Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಬಂಡಾಯದ...

ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಬಂಡಾಯದ ಬಿಸಿ

ವಾರ್ತಾಭಾರತಿವಾರ್ತಾಭಾರತಿ8 Jun 2016 10:51 PM IST
share

ಹೊಸದಿಲ್ಲಿ, ಜೂ.8: ಅಜಿತ್ ಜೋಗಿ ಹೊಸ ರಾಜಕೀಯ ಪಕ್ಷದ ರಚನೆಯನ್ನು ಘೋಷಿಸಿದ ಒಂದು ದಿನದ ಬಳಿಕ, ಮಂಗಳವಾರ ಅವರ ನಿರ್ಗಮನವನ್ನು ಸ್ವಾಗತಿಸಿದ್ದ ಕಾಂಗ್ರೆಸ್ ಪಕ್ಷ, ಜೋಗಿಯವರನ್ನು ಉಚ್ಚಾಟಿಸುವ ಕಷ್ಟ ತಪ್ಪಿತೆಂದು ಕುಹಕವಾಡಿತ್ತು.

 ಛತ್ತೀಸ್‌ಗಡ ಮಾಜಿ ಮುಖ್ಯಮಂತ್ರಿಯ ನಿರ್ಗಮನವನ್ನು ಕಾಂಗ್ರೆಸ್ ಸಂಭ್ರಮಿಸುತ್ತಿರುವಂತೆಯೇ, ಅದು ಮಹಾರಾಷ್ಟ್ರ, ಮೇಘಾಲಯ, ಉತ್ತರಾಖಂಡ ಹಾಗೂ ತ್ರಿಪುರಗಳಲ್ಲಿ ಅಸಮಾಧಾನಿತ ನಾಯಕರೊಂದಿಗೆ ಹೋರಾಡಬೇಕಾಗಿ ಬಂದಿದೆ.
ಇದು ಒಳ್ಳೆಯ ಬಿಡುಗಡೆಯಾಗಿದೆ. ಜೋಗಿ, ಪಕ್ಷದಿಂದ ಅವರನ್ನು ಉಚ್ಚಾಟಿಸುವ ತನ್ನ ಕೆಲಸವನ್ನು ಹಗುರಗೊಳಿಸಿದರೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಪತ್ರಕರ್ತರಿಗಿಲ್ಲಿ ತಿಳಿಸಿದರು.
ಆದಾಗ್ಯೂ, ಅದು ಮಹಾರಾಷ್ಟ್ರ, ಮೇಘಾಲಯ ಹಾಗೂ ಉತ್ತರಾಖಂಡಗಳಲ್ಲಿ ಇದೇ ರೀತಿಯ ಸೋಗನ್ನು ತಳೆಯುವಂತಿಲ್ಲ. ಈ ರಾಜ್ಯಗಳ ಕಾಂಗ್ರೆಸ್ ನಾಯಕರು ಪಕ್ಷದ ಸತತ ಚುನಾವಣಾ ಸೋಲುಗಳ ಬಳಿಕವೂ ಸರಿಪಡಿಸುವ ಕ್ರಮ ಕೈಗೊಳ್ಳದಿರುವ ಕೇಂದ್ರ ನಾಯಕತ್ವದ ವಿರುದ್ಧ ಮುನಿದಿದ್ದಾರೆ.
ಮಹಾರಾಷ್ಟ್ರದಲ್ಲಿ ರಾಜಕೀಯ ನಿವೃತ್ತಿಯನ್ನು ಘೋಷಿಸುವ ಮೂಲಕ ಆಶ್ಚರ್ಯವನ್ನುಂಟು ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುರುದಾಸ ಕಾಮತ್‌ರನ್ನು ತಲುಪುವ ಪ್ರಯತ್ನವನ್ನು ಕೇಂದ್ರೀಯ ನಾಯಕತ್ವ ಆರಂಭಿಸಿದೆ.
ಕಾಮತ್‌ರೊಂದಿಗೆ ಮಾತುಕತೆ ನಡೆಸುವ ಹೊಣೆಯನ್ನು ಹಿರಿಯ ನಾಯಕ ಅಹ್ಮದ್ ಪಟೇಲ್‌ರಿಗೆ ನೀಡಲಾಗಿದೆಯೆಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕಾಂಗ್ರೆಸ್‌ಗೆ ಕಾಮತ್ ರಾಜೀನಾಮೆ ನೀಡಿದ್ದಾರೆಂಬ ವರದಿಯನ್ನು ತಾನು ಸ್ಪಷ್ಟವಾಗಿ ತಳ್ಳಿ ಹಾಕುತ್ತೇನೆ. ಅವರು ಈಗಲೂ ಮುಂದೆಯೂ ಕಾಂಗ್ರೆಸ್ ಕುಟುಂಬದ ಭಾಗವಾಗಿಯೇ ಇರುತ್ತಾರೆಂದು ಕಾಂಗ್ರೆಸ್‌ನ ಪ್ರಧಾನ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ಮೇಘಾಲಯದಲ್ಲಿ ಕಳೆದ ತಿಂಗಳು ತುರಾ ಲೋಕಸಭಾ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ತನ್ನ ಪತ್ನಿ ದಿಕ್ಕಾಂಚಿ ಶಿರಾ ಸೋತ ಬಳಿಕ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಬಂಡಾಯವನ್ನೆದುರಿಸುತ್ತಿದ್ದಾರೆ.
ಆಡಳಿತ ವಿರೋಧಿ ಅಲೆಯನ್ನು ನಿಭಾಯಿಸಲು ಸಂಪುಟ ಪುನಾರಚನೆ ಸಹಿತ ರಾಜ್ಯದಲ್ಲಿ ಬದಲಾವಣೆಗೆ ಆಗ್ರಹಿಸಿ, ಮಾಜಿ ಮುಖ್ಯಮಂತ್ರಿಗಳಾದ ಡಿ.ಡಿ. ಲಪಾಂಗ್ ಹಾಗೂ ಎಸ್.ಸಿ. ಮರಕ್ ಕಾಂಗ್ರೆಸ್‌ನ ಕೇಂದ್ರೀಯ ನಾಯಕತ್ವವನ್ನು ಭೇಟಿಯಾಗಿದ್ದಾರೆ.
ಉತ್ತರಾಖಂಡದಲ್ಲಿ ಮುಖ್ಯಮಂತ್ರಿ ಹರೀಶ್ ರಾವತ್‌ರ ಉಚ್ಚಾಟನೆಗೆ ಬಿಜೆಪಿ ನಡೆಸಿದ್ದ ಪ್ರಯತ್ನವನ್ನು ತಡೆಯಲು ಸಫಲವಾದ ಕಾಂಗ್ರೆಸ್, ಈಗ ಏಕೈಕ ರಾಜ್ಯಸಭಾ ಸ್ಥಾನಕ್ಕೆ ನಾಮಕರಣದ ಸಂಬಂಧ ಹೊಸ ಸಂಕಷ್ಟಕ್ಕೆ ಸಿಲುಕಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X