ಅಲಂಗಾರು: ಸಿಡಿಲು ಬಡಿದು ಮನೆಗೆ ಹಾನಿ
.jpg)
ಮೂಡುಬಿದಿರೆ, ಜೂ.8: ಅಲಂಗಾರು ಚಂದ್ರಪುರದ ಪೀಟರ್ ಡಿ’ಸೋಜ ಎಂಬವರ ಮನೆಗೆ ಬುಧವಾರ ಬೆಳಗ್ಗೆ ಸಿಡಿಲು ಬಡಿದಿದೆ. ಇದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಗೋಡೆಗಳು ಬಿರುಕುಬಿಟ್ಟಿದೆ.
ಬುಧವಾರ ಬೆಳಗ್ಗೆ ಸುಮಾರು 8:30ರ ವೇಳೆಗೆ ಸಿಡಿಲು ಬಡಿದಿದ್ದು, ಮನೆಯ ಮುಂದೆ ಇದ್ದ ಪ್ಲಾಸ್ಟಿಕ್ ಚಪ್ಪರ ಹಾಗೂ ಮರಕ್ಕೂ ಸಿಡಿಲು ಬಡಿದಿದೆ. ಘಟನೆಯ ಸಂದರ್ಭದಲ್ಲಿ ಪೀಟರ್ ಅವರ ಪತ್ನಿ ಹಾಗೂ ಮಗ ಮನೆಯಲ್ಲಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯಿಂದ 20 ಸಾವಿರ ರೂ. ನಷ್ಟವಾಗಿರಬಹುದೆಂದು ಅಂದಾಜಿಸಲಾಗಿದೆ.
Next Story





