು ಸಹಿತ ಕಾರನ್ನು ಕಸಿದುಕೊಂಡು ಹೋದ ಅತಿರೇಕದ ಘಟನೆಯೊಂದು ವಿಟ್ಲದಲ್ಲಿ ಸಂಭವಿಸಿದೆ.

ಬ್ಯಾಂಕ್ ಸಿಬ್ಬಂದಿಯ ಗೂಂಡಾ ವರ್ತನೆಯಿಂದ ಬೇಸತ್ತ ಕಾರು ಮಾಲಕ ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಇತರ ಎಂಟು ಜನರ ವಿರುದ್ಧ ಬಂಟ್ವಾಳ ನ್ಯಾಯಾಲಯಕ್ಕೆ ಖಾಸಗಿ ಫಿರ್ಯಾದಿ ಸಲ್ಲಿಸಿದ್ದು, ದೂರು ಸ್ವೀಕರಿಸಿರುವ ನ್ಯಾಯಾಲಯ ಪ್ರಕರಣದ ತನಿಖೆ ನಡೆಸುವಂತೆ ವಿಟ್ಲ ಪೊಲೀಸರಿಗೆ ಆದೇಶಿಸಿದೆ. ವಿಟ್ಲ ಕಸಬಾ ಗ್ರಾಮದ ಕಾಂತಡ್ಕ ನಿವಾಸಿ ಹಸೈನಾರ್ ಎಂಬವರ ಪುತ್ರ ಮುಹಮ್ಮದ್ ಶಾಫಿ ಎಂಬವರೇ ಬ್ಯಾಂಕ್ ಸಿಬ್ಬಂದಿಯ ಗೂಂಡಾ ವರ್ತನೆಗೆ ಗುರಿಯಾದ ವ್ಯಕ್ತಿ.

ಗ್ರಾಹಕ ಮುಹಮ್ಮದ್ ಶಾಫಿಯವರು ಕುಂಬಾರರ ಸಹಕಾರ ಬ್ಯಾಂಕ್ ವಿಟ್ಲ ಶಾಖೆಯಿಂದ ಮಾ.16 ರಂದು ಸೂಕ್ತ ದಾಖಲೆ ಪ್ರಸ್ತುತಪಡಿಸಿ ತನ್ನ ಹುಂಡೈ ಐ20 (ಕೆಎ19 ಎಂಇ 9142) ಕಾರಿಗೆ 6.50 ಲಕ್ಷ ರೂ.ಸಾಲ ಪಡೆದಿದ್ದರೆನ್ನಲಾಗಿದೆ. ಕಂತು ಹಣ ಪಾವತಿಸುತ್ತ ಬಂದಿದ್ದ ಶಾಫಿ ಇತ್ತೀಚಿನ ಕೆಲ ಕಂತುಗಳನ್ನು ಪಾವತಿಸುವಲ್ಲಿ ವಿಳಂಬವಾಗಿತ್ತೆನ್ನಲಾಗಿದೆ. ಈ ಬಗ್ಗೆ ತಾನು ಸಾಲ ಪಡೆದಿದ್ದ ವಿಟ್ಲ ಶಾಖೆಯ ಮ್ಯಾನೇಜರ್‌ರಲ್ಲಿ ಮಹಮ್ಮದ್ ಶಾಫಿ ಕೆಲ ದಿನಗಳ ಹಿಂದೆ ಮಾತುಕತೆ ನಡೆಸಿದ್ದ ಕಾರಣ ಮೇ.30 ರಂದು ಬಾಕಿಯಿರುವ ಕಂತುಗಳನ್ನು ಪಾವತಿಸುವಂತೆ ಮ್ಯಾನೇಜರ್ ಸಹಿ ಮಾಡಿ ಪತ್ರ ನೀಡಿದ್ದರು.

ಹಣ ಹೊಂದಿಕೆ ಮಾಡುತ್ತಿರುವ ಮಧ್ಯೆಯೇ ಮೇ.28 ರಂದು ರಾತ್ರಿ 8:40 ರ ಸುಮಾರಿಗೆ ಶಾಫಿ ತನ್ನ ಸಹೋದರಿಯರು ಮತ್ತು ಎಳೆಯ ಮಕ್ಕಳೊಂದಿಗೆ ವಿಟ್ಲದ ವೈದ್ಯರಲ್ಲಿಗೆ ಬರುತ್ತಿದ್ದರು. ಆ ಸಮಯ ವಿಟ್ಲದ ಕೆಎಸ್ಸಾರ್ಟಿಸಿ ಬಸ್‌ಸ್ಟ್ಯಾಂಡ್ ಪರಿಸರದಲ್ಲಿ ಮಾರುತಿ ಸ್ವಿಪ್ಟ್ ಮತ್ತು ಮಾರುತಿ ರಿಟ್ಜ್ ಕಾರಿನಲ್ಲಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಪೆರುವಾಯಿ, ಕಾರ್ಯದರ್ಶಿ ಜನಾರ್ದನ ಮತ್ತು ಇತರ ಎಂಟು ಜನರು ಶಾಫಿಯ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಹಲ್ಲೆ ನಡೆಸಿದ್ದರೆಂದು ಶಾಫಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ತನ್ನ ಸಹೋದರಿಯರೊಂದಿಗೆ ಮತ್ತು ಎಳೆಯ ಮಕ್ಕಳೊಂದಿಗೂ ಅಸಭ್ಯ ರೀತಿಯಲ್ಲಿ ವರ್ತಿಸಿದ ಬ್ಯಾಂಕ್ ಸಿಬ್ಬಂದಿ ತನ್ನ ಕೈಯಲ್ಲಿದ್ದ ಬೆಲೆ ಬಾಳುವ ವಾಚ್ ಕಿತ್ತುಕೊಂಡು ತನ್ನ ಹುಂಡೈ ಐ20 ಕಾರನ್ನು ಬಲಾತ್ಕಾರದಿಂದ ಕಸಿಯುತ್ತಿದ್ದಂತೆಯೆ ಸಾರ್ವಜನಿಕರು ಜಮಾಯಿಸುವಷ್ಟರಲ್ಲಿ ಪುತ್ತೂರಿನ ಕಡೆಗೆ ಪರಾರಿಯಾಗಿದ್ದಾರೆಂದು ಶಾಫಿ ದೂರಿನಲ್ಲಿ ವಿವರಿಸಿದ್ದಾರೆ.

ಬ್ಯಾಂಕ್ ಸಿಬ್ಬಂದಿಯ ರೌಡಿ ವರ್ತನೆಯಿಂದ ಕಂಗಾಲಾದ ಮುಹಮ್ಮದ್ ಶಾಫಿ ಬಂಟ್ವಾಳ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ನ್ಯಾಯಾಲಯವು ಸೂಕ್ತ ತನಿಖೆ ನಡೆಸುವಂತೆ ವಿಟ್ಲ ಪೊಲೀಸರಿಗೆ ಆದೇಶ ನೀಡಿದೆ. ಘಟನೆಂು ಬಗ್ಗೆ ವಿಟ್ಲದ ಹಲವು ಸಾಮಾಜಿಕ ಸಂಘಟನೆಗಳು ತೀವ್ರ ಕಳವಳ ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X