Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ಷಿಪಣಿ ನಿಯಂತ್ರಣ ಗುಂಪಿಗೆ ಭಾರತದ...

ಕ್ಷಿಪಣಿ ನಿಯಂತ್ರಣ ಗುಂಪಿಗೆ ಭಾರತದ ಸೇರ್ಪಡೆ ಖಚಿತ

ವಾರ್ತಾಭಾರತಿವಾರ್ತಾಭಾರತಿ7 Jun 2016 11:41 PM IST
share

ಹೊಸದಿಲ್ಲಿ,ಮೇ 25: ಅಣ್ವಸ್ತ್ರ ಪ್ರಸರಣೆ ವಿರೋಧಿ ಒಕ್ಕೂಟವಾದ ಕ್ಷಿಪಣಿ ತಂತ್ರಜ್ಞಾನ ನಿಯಂತ್ರಣ ಗುಂಪಿಗೆ (ಎಂಟಿಸಿಆರ್)ಭಾರತವನ್ನು ಸೇರ್ಪಡೆಗೊಳಿಸಲು ಒಕ್ಕೂಟದ ಸದಸ್ಯರು ಒಪ್ಪಿಗೆ ಸೂಚಿಸಿದ್ದಾರೆಂದು ಮಂಗಳವಾರ ರಾಜತಾಂತ್ರಿಕರು ತಿಳಿಸಿದ್ದಾರೆ. ಅಮೆರಿಕ ಅಧ್ಯಕ್ಷ ಬರಾಕ್ ಒಬಾಮರನ್ನು ನಾಳೆ ವಾಶಿಂಗ್ಟನ್‌ನಲ್ಲಿ ಭೇಟಿ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿಗೆ ಇದೊಂದು ಮಹತ್ವದ ರಾಜತಾಂತ್ರಿಕ ಜಯವೆಂದು ಭಾವಿಸಲಾಗಿದೆ.

ಭಾರತವನ್ನು ಎಂಟಿಸಿಆರ್‌ಗೆ ಸೇರ್ಪಡೆ ಗೊಳಿಸುವ ಬಗ್ಗೆ ಆಕ್ಷೇಪಗಳನ್ನು ಎತ್ತಲು 34 ರಾಷ್ಟ್ರಗಳ ಈ ಒಕ್ಕೂಟದ ಸದಸ್ಯರಿಗೆ ಸೋಮವಾರದವರೆಗೆ ಗಡುವು ವಿಧಿಸಲಾಗಿತ್ತು. ಆದರೆ ಯಾವುದೇ ಸದಸ್ಯ ರಾಷ್ಟ್ರಗಳು ಆಕ್ಷೇಪ ವ್ಯಕ್ತಪಡಿಸಿಲ್ಲವೆಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಈ ರೀತಿಯ ವೌನಸಮ್ಮತಿಯಿಂದಾಗಿ ಎಂಟಿಸಿಆರ್‌ಗೆ ಭಾರತವು ತನ್ನಿಂತಾನೇ ಸೇರ್ಪಡೆಗೊಂಡಂತಾಗಿದೆಯೆಂದು, ಒಕ್ಕೂಟದ ನಾಲ್ಕು ಸದಸ್ಯ ರಾಷ್ಟ್ರಗಳ ರಾಜತಾಂತ್ರಿಕರು ತಿಳಿಸಿದ್ದಾರೆ. ಎಂಟಿಸಿಆರ್‌ಗೆ ಸೇರ್ಪಡೆಯಾದಲ್ಲಿ, ಭಾರತವು ಅತ್ಯುತ್ಕೃಷ್ಟವಾದ ಕ್ಷಿಪಣಿ ತಂತ್ರಜ್ಞಾನವನ್ನು ಖರೀದಿಸಲು ಭಾರತಕ್ಕೆ ಸಾಧ್ಯವಾಗಲಿದೆ. ಯುಎಸ್ ಪ್ರೆಡೇಟರ್‌ನಂತಹ ಅತ್ಯಾಧುನಿಕ ಕಣ್ಗಾವಲು ಡ್ರೋನ್‌ಗಳನ್ನು ಖರೀದಿಸುವ ಅದರ ಹಂಬಲವು ಸಾಕಾರಗೊಳ್ಳಲಿದೆ. ಭಾರತವು ರಶ್ಯದ ಜಂಟಿ ಪಾಲುದಾರಿಕೆಯೊಂದಿಗೆಬ್ರಹ್ಮೋಸ್ ಸೂಪರ್‌ಸೋನಿಕ್ ಕ್ಷಿಪಣಿಯನ್ನು ನಿರ್ಮಿಸುತ್ತಿದ್ದು, ಅದನ್ನು ತೃತೀಯ ರಾಷ್ಟ್ರಗಳಿಗೆ ಮಾರಾಟ ಮಾಡುವ ಭರವಸೆಯನ್ನು ಉಭಯದೇಶಗಳೂ ಹೊಂದಿವೆ. ಎಂಟಿಸಿಆರ್ ಸದಸ್ಯತ್ವದೊಂದಿಗೆ ಭಾರತವು ಇದೇ ಮೊದಲ ಬಾರಿಗೆ ಜಾಗತಿಕ ಮಟ್ಟದ ಪ್ರಮುಖ ಶಸ್ತ್ರಾಸ್ತ್ರ ಮಾರಾಟಗಾರ ದೇಶಗಳಲ್ಲೊಂದಾಗಲಿದೆ. ಇಟಲಿಯು ಈ ಮೊದಲು ದ್ವಿಪಕ್ಷೀಯ ವಿವಾದವೊಂದರ ಹಿನ್ನೆಲೆಯಲ್ಲಿ ಎಂಟಿಸಿಆರ್‌ಗೆ ಭಾರತದ ಸೇರ್ಪಡೆಯನ್ನು ವಿರೋಧಿಸಿತ್ತು. ಆದರೆ ಈ ಬಾರಿ ಅದು 10 ದಿನಗಳ ಗಡುವಿನ ಅವಧಿಯಲ್ಲಿ ಯಾವುದೇ ಅಕ್ಷೇಪವನ್ನು ವ್ಯಕ್ತಪಡಿಸಿಲ್ಲ. ಎಂಟಿಸಿಆರ್‌ನ ಅಧ್ಯಕ್ಷತೆ ವಹಿಸಿರುವ ನೆದರ್‌ಲ್ಯಾಂಡ್, ಒಕ್ಕೂಟಕ್ಕೆ ಭಾರತದ ಸೇರ್ಪಡೆಯನ್ನು ಸ್ವಾಗತಿಸುವಂತೆ ಸದಸ್ಯ ರಾಷ್ಟ್ರಗಳಿಗೆ ಸಲಹೆ ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X