Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ: ಆಟೊ ಚಾಲಕನಿಗೆ ಬಾಡಿಗೆ ಹಣ...

ಉಳ್ಳಾಲ: ಆಟೊ ಚಾಲಕನಿಗೆ ಬಾಡಿಗೆ ಹಣ ನೀಡದೆ ತಂಡದಿಂದ ಬೆದರಿಕೆ

ವಾರ್ತಾಭಾರತಿವಾರ್ತಾಭಾರತಿ9 Jun 2016 5:10 PM IST
share
  • ಉಳ್ಳಾಲ: ಆಟೊ ಚಾಲಕನಿಗೆ ಬಾಡಿಗೆ ಹಣ ನೀಡದೆ ತಂಡದಿಂದ ಬೆದರಿಕೆ
  • ಉಳ್ಳಾಲ: ಆಟೊ ಚಾಲಕನಿಗೆ ಬಾಡಿಗೆ ಹಣ ನೀಡದೆ ತಂಡದಿಂದ ಬೆದರಿಕೆ

ಉಳ್ಳಾಲ, ಜೂ. 9: ಮಂಗಳೂರಿನಿಂದ ಬಾಡಿಗೆ ಆಟೋದಲ್ಲಿ ಬಂದ ತಂಡವೊಂದು ಸೋಮೇಶ್ವರ ಬಳಿ ಚಾಲಕನಿಗೆ ಬಾಡಿಗೆ ನೀಡುವ ವಿಷಯದಲ್ಲಿ ಬೆದರಿಕೆಯೊಡ್ದಿರುವ ಘಟನೆ ನಡೆದಿದ್ದು, ಭಿನ್ನಕೋಮಿನವರು ಅಪಹರಿಸಿ ಕೊಲೆಗೆ ಯತ್ನಿಸುತ್ತಿದ್ದಾರೆ ಎನ್ನುವ ಸುದ್ದಿಯಿಂದ ಸಾರ್ವಜನಿಕರು ಉಳ್ಳಾಲ ಠಾಣೆಯಲ್ಲಿ ಜಮಾಯಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.

ಘಟನೆಯ ವಿವರ

ಮಂಗಳೂರು ರೈಲು ನಿಲ್ದಾಣದಲ್ಲಿ ಆಟೊ ಚಾಲಕರಾಗಿ ದುಡಿಯುತ್ತಿರುವ ಬಜಾಲ್ ಕಲ್ಲಕಟ್ಟ ನಿವಾಸಿ ಲತೀಫ್(40) ಎಂಬವರಿಗೆ ಬುಧವಾರ ರಾತ್ರಿ 7 ಗಂಟೆಗೆ ವ್ಯಕ್ತಿಯೊರ್ವ ಆಟೋ ಬಾಡಿಗೆಗೆ ಗೊತ್ತು ಮಾಡಿ ತೊಕೊಟ್ಟಿಗೆ ಕರೆದೊಯ್ದಿದ್ದರು. ತೊಕ್ಕೊಟ್ಟು ತಲುಪಿದಾಗ ಇನ್ನೂ ಇಬ್ಬರು ಆಟೋ ಹತ್ತಿದ್ದರು.ಅಲ್ಲಿಂದ ಉಳ್ಳಾಲದ ಬಾರೊಂದಕ್ಕೆ ಆಟೊವನ್ನು ಕೊಂಡೊಯ್ಯುವಂತೆ ತಂಡ ತಿಳಿಸಿದ್ದು, ಲತೀಫ್ ಅವರು ಹೇಳಿದಂತೆ ಅಲ್ಲಿಗೂ ಕರೆದುಕೊಂಡು ಹೋಗಿದ್ದರು. ಬಾರ್ ಒಳಗಿಂದ ತಂಡದ ಓರ್ವ ಬಿಯರ್ ಹಾಗೂ ಇನ್ನಿತರ ಅಮಲು ಪದಾರ್ಥದ ಬಾಟಲ್‌ಗಳನ್ನು ಖರೀದಿಸಿ ಆಟೊ ಹತ್ತಿ ಕುಡಿಯುತ್ತಾ ಸೋಮೇಶ್ವರಕ್ಕೆ ಬಿಡುವಂತೆ ಲತೀಫ್‌ಗೆ ತಿಳಿಸಿದ್ದರು. ಸೋಮೇಶ್ವರ ತಲುಪುತ್ತಿದ್ದಂತೆಯೇ ಲತೀಫ್ ತಂಡದಲ್ಲಿ ಬಾಡಿಗೆ ಕೇಳಿದಾಗ ತಂಡ ನಿಂದಿಸಿ, ಕೊಲೆ ಮಾಡುವ ಬೆದರಿಕೆ ಒಡ್ಡಿದೆ ಎಂದು ತಿಳಿದು ಬಂದಿದೆ.

ಈ ಸಂದರ್ಭ ತಂಡದ ವರ್ತನೆಯಿಂದ ಬೆದರಿದ ಲತೀಫ್ ಆಟೋದೊಂದಿಗೆ ಸ್ಥಳದಿಂದ ನಿರ್ಗಮಿಸಿ ಸೋಮೇಶ್ವರ ರೈಲು ನಿಲ್ದಾಣದ ಬಳಿ ಬಂದು ಕುಳಿತಿದ್ದರು. ತಂಡ ಮಾಡುತ್ತಿದ್ದ ವರ್ತನೆಯಿಂದ ಹೆದರಿದ್ದ ಲತೀಫ್ ಮೊದಲೇ ಸಂಬಂಧಿ ಸಿರಾಜ್ ಎಂಬವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರಿಂದ ಉಳ್ಳಾಲ ಠಾಣೆಗೆ ಮೊದಲೇ ದೂರು ನೀಡಲಾಗಿತ್ತು. ಲತೀಫ್‌ರನ್ನು ಸಂಪರ್ಕಿಸುವಂತೆ ಇನ್‌ಸ್ಪೆಕ್ಟರ್ ಸಿರಾಜ್‌ಗೆ ತಿಳಿಸಿದ್ದು, ಸಿರಾಜ್ ಕರೆ ಮಾಡಿದ್ದರೂ ಲತೀಫ್ ಕರೆ ಸ್ವೀಕರಿಸಿರಲಿಲ್ಲ.

ಇನ್‌ಸ್ಪೆಕ್ಟರ್ ಹಲವು ಬಾರಿ ಪ್ರಯತ್ನಿಸಿದ ಬಳಿಕ ಕರೆ ಸ್ವೀಕರಿಸಿದ್ದ ಲತೀಫ್ ತಾನು ಸೋಮೇಶ್ವರ ರೈಲು ನಿಲ್ದಾಣದ ಬಳಿ ಇರುವುದಾಗಿ ತಿಳಿಸಿದ್ದರು. ಭಿನ್ನಕೋಮಿನವರು ಆಟೊ ಚಾಲಕನನ್ನು ಅಪಹರಿಸಿ ಕೊಲೆಗೆ ಯತ್ನಿಸುತ್ತಿದ್ದಾರೆ ಎನ್ನುವ ಸುದ್ದಿ ಉಳ್ಳಾಲದ ಜನರಿಗೆ ಸಿಕ್ಕಿ ಠಾಣೆ ಬಳಿ ಜಮಾಯಿಸಿದ್ದರಿಂದ ಕೆಲ ಸಮಯ ಗೊಂದಲದ ವಾತಾವರಣ ನಿರ್ಮಾಣಗೊಂಡಿತ್ತು.

ಆಟೋವನ್ನು ಉಳ್ಳಾಲ ಠಾಣೆಗೆ ತರಲಾಗಿದ್ದು, ದೂರು ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X