Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತವು ಅವಕಾಶಗಳ ದೇಶ,ಅವನ್ನು...

ಭಾರತವು ಅವಕಾಶಗಳ ದೇಶ,ಅವನ್ನು ಬಾಚಿಕೊಳ್ಳಿ.... : ಕತರ್ ಉದ್ಯಮಿಗಳಿಗೆ ಮೋದಿ ಕರೆ

ವಾರ್ತಾಭಾರತಿವಾರ್ತಾಭಾರತಿ5 Jun 2016 10:00 PM IST
share
ಭಾರತವು ಅವಕಾಶಗಳ ದೇಶ,ಅವನ್ನು ಬಾಚಿಕೊಳ್ಳಿ.... : ಕತರ್ ಉದ್ಯಮಿಗಳಿಗೆ ಮೋದಿ ಕರೆ

   ದೋಹಾ, ಜೂ.5: ಭಾರತವು ವಿಪುಲವಾದ ಅವಕಾಶಗಳಿರುವ ದೇಶವಾಗಿದ್ದು, ಈ ಅವಕಾಶಗಳನ್ನು ಬಾಚಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕತರ್‌ನ ಉದ್ಯಮಸಂಸ್ಥೆಗಳಿಗೆ ಕರೆ ನೀಡಿದ್ದಾರೆ. ತೈಲ ಸಮೃದ್ಧ ದೇಶವಾದ ಕತರ್ ಪ್ರವಾಸದ ಎರಡನೆಯ ದಿನವಾದ ರವಿವಾರ ಮೋದಿ ಆ ದೇಶದ ಉನ್ನತ ಉದ್ಯಮಿಗಳ ಜೊತೆ ಒಂದು ತಾಸಿಗೂ ಹೆಚ್ಚು ಸಮಯ ರಹಸ್ಯ ಮಾತುಕತೆ ನಡೆಸಿದ ಸಂದರ್ಭ, ಭಾರತದಲ್ಲಿ ಹೂಡಿಕೆ ಮಾಡುವಂತೆ ಅವರಿಗೆ ಆಹ್ವಾನ ನೀಡಿದರು. ಉದ್ಯಮ ವ್ಯವಹಾರಗಳ ಸುಗಮ ನಿರ್ವಹಣೆ ಸಾಧ್ಯವಾಗುವಂತೆ ಮಾಡಲು ತನ್ನ ಸರಕಾರವು ಕಳೆದ ಎರಡು ವರ್ಷಗಳಲ್ಲಿ ಕೈಗೊಂಡಿರುವ ಕ್ರಮಗಳನ್ನು ಅವರಿಗೆ ವಿವರಿಸಿದರು.

 ರೈಲ್ವೆ, ರಕ್ಷಣೆ, ಉತ್ಪಾದನೆ ಹಾಗೂ ಆಹಾರ ಸಂಸ್ಕರಣೆಯಂತಹ ವಲಯಗಳಲ್ಲಿ ವಿದೇಶಿ ನೇರ ಹೂಡಿಕೆಗೆ ಅನುಕೂಲ ಮಾಡಿಕೊಡಲು ಭಾರತ ಕೈಗೊಂಡಿರುವ ಹಲವಾರು ಸುಧಾರಣಾ ಕ್ರಮಗಳನ್ನು ಪ್ರಧಾನಿ ಕತರ್‌ನ ಗಣ್ಯ ಉದ್ಯಮಿಗಳಿಗೆ ವಿವರಿಸಿದರು.

  ‘‘ ನೀವೆಲ್ಲರೂ ಭಾರತದ ಸಾಮರ್ಥ್ಯವನ್ನು ಪರಿಗಣಿಸಬೇಕಾಗಿದೆ. ನೀವು ಗುರುತಿಸಿರುವ ಭಾರತದ ಉದ್ಯಮ ವಲಯದಲ್ಲಿರುವ ಅಡೆತಡೆಗಳನ್ನು ನಿವಾರಿಸಲು ಕ್ರಮಕೈಗೊಳ್ಳಲಾಗುವುದು’’ ಎಂದು ಮೋದಿ ಕತರ್ ಉದ್ಯಮಿಗಳಿಗೆ ಭರವಸೆ ನೀಡಿದರು.

  ಕತರ್‌ನ ಅಲ್‌ಫೈಸಲ್ ಹೋಲ್ಡಿಂಗ್ ಸಂಸ್ಥೆಯ ಸಿಇಓ, ಶೇಖ್ ಫೈಸಲ್ ಬಿನ್ ಖಾಸಿಮ್ ಅಲ್-ತಾನಿ, ದೋಹಾ ಬ್ಯಾಂಕ್‌ನ ಚೇರ್‌ಮನ್ ಶೇಖ್ ಫಾಹಿದ್ ಎಂ.ಜೆ. ಅಲ್ ತಾನಿ ಹಾಗೂ ಕತರ್ ಶೇರು ವಿನಿಮಯ ಕೇಂದ್ರದ ಸಿಇಓ ರಶೀದ್‌ಅಲ್ ಅಲಿ-ಮನ್ಸೂರಿ ಸೇರಿದಂತೆ 10 ಮಂದಿ ಪ್ರಮುಖ ಉದ್ಯಮಿಗಳು ಮೋದಿ ಜೊತೆ ಮಾತುಕತೆಯಲ್ಲಿ ಪಾಲ್ಗೊಂಡರು.

 ಜಪಾನ್ ಹಾಗೂ ದಕ್ಷಿಣ ಕೊರಿಯಾದ ಬಳಿಕ ಕತರ್‌ಗೆ ಭಾರತ ಅತಿ ದೊಡ್ಡ ರಫ್ತು ಮಾರುಕಟ್ಟೆಯಾಗಿದೆ. ಕತರ್ ಪ್ರಮುಖವಾಗಿ ನೈಸರ್ಗಿಕ ಅನಿಲವನ್ನು ರಫ್ತು ಮಾಡುತ್ತಿದೆ.. ಭಾರತವು ಕತರ್‌ನಿಂದ ಎಥಿನೇಲ್, ಪ್ರೊಪಿಲಿನ್,ಅಮೋನಿಯಾ,ಯೂರಿಯಾ ಹಾಗೂ ಪೊಲಿಥೀನ್ ಖರೀದಿಸುತ್ತಿದೆ. ಪಂಚ ರಾಷ್ಟ್ರಗಳ ಪ್ರವಾಸ ಕೈಗೊಂಡಿರುವ ಮೋದಿ, ಶನಿವಾರ ಅಫ್ಘಾನಿಸ್ತಾನದಿಂದ ಕತರ್‌ಗೆ ಆಗಮಿಸಿದ್ದರು. ತನ್ನ ಪ್ರವಾಸದ ಭಾಗವಾಗಿ ಅವರು ಸ್ವಿಟ್ಜರ್‌ಲ್ಯಾಂಡ್ ಹಾಗೂ ಅಮೆರಿಕವನ್ನು ಸಂದರ್ಶಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X