Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರಮಝಾನ್‌ನಲ್ಲಿ ಡಯಾಬಿಟಿಸ್ ನಿರ್ವಹಣೆ...

ರಮಝಾನ್‌ನಲ್ಲಿ ಡಯಾಬಿಟಿಸ್ ನಿರ್ವಹಣೆ ಹೇಗೆ?

ವಾರ್ತಾಭಾರತಿವಾರ್ತಾಭಾರತಿ9 Jun 2016 9:29 PM IST
share
ರಮಝಾನ್‌ನಲ್ಲಿ ಡಯಾಬಿಟಿಸ್ ನಿರ್ವಹಣೆ ಹೇಗೆ?

ರಮಝಾನ್ ವೇಳೆ ಉಪವಾಸ ಕೈಗೊಳ್ಳುವ ಮಧುಮೇಹ ರೋಗಿಗಳಿಗೆ ಸಂಕೀರ್ಣ ಆರೋಗ್ಯ ಸಮಸ್ಯೆಗಳು ಎದುರಾಗುವ ಅಪಾಯ ಇರುತ್ತದೆ. ಈ ಹಿನ್ನೆಲೆಯಲ್ಲಿ ವೈದ್ಯರು ಉಪವಾಸ ಮಾಡಬಹುದು ಎಂದು ಸಲಹೆ ಮಾಡಿದರಷ್ಟೇ ಉಪವಾಸ ಕೈಗೊಳ್ಳಬೇಕು ಎನ್ನುವುದು ತಜ್ಞರ ಸಲಹೆ.

ಒಂದು ತಿಂಗಳಿಡೀ ಹಗಲಿನ ವೇಳೆಯಲ್ಲಿ ನಿರಾಹಾರಿಗಳಾಗುವುದು ಹಾಗೂ ಪ್ರತಿದಿನ ಸಂಜೆ ಇಫ್ತಾರ್ ಕೂಟಗಳಲ್ಲಿ  ಭೋಜನ ಮಾಡುವುದು ಹಾಗೂ ಮುಂಜಾನೆವರೆಗೂ ನಿಯಮಿತವಾಗಿ ಆಹಾರವನ್ನು ತೆಗೆದುಕೊಳ್ಳಲಾಗುತ್ತದೆ.

ಆಹಾರ ತೆಗೆದುಕೊಳ್ಳುವಲ್ಲಿ 12 ರಿಂದ 15 ಗಂಟೆಗಳ ಅಂತರದಲ್ಲಿ ಸಹಜವಾಗಿಯೇ ದೇಹದ ಚಯಾಪಚಯ ವ್ಯವಸ್ಥೆಯಲ್ಲಿ ಬದಲಾವಣೆಯಾಗಲಿದೆ. ಇದು ಮಧುಮೇಹ ರೋಗಿಗಳಲ್ಲಿ ಸಂಕೀರ್ಣ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಲಿದೆ. ಆದ್ದರಿಂದ ಉಪವಾಸ ಕೈಗೊಳ್ಳುವ ಮೊದಲು ವೈದ್ಯರ ಸಲಹೆ ಪಡೆದು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ ಎಂದು ಸಾಕೇತ್‌ನ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮಧುಮೇಹ ತಜ್ಞ ವಿಕಾಸ್ ಅಹ್ಲುವಾಲಿಯಾ ಹೇಳುತ್ತಾರೆ.

ಉಪವಾಸ ಸಂದರ್ಭದಲ್ಲಿ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗುವ ಅಥವಾ ದೇಹದಲ್ಲಿ ಸಕ್ಕರೆ ಅಂಶ ವ್ಯತ್ಯಯವಾಗುವ ಅಪಾಯ ಇರುತ್ತದೆ. ದೀರ್ಘ ಉಪವಾಸದ ಬಳಿಕ ನಿಯತವಾಗಿ ರಾತ್ರಿ ಆಹಾರ ತೆಗೆದುಕೊಳ್ಳುವುದರಿಂದ ಸಕ್ಕರೆ ಅಂಶ ವ್ಯತ್ಯಯವಾಗುತ್ತದೆ. ಸಕ್ಕರೆ ಅಂಶ ರಕ್ತದಲ್ಲಿ ದಿಢೀರನೆ ಕಡಿಮೆಯಾದಾಗ ಹೈಪೋಗ್ಲೈಸೇಮಿಯಾ ರೋಗಕ್ಕೂ ತುತ್ತಾಗುವ ಸಾಧ್ಯತೆ ಇರುತ್ತದೆ. ಇದರಿಂದ ರೋಗಿ ಪ್ರಜ್ಞೆಯನ್ನೂ ಕಳೆದುಕೊಳ್ಳುವ ಅಪಾಯವಿದೆ.

ಈ ಹಿನ್ನೆಲೆಯಲ್ಲಿ ಅಧಿಕ ಕಾರ್ಬೊಹೈಡ್ರೇಟ್‌ಗಳಿರುವ ಸಕ್ಕರೆ, ಕಲ್ಲುಸಕ್ಕರೆ, ಜೇನು, ಘನೀಕೃತ ಹಾಲಿನಂಥ ಬಳಕೆಯನ್ನು ಕಡಿಮೆ ಮಾಡಿ, ಸಾಧ್ಯವಾದಷ್ಟೂ ಕೆಂಪಕ್ಕಿ, ಇಡೀ ಕಾಳಿನ ಬ್ರೆಡ್, ತರಕಾರಿಗಳನ್ನು ಬಳಸಬಹುದು. ಬೆಳ್ತಿಗೆ ಅಕ್ಕಿ ಅಥವಾ ಆಲೂಗಡ್ಡೆ ಬಳಕೆ ಬೇಡ. ಉಪವಾಸ ಬಿಡುವ ವೇಳೆಯಲ್ಲಿ ನೈಸರ್ಗಿಕ ಸಕ್ಕರೆ ಅಂಶವಿರುವ ಹಣ್ಣುಗಳ ರಸಗಳನ್ನು ಸೇವಿಸಬಹುದು.

ಮುಂಜಾನೆ ಆಹಾರದಲ್ಲಿ ಸಿಹಿ ತಿನಿಸು, ಕರಿದ ಪದಾರ್ಥಗಳು ಹಾಗೂ ಅಧಿಕ ಲವಣ ಹಾಗೂ ಸಕ್ಕರೆ ಅಂಶಗಳಿರುವ ಆಹಾರ ಬೇಡ. ರಾತ್ರಿ ಊಟವಾದ ತಕ್ಷಣ ನಿದ್ದೆ ಬೇಡ. ಕನಿಷ್ಠ ಊಟ ಹಾಗೂ ನಿದ್ದೆ ನಡುವೆ 2 ಗಂಟೆ ಅಂತರವಿರಲಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X