Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಾಗತಿಕವಾಗಿ ಸಮಾಜವಾದದ ಕಡೆಗೆ ಜನರ ಒಲವು...

ಜಾಗತಿಕವಾಗಿ ಸಮಾಜವಾದದ ಕಡೆಗೆ ಜನರ ಒಲವು ಹೆಚ್ಚುತ್ತಿದೆ: ವಿ.ಜಿ.ಕೆ.ನಾಯರ್

ಸಿಐಟಿಯು ಜಿಲ್ಲಾ ಸಮ್ಮೇಳನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ5 Jun 2016 9:28 PM IST
share
ಜಾಗತಿಕವಾಗಿ ಸಮಾಜವಾದದ ಕಡೆಗೆ ಜನರ ಒಲವು ಹೆಚ್ಚುತ್ತಿದೆ: ವಿ.ಜಿ.ಕೆ.ನಾಯರ್

ಮಂಗಳೂರು, ಜೂ.5: ಜಾಗತಿಕ ಮಟ್ಟದಲ್ಲಿ ಸಮಾಜವಾದದ ಕಡೆಗೆ ಜನರ ಒಲವು ಹೆಚ್ಚುತ್ತಿದೆ. ಜಿಲ್ಲೆಯಲ್ಲಿಯೂ ಕಾರ್ಮಿಕ ಸಂಘಟನೆಗಳನ್ನು ಮತ್ತಷ್ಟು ಬಲಿಷ್ಟಗೊಳಿಸಬೇಕಾಗಿದೆ ಎಂದು ಸಿಐಟಿಯು ರಾಜ್ಯ ಸಮಿತಿಯ ಅಧ್ಯಕ್ಷ ವಿ.ಜಿ.ಕೆ.ನಾಯರ್ ಕರೆ ನೀಡಿದರು.

ಅವರು ಇಂದು ತೊಕ್ಕೊಟ್ಟಿನ ಕಾ.ರಾಮಚಂದ್ರ ಉಚ್ಚಿಲ್ ನಗರದ ಕ್ಲಿಕ್ ಸಭಾಂಗಣದ ಕಾ.ಅಬ್ರಹಾಂ ಕರ್ಕಡ ವೇದಿಕೆಯಲ್ಲಿ ಆರಂಭಗೊಂಡ 2ದಿನಗಳ 15ನೆ ಸಿಐಟಿಯು ದ.ಕ ಜಿಲ್ಲಾ ಸಮ್ಮೇಳನವನುದ್ದೇಶಿಸಿ ಮಾತನಾಡಿದರು.

ಅಮೇರಿಕದಲ್ಲಿ ಸಾಮಾನ್ಯ ಜನರ ಜೀವನ ಪರಿಸ್ಥಿತಿ ದುಸ್ಥಿತಿಗೆ ತಲುಪಿದೆ. ಅಲ್ಲಿನ ದಶಲಕ್ಷ ಜನರು ಸಮಾಜವಾದವನ್ನು ಬೆಂಬಲಿಸಿ ಮಾತನಾಡುತ್ತಿದ್ದಾರೆ. ಬ್ರಿಟನ್ನಿನಲ್ಲೂ ಲೇಬರ್ ಪಕ್ಷದ ಪರವಾದ ವಾತಾವರಣ ವಿಸ್ತಾರಗೊಳ್ಳುತ್ತದೆ. ಫ್ರಾನ್ಸ್‌ನಲ್ಲೂ ಹಲವಾರು ರಂಗಗಳಲ್ಲಿ ಕಾರ್ಮಿಕರ ಬೃಹತ್ ಮುಷ್ಕರಗಳು ನಡೆದಿವೆ. ಸ್ಪೈನ್, ಪೋರ್ಚುಗಲ್, ಗ್ರೀಸ್ ದೇಶಗಳಲ್ಲೂ ಕಾರ್ಮಿಕರ ಪರವಾದ ಚಳವಳಿಗಳು ಹೆಚ್ಚುತ್ತಿವೆ. ದಕ್ಷಿಣ ಅಮೆರಿಕದ ಹಲವು ರಾಷ್ಟ್ರಗಳು ಸಮಾಜವಾದ ಆಡಳಿತವನ್ನು ಆಯ್ಕೆಮಾಡಿಕೊಂಡಿದೆ. ಈ ಎಲ್ಲಾ ಘಟನೆಗಳು ಜಾಗತಿಕವಾಗಿ ಸಮಾಜವಾದದ ಕಡೆಗೆ ಹೆಚ್ಚುತ್ತಿರುವ ಒಲವನ್ನು ತೋರಿಸುತ್ತಿವೆ ಎಂದು ವಿ.ಜಿ.ಕೆ.ನಾಯರ್ ತಿಳಿಸಿದರು.

ಕೆಲವು ಕಡೆ ಬಂಡವಾಳಶಾಹಿ ಬಲಪಂಥ ಬೆಳೆಯುತ್ತಿದ್ದರೂ ಚೀನಾ, ಕ್ಯೂಬಾ, ಕೊರಿಯಾ, ವಿಯೆಟ್ನಾಂ ಮೊದಲಾದ ಕಮ್ಯುನಿಸ್ಟ್ ರಾಷ್ಟ್ರಗಳು, ಇತರ ಸಮಾಜವಾದಿ ರಾಷ್ಟ್ರಗಳು ಅವಕ್ಕೆ ಬಲಿಷ್ಟವಾಗಿ ಸವಾಲೊಡ್ಡುತ್ತಿವೆ. ದಕ್ಷಿಣ ಪೂರ್ವ ದ್ವೀಪ ಸಮೂಹದಲ್ಲಿ ಚೀನಾ ದೇಶದ ಘನ ಕೈಗಾರಿಕೆಗಳ ವಿಸ್ತರಣೆ ಅಮೇರಿಕದ ಕೆಂಗಣ್ಣಿಗೆ ಗುರಿಯಾಗಿದೆ ಎಂದು ವಿಜಿಕೆ ನಾಯರ್ ತಿಳಿಸಿದರು.

ಮೋದಿ ನೇತೃತ್ವದ ಆಡಳಿತದಿಂದ ಕಾರ್ಮಿಕ ವರ್ಗದ ಕಾನೂನು ದುರ್ಬಲ ಗೊಳಿಸುವ ತಂತ್ರ

ಮೋದಿ ನೇತೃತ್ವದ ಆಡಳಿತದಿಂದ ಕಾರ್ಮಿಕ ವರ್ಗದ ಕಾನೂನು ದುರ್ಬಲಗೊಳಿಸುವ ತಂತ್ರಗಾರಿಕೆ ನಡೆಯುತ್ತಿದೆ. ಈ ಸನ್ನಿವೇಶದಲ್ಲಿ ಕಾರ್ಮಿಕರು ತಮ್ಮ ರಕ್ಷಣೆಗಾಗಿ ಜಾಗತಿಕ ಬೆಳವಣಿಗಳನ್ನು ಗಮನಿಸಿ ಮುಂದುವರಿಯಬೇಕು. ಕಾರ್ಮಿಕರು ಭಾರತದಲ್ಲಿ ಕನಿಷ್ಠ 18,000ರೂ. ವೇತನಕ್ಕಾಗಿ)ಹೋರಾಟ ನಡೆಸಬೇಕಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೀಡಿ ಕಾರ್ಮಿಕರು ಅತ್ಯಂತ ಕನಿಷ್ಠ ಮಟ್ಟದ ಕೂಲಿ ಪಡೆಯುತ್ತಿದ್ದಾರೆ. ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಬೆಂಗಳೂರಿನಲ್ಲಿ 5ಲಕ್ಷ ಗಾರ್ಮೆಂಟ್ ಉದ್ಯಮದ ಕಾರ್ಮಿಕರು ಬೀದಿಗಿಳಿದು ಕೇಂದ್ರ ಸರಕಾರದ ಪ್ರಾವಿಡೆಂಟ್ ಫಂಡ್ ಕಾಯ್ದೆಗೆ ತಂದ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳುವಂತೆ ಮಾಡಿದರು. ಭಾರತದ ಇತರ ಕಡೆಗಳಲ್ಲೂ ಕಾರ್ಮಿಕ ಸಂಘಟನೆಗಳನ್ನು ಬಲಿಷ್ಠಗೊಳಿಸಿ ತಮ್ಮ ನ್ಯಾಯಯುತ ಹಕ್ಕುಗಳಿಗಾಗಿ ಹೋರಾಟಕ್ಕೆ ಸಜ್ಜುಗೊಳಿಸಬೇಕಾಗಿದೆ ಎಂದು ವಿಜಿಕೆ ನಾಯರ್ ತಿಳಿಸಿದರು.

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಫ್ಯಾಸಿಸ್ಟ್ ಶಕ್ತಿಯ ಸರಕಾರದ ಸವಾಲನ್ನು ಕಾರ್ಮಿಕ ಸಂಘಟನೆಗಳು ಸ್ವೀಕರಿಸಿ ಅದರ ವಿರುದ್ಧ ಹೋರಾಟ ನಡೆಸಬೇಕು ಎಂದು ಹಿರಿಯ ಕಾರ್ಮಿಕ ಮುಖಂಡ ಬಿ.ಮಾಧವ ಕರೆ ನೀಡಿದರು.

ಹಿರಿಯ ಕಾರ್ಮಿಕ ಮುಖಂಡ ಕೆ.ಆರ್.ಶ್ರೀಯಾನ್ ಮಾತನಾಡುತ್ತಾ ಜನತೆಗ ಹಲವು ಭರವಸೆ ನೀಡಿದ ಬಿಜೆಪಿ ಸರಕಾರ ಜನರ ಹಕ್ಕುಗಳನ್ನು ಮೊಟಕುಗೊಳಿಸಲು ಹೊರಟಿದ್ದಾರೆ.ಅವರೆ ವಿರೋಧಿಸಿದ ವಿದೇಶಿ ನೇರ ಹೂಡಿಕೆಯನ್ನು ವಿಮೆ, ಬ್ಯಾಂಕಿಂಗ್, ರಕ್ಷಣಾ ರಂಗದಲ್ಲಿ ತರಲಾಗುತ್ತಿದೆ.ಕೋಮುವಾದವನ್ನು ಪ್ರಚೋದಿಸಿ ಹಿಂದೂ ರಾಷ್ಟ್ರ ನಿರ್ಮಾಣದ ಹೆಸರಿನಲ್ಲಿ ದುಡಿಯುವ ವರ್ಗವನ್ನು ಒಡೆಯುತ್ತಿದ್ದಾರೆ ಈ ಎಲ್ಲಾ ತಂತ್ರಗಳಿಗೂ ಕಾರ್ಮಿಕ ಸಂಘಟನೆಗಳು ಒಗ್ಗಟ್ಟಾಗಿ ಉತ್ತರ ನೀಡಬೇಕಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ಮುಖಂಡ ಬಿ.ಮಾಧವರನ್ನು ಸನ್ಮಾನಿಸಲಾಯಿತು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಿಐಟಿಯು ದ.ಕ ಜಿಲ್ಲಾಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ ವಹಿಸಿದ್ದರು.

ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಸಾಲ್ಯಾನ್ ಸ್ವಾಗತಿಸಿದರು. ಕಾರ್ಯದರ್ಶಿ ಜಯಂತ್ ನಾಯ್ಕಾ ವಂದಿಸಿದರು. ಸಮ್ಮೇಳನದಲ್ಲಿ ನಿರ್ಣಯಗಳನ್ನು ಸುನಿಲ್ ಕುಮಾರ್ ಬಜಾಲ್ ಮಂಡಿಸಿದರು. ಬಾಲಕೃಷ್ಣ ಶೆಟ್ಟಿ ಸಮ್ಮೇಳನದ ಧ್ವಜಾರೋಹಣ ನೆರವೇರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X