Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ನಗರಸಭೆ ಆದಾಯ ಸೋರಿಕೆ

ಚಿಕ್ಕಮಗಳೂರು: ನಗರಸಭೆ ಆದಾಯ ಸೋರಿಕೆ

ಸರ್ವ ಸದಸ್ಯರ ಸಭೆಯಲ್ಲಿ ತನಿಖೆಗೆ ಸಮಿತಿ ರಚನೆ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ7 Jun 2016 11:43 PM IST
share
ಚಿಕ್ಕಮಗಳೂರು: ನಗರಸಭೆ ಆದಾಯ ಸೋರಿಕೆ

ಚಿಕ್ಕಮಗಳೂರು, ಜೂ.7: ನಗರಸಭೆಯಲ್ಲಿ ನಡೆದಿರುವ ಆದಾಯ ಸೋರಿಕೆ ಕುರಿತು ಸಮಗ್ರ ತನಿಖೆ ನಡೆಸಲು ನಗರಸಭೆ ಸದಸ್ಯರ ತನಿಖಾ ಸಮಿತಿ ರಚಿಸಲು ನಿರ್ಣಯವನ್ನು ಚಿಕ್ಕಮಗಳೂರು ನಗರಸಭೆಯಲ್ಲಿ ಅಧ್ಯಕ್ಷ ದೇವರಾಜ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಕೈಗೊಳ್ಳಲಾಯಿತು.

ನಗರಸಭೆಯಲ್ಲಿ ಕೋಟ್ಯಂತರ ರೂ. ಸೋರಿಕೆಯಾಗುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸದಸ್ಯ ಪುಟ್ಟಸ್ವಾಮಿ ಗಮನ ಸೆಳೆದ ಹಿನ್ನೆಲೆಯಲ್ಲಿ ನಗರಸಭೆಯಲ್ಲಿನ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಸದಸ್ಯರನ್ನೊಳಗೊಂಡ ತನಿಖಾ ಸಮಿತಿ ರಚನೆಗೆ ಸರ್ವ ಸದಸ್ಯರ ಒಮ್ಮತದ ಮೇರೆಗೆ ನಿರ್ಣಯವನ್ನು ಕೈಗೊಳ್ಳಲಾಯಿತು.

ನಗರಸಭಾ ನಾಮಿನಿ ಸದಸ್ಯ ಸಂದೇಶ್ ಮಾತನಾಡಿ, ನಗರಸಭೆಯಲ್ಲಿ ಸಾರ್ವಜನಿಕರ ಕೆಲಸ ಆಗಬೇಕಾದರೆ ದಲ್ಲಾಳಿಗಳು ಬೇಕಾ ಎಂದು ಪ್ರಶ್ನಿಸಿದರು. ಅಧ್ಯಕ್ಷರು ಮಧ್ಯ ಪ್ರವೇಶಿಸಲು ಬಂದಾಗ, ತಾನು ಆಯುಕ್ತರಿಗೆ ಪ್ರಶ್ನಿಸಿದ್ದೇನೆ. ಅವರೇ ಉತ್ತರಿಸಲಿ ಎಂದು ಬಿಗಿ ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್‌ನ ರೂಬಿನ್ ಮೋಸೆಸ್, ಸುರೇಖಾ ಸಂಪತ್, ಕೃಷ್ಣಮೂರ್ತಿ ಬೆಂಬಲಿಸಿದರು.

ಮಹಿಳೆಯೊಬ್ಬರು ಅಗತ್ಯ ಕೆಲಸದ ನಿಮಿತ್ತ ನಗರಸಭೆಗೆ ಬಂದಿದ್ದರು. ಆಗ ದಲ್ಲಾಳಿಯೊಬ್ಬ ಆ ಮಹಿಳೆಯನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ಆಯುಕ್ತರಿಗೆ ದೂರು ನೀಡಿದಾಗ ಅವರು ದೂರನ್ನು ಸ್ವೀಕರಿಸಲಿಲ್ಲ ಎಂದು ಸಂದೇಶ್ ಹೇಳಿದಾಗ, ನಗರಸಭೆ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಭೆ ನಡೆಯುತ್ತಿದೆ. ಸದಸ್ಯರು, ಅಧ್ಯಕ್ಷರ ಬಳಿ ಪ್ರಶ್ನೆ ಕೇಳಬೇಕು ಎಂದು ಸದಸ್ಯ ಎಚ್.ಡಿ.ತಮ್ಮಯ್ಯ ಹೇಳುತ್ತಿದ್ದಂತೆ, ನಾಮಿನಿ ಸದಸ್ಯರು ಪ್ರಶ್ನೆ ಕೇಳುವಂತಿಲ್ಲ, ಸಲಹೆ ನೀಡಬಹುದಷ್ಟೆ ಎಂದು ಅಧ್ಯಕ್ಷರು ಹೇಳಿದಾಗ ಕಾವೇರಿದ ವಾತಾವರಣ ತಣ್ಣಗಾಯಿತು.

ಬಿಜೆಪಿ ಸದಸ್ಯ ಸುದೀರ್ ಮಾತನಾಡಿ, ನಗರಸಭೆಯ ಹಳೆ ಪೀಠೋಪಕರಣಗಳ ಖರೀದಿಯಲ್ಲಿ ಗೋಲ್‌ಮಾಲ್ ನಡೆದಿದೆ. ಪೌರಸೇವಾ ನೌಕರರ ಕ್ರೀಡಾಕೂಟಕ್ಕೆ ಲಕ್ಷಾಂತರ ರೂ. ಡ್ರಾ ಮಾಡಲಾಗಿದೆ. ಕುಡಿಯುವ ನೀರಿನ ಟ್ಯಾಂಕ್ ಶುಚ್ಚಿಗೊಳಿಸುವ ಕೆಲಸ ಮುಗಿಸದಿದ್ದರೂ ಹಣ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ವಿವರ ನೀಡುವಂತೆ ಒತ್ತಾಯಿಸಿದ ಅವರು, ಕಸ ಸಂಗ್ರಹಣೆಗಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಗೆ ನಗರಸಭೆ ವರ್ಷಕ್ಕೆ 1.20 ಕೋಟಿ ರೂ. ನೀಡುತ್ತಿದೆ. ಆದರೂ ಸಮರ್ಪಕವಾಗಿ ಕಸ ವಿಲೇವಾರಿಯಾಗುತ್ತಿಲ್ಲ ಎಂದರು.

ಇದಕ್ಕೆ ಉತ್ತರಿಸಿದ ಅಧ್ಯಕ್ಷರು, ಪೀಠೋಪಕರಣಗಳ ಖರೀದಿಗೆ ಸಂಬಂಧಿಸಿ ಸಂಬಂಧಿತ ನೌಕರರಿಂದ ಸಮರ್ಪಕ ಮಾಹಿತಿ ಪಡೆದು ಎಲ್ಲ ಸದಸ್ಯರಿಗೆ ನೀಡಲಾಗುವುದು. ಪರಿಸರ ಇಂಜಿನಿಯರ್ ಸಭೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರ ಮೇಲೆ ಶಿಸ್ತು ಕ್ರಮ ಜರಗಿಸಲು ಸರಕಾರಕ್ಕೆ ಶಿಪಾರಸ್ಸು ಮಾಡಿರುವುದಾಗಿ ಸಭೆಯಲ್ಲಿ ತಿಳಿಸಿದರು.

ನಗರಸಭೆಗೆ ಸೇರಿದ ಎಷ್ಟು ಮಳಿಗೆಗಳಿವೆ, ಯಾರು ಎಷ್ಟೆಷ್ಟು ತಿಂಗಳಿನಿಂದ ಬಡಿಗೆ ಉಳಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಬೇಕು. ಬಾಡಿಗೆ ಕಟ್ಟದಿರುವವರಿಗೆ ನೋಟಿಸ್ ಜಾರಿ ಮಾಡಿ, ಮಳಿಗೆಗಳಿಗೆ ಬೀಗ ಹಾಕಿ ಮರು ಟೆಂಡರ್ ಕರೆಯುವಂತೆ ಅಧ್ಯಕ್ಷರು ಕಂದಾಯ ಅಧಿಕಾರಿ ಗುರುಮೂರ್ತಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಉಪಾಧ್ಯಕ್ಷ ಭುಜಂಗರಾಜ್ ಅರಸ್, ಪೌರಾಯುಕ್ತೆ ಪಲ್ಲವಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X