Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಲಿಟ್ಲ್‌ಬ್ಲಾಕ್‌ಬುಕ್'' ಕೃತಿ ಬಿಡುಗಡೆ

'ಲಿಟ್ಲ್‌ಬ್ಲಾಕ್‌ಬುಕ್'' ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ9 Jun 2016 6:38 PM IST
share
ಲಿಟ್ಲ್‌ಬ್ಲಾಕ್‌ಬುಕ್ ಕೃತಿ ಬಿಡುಗಡೆ

 ಮಂಗಳೂರು,ಜೂ 9: ನಗರದ ವಿಕಾಸ್ ಎಜುಕೇಷನ್ ಟ್ರಸ್ಟ್ ವತಿಯಿಂದ ಡಾ.ಅನಂತ್ ಪ್ರಭು ರಚಿಸಿದ ಲಿಟ್ಲ್ ಬ್ಲಾಕ್‌ಬುಕ್‌ನ್ನು ಕೇಂದ್ರ ವಾಣಿಜ್ಯ ಇಲಾಖೆಯ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಗೃಹ ಇಲಾಖೆಯ ಸಹಾಯಕ ಸಚಿವ ಹರಿಭಾಯಿ ಪಿ. ಚೌದರಿ ಬುಧವಾರ ಬಿಡುಗಡೆಗೊಳಿಸಿದರು.

 ಶಿಕ್ಷಕರ ಮತ್ತು ಉಪನ್ಯಾಸಕರ ಶೈಕ್ಷಣಿಕ ಸಿದ್ಧತೆಗೆ ಪೂರಕವಾಗಿ 200 ಪುಟದ ಲಿಟ್ಲ್‌ಬ್ಲಾಕ್ ಬುಕ್ ಕೃತಿಯ 5,000 ಪ್ರತಿಗಳನ್ನು ಉಚಿತವಾಗಿ ವಿತರಿಸುವುದಾಗಿ ವಿಕಾಸ್ ಎಜುಕೇಷನ್ ಟ್ರಸ್ಟ್‌ನ ಅಧ್ಯಕ್ಷ ಕೃಷ್ಣ ಜೆ. ಪಾಲೆಮಾರ್ ಘೋಷಿಸಿದರು. ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಹೆಚ್ಚು ಪ್ರತಿ ಬೇಕಾದಲ್ಲಿ ಒದಗಿಸಲಾಗುವುದು ಎಂದರು.

ಸಂಸದ ನಳಿನ್ ಕುಮಾರ್ ಕಟೀಲ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಟ್ರಸ್ಟಿಗಳಾದ ಸೂರಜ್ ಕಲ್ಯ, ಸಫಾನ್ ಸೈಯದ್ ಮತ್ತು ಪ್ರೊ. ಗೋಪಾಲ್ ರೆಡ್ಡಿ ಉಪಸ್ಥಿತರಿದ್ದರು.

ಶಿಕ್ಷಕರು ಉಚಿತವಾಗಿ ಈ ಪುಸ್ತಕವನ್ನು ಪಡೆಯಲು ಮೇರಿಹಿಲ್‌ನಲ್ಲಿರುವ ವಿಕಾಸ್ ಕಾಲೇಜ್‌ನ್ನು ಸಂಪರ್ಕಿಸಬಹುದು. ಶಿಕ್ಷಕರೊಬ್ಬರಿಗೆ ಒಂದು ಪ್ರತಿಯನ್ನು ನೀಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಪುಸ್ತಕದ ವಿಶೇಷತೆ

ಅತ್ಯುತ್ತಮ ಶಿಕ್ಷಕ ಹಾಗೂ ಉತ್ತಮ ತರಗತಿಯನ್ನು ನಡೆಸಲು ನಾಲ್ಕು ಅಂಶಗಳು ಮುಖ್ಯವಾಗುತ್ತವೆ. 1.ಜ್ಞಾನ 2 ಜ್ಞಾನವನ್ನು ಕೌಶಲ್ಯವಾಗಿ ಪರಿವರ್ತಿಸುವುದು, 3.ಪಠ್ಯಕ್ಕೆ ಸಂಬಂಧಿಸಿದಂತೆ ಬೋಧನಾ ಸಾಮಾಗ್ರಿಯನ್ನು ರಚಿಸುವುದು. 4.ವಿದ್ಯಾರ್ಥಿಗಳನ್ನು ಗೌರವಿಸುವುದು.

ಈ ನಾಲ್ಕು ಅಂಶಗಳನ್ನು ಹೊಂದಿರದ ಶಿಕ್ಷಕರು ವಿಫಲತೆಯನ್ನು ಹೊಂದುತ್ತಾರೆ. ಲಿಟ್ಲ್ ಬ್ಲಾಕ್ ಬುಕ್ ಈ ನಾಲ್ಕು ಅಂಶಗಳನ್ನು ಪುಷ್ಟೀಕರಿಸುತ್ತದೆ. ತರಬೇತಿ ಮತ್ತು ಬೋಧನಾ ಕ್ಷೇತ್ರದಲ್ಲಿ ಲೇಖಕರಿಗಿದ್ದ ಹತ್ತು ವರ್ಷದ ಅನುಭವದ ಮೇರೆಗೆ ವಿದ್ಯಾರ್ಥಿಗಳನ್ನು ಪ್ರೇರಣೆ ಮಾಡುವಲ್ಲಿ ಉಪಯುಕ್ತವಾಗುವ ಹಾಗೆ ಕೆಲವೊಂದು ಅಂಶಗಳನ್ನು ಈ ಪುಸ್ತಕದಲ್ಲಿ ಸೇರಿಸಿದ್ದಾರೆ.

2014ರ ಮೇ ತಿಂಗಳಲ್ಲಿ ವಿದ್ಯಾರ್ಥಿಗಳಿಗಾಗಿ ಲಿಟ್ಲ್ ಬ್ಲಾಕ್ ಬುಕ್‌ನ್ನು ಬರೆದಿದ್ದರು. ಈ ಪುಸ್ತಕದ 5,000 ಪ್ರತಿಗಳು ಈಗಾಗಲೇ ವಿದ್ಯಾರ್ಥಿ ಸಮುದಾಯದಲ್ಲಿ ಅತ್ಯುತ್ತಮ ರೀತಿಯಲ್ಲಿ ಮಾರಾಟವಾಗಿ, ಈಗಲೂ ಕೂಡ ಮಾರಾಟವಾಗುತ್ತಿವೆ. ಈ ಪುಸ್ತಕವನ್ನು ಅಲೋಶಿಯಸ್ ಕಾಲೇಜಿನ ನಿರ್ದೇಶಕ ಫಾ. ಡೆಂಜಿಲ್, ಎಕ್ಸ್‌ಪರ್ಟ್ ಕಾಲೇಜು ಅಧ್ಯಕ್ಷ ನರೇಂದ್ರ ನಾಯಕ್ ಹಾಗೂ ಕಾಸ್ಮೋಸ್ ಟ್ಯುಟೋರಿಯಲ್ಸ್‌ನ ಪ್ರೊ.ನದೀಮ್ ಕಾಸ್ಮೋಸ್ ಪ್ರಶಂಸಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X