Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಎತ್ತಿನ ಹೊಳೆ ಯೋಜನೆ’ ವಿರೋಧಿಸಿ...

‘ಎತ್ತಿನ ಹೊಳೆ ಯೋಜನೆ’ ವಿರೋಧಿಸಿ ಛಾಯಾಚಿತ್ರ ಪ್ರದರ್ಶನ; ವೇದಿಕೆಯಲ್ಲಿ ಮಾತಿನ ಚಕಮಕಿ

ವಾರ್ತಾಭಾರತಿವಾರ್ತಾಭಾರತಿ5 Jun 2016 11:41 PM IST
share

ಬೆಂಗಳೂರು, ಜೂ. 5: ರಾಜ್ಯ ಸರಕಾರ ಎತ್ತಿನ ಹೊಳೆ ಯೋಜನೆಗೆ ಹಣ ನೀಡಿ ಕಾಮಗಾರಿಯನ್ನು ಆರಂಭಿಸಿರುವಾಗ ಈ ಯೋಜನೆಯನ್ನು ವಿರೋಧಿ ಸುವುದು ಸರಿಯಲ್ಲ ಎಂದು ನೀರಾವರಿ ತಜ್ಞ ನರಸಿಂಹಯ್ಯ ಆಕ್ಷೇಪ ವ್ಯಕ್ತಪಡಿಸುತ್ತಿದ್ದಂತೆಯೇ ಮಧ್ಯ ಪ್ರವೇಶಿಸಿದ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಿದ್ದ ಸುಧೀರ್ ಶೆಟ್ಟಿ ‘ಮರಗಳ ಮಾರಣ ಹೋಮ ಆಗಿದೆ’ ಎನ್ನುವುದಕ್ಕೆ ಇಲ್ಲಿರುವ ಛಾಯಾ ಚಿತ್ರಗಳೇ ಸಾಕ್ಷಿ ಎಂದು ಹೇಳಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ, ವಾಗ್ವಾದಕ್ಕೆ ಕಾರಣವಾಯಿತು.

ರವಿವಾರ ನಗರದ ಚಿತ್ರಕಲಾ ಪರಿಷತ್‌ನಲ್ಲಿ ಬೆಂಗಳೂರು ಜನಜಾಗೃತಿ ಸಾಂಸ್ಕೃತಿಕ ಹಾಗೂ ಕಲಾವೇದಿಕೆ ಆಯೋಜಿಸಿದ್ದ ಮರಗಳ ಮಾರಣ ಹೋಮದ ಮೇಲೆ ಎತ್ತಿನ ಹೊಳೆ ಯೋಜನೆಯೇ? ಎಂಬ ಕರ್ನಾಟಕ ಬರದ ಮೇಲೆ ವಂಡರ್ ಕಣ್ಣೋಟ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮ ನಡೆದಾಗ ಈ ಮಾತಿನ ಚಕಮಕಿಯ ಘಟನೆ ನಡೆಯಿತು. ನೀರಾವರಿ ತಜ್ಞ ಹಾಗೂ ಎತ್ತಿನಹೊಳೆ ಯೋಜನೆ ರೂವಾರಿ ನರಸಿಂಹಯ್ಯ ಮಾತನಾಡಿ, ಮರಗಳ ಮಾರಣಹೋಮದ ಮೇಲೆ ಎತ್ತಿನಹೊಳೆ ಜಾರಿ ಕುರಿತಂತೆ ಚಿತ್ರ ಪ್ರದರ್ಶನ ಆಯೋಜಿಸಿರುವುದು ಯೋಜನೆಯನ್ನು ವಿರೋಧಿಸುತ್ತಿರುವವರು ಮಾಡು ತ್ತಿರುವ ಕುತಂತ್ರ. ಬಯಲುಸೀಮೆ ಭಾಗಗಳಿಗೆ ನೀರೊದಗಿಸುವ ಯೋಜನೆಯ ಬಗ್ಗೆ ಇಲ್ಲ ಸಲ್ಲದಆರೋಪ ಮಾಡಲಾಗುತ್ತಿದೆ. ಈ ಯೋಜನೆ ಬರುವ ಮಾರ್ಗ ಮಧ್ಯದಲ್ಲಿ ಮರಗಳ ಮಾರಣ ಹೋಮ ಆಗಿಲ್ಲ ಎಂದು ಛಾಯಾಚಿತ್ರ ಪ್ರದರ್ಶನಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಬಿಜೆಪಿ ಸರಕಾರದ ಅವಧಿಯಲ್ಲಿ ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಬಳಿಕ ಯೋಜನೆಗೆ ಹಣ ನೀಡಿ ಕಾಮಗಾರಿಯನ್ನು ಆರಂಭಿಸಲಾಗಿದೆ.

ಈ ವರ್ಷದ ಅಂತ್ಯದೊಳಗೆ ಎತ್ತಿನ ಹೊಳೆಯನ್ನು ಕೋಲಾರ, ಚಿಕ್ಕಬಳ್ಳಾಪುರ ಭಾಗದ ಜಿಲ್ಲೆಗಳಿಗೆ ನೀರೊದಗಿಸುವ ಕಾರ್ಯ ಆರಂಭವಾಗಲಿದ್ದು, ಇದನ್ನು ಯಾರಿಂದ ಎಷ್ಟೇ ವಿರೋಧವಾದರೂ ಯೋಜನೆ ಜಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎತ್ತಿನ ಹೊಳೆ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಿಗೆ ಕೇವಲ 24 ಟಿಎಂಸಿ ನೀರ ನ್ನು ಮಾತ್ರ ತರಲಾಗುತ್ತಿದೆ. ಆ ಭಾಗದಲ್ಲಿ 2400 ಕ್ಕೂ ಹೆಚ್ಚು ಟಿಎಂಸಿ ನೀರು ಲಭ್ಯವಿದೆ. ಇದರಿಂದ ದಕ್ಷಿಣ ಕನ್ನಡ ಜನರಿಗೆ ಯಾವುದೇ ತೊಂದರೆಯಾಗು ವುದಿಲ್ಲ. ಆಗಿದ್ದರೂ ಎತ್ತಿನಹೊಳೆ ಯೋಜನೆಯನ್ನು ವಿರೋಧಿಸುವುದು ಸರಿಯಲ್ಲ ಎಂದು ಹೇಳಿದರು.
 ಅಷ್ಟಕ್ಷೂ ಎತ್ತಿನಹೊಳೆ ಯೋಜನೆಗೆ ನೀರನ್ನು ತರುತ್ತಿರುವುದು ಸಕಲೇಶಪುರದ ಕುಮಾರಧಾರದ ಎತ್ತಿನಹೊಳೆ, ಕಾಡುಮನೆ, ಎಲೆಹಳ್ಳಗಳಿಂದಲೇ ಹೊರತು, ದಕ್ಷಿಣ ಕರ್ನಾಟಕದಿಂದಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X