Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾವ್ ಬಹದ್ದೂರ್ ರಾಯ್ ಕ್ಷಮೆಯಾಚಿಸಲಿ:...

ರಾವ್ ಬಹದ್ದೂರ್ ರಾಯ್ ಕ್ಷಮೆಯಾಚಿಸಲಿ: ಬರಗೂರು ಒತ್ತಾಯ

‘ಸಂವಿಧಾನ ಬರೆದದ್ದು ಅಂಬೇಡ್ಕರ್ ಅಲ್ಲ’ ವಿವಾದಿತ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ9 Jun 2016 10:57 PM IST
share
ರಾವ್ ಬಹದ್ದೂರ್ ರಾಯ್ ಕ್ಷಮೆಯಾಚಿಸಲಿ: ಬರಗೂರು ಒತ್ತಾಯ

ಬೆಂಗಳೂರು, ಜೂ. 9: ಸಂವಿಧಾನ ಬರೆದದ್ದು ಡಾ.ಅಂಬೇಡ್ಕರ್ ಅಲ್ಲ ಎಂದು ವಿವಾದಿತ ಹೇಳಿಕೆ ನೀಡಿರುವ ಎಬಿವಿಪಿ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ(ಐಜಿಎನ್‌ಸಿಐ) ಅಧ್ಯಕ್ಷ ರಾವ್ ಬಹದ್ದೂರ್ ರಾಯ್ ಈ ಕೂಡಲೇ ಕ್ಷಮೆಯಾಚಿಸುವ ಜೊತೆಗೆ ಸಂವಿಧಾನ ಬರೆದದ್ದು ಯಾರು ಎಂಬುದನ್ನು ಸಾಬೀತು ಪಡಿಸಲಿ ಎಂದು ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದ್ದಾರೆ.
ಗುರುವಾರ ನಗರದ ಕಬ್ಬನ್‌ಪಾರ್ಕ್‌ನಲ್ಲಿರುವ ಎನ್‌ಜಿಒ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಏರ್ಪಡಿಸಿದ್ದ, ಪ್ರೊ.ಬಿ.ಕೃಷ್ಣಪ್ಪ ಅವರ 78ನೆ ಜನ್ಮದಿನ ಹಾಗೂ ಸದಸ್ಯತ್ವ ಸಮರ್ಪಣಾ ದಿನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

 ಇತ್ತೀಚಿಗೆ ಐಜಿಎನ್‌ಸಿಎ ಅಧ್ಯಕ್ಷ ರಾಯ್ ಬಹದ್ದೂರ್ ರಾಯ್ ಎಂಬುವರು ಅಂಬೇಡ್ಕರ್ ಅವರು ಸಂವಿಧಾನ ಬರೆದಿಲ್ಲ. ಐಪಿಎಸ್ ಅಧಿಕಾರಿಗಳು ಗುಪ್ತಚರ ಮಾಹಿತಿಗಳನ್ನು ಕ್ರೋಡೀಕರಿಸಿ ವರದಿ ಸಿದ್ಧಪಡಿಸಿ ಪ್ರಧಾನಿಗೆ ಸಲ್ಲಿಸುವ ರೀತಿಯಲ್ಲಿ ಸಂವಿಧಾನದ ಕರಡು ತಿದ್ದಿ ಇಂಗ್ಲಿಷಿನಲ್ಲಿ ಸಂವಿಧಾನದ ಪ್ರತಿಯನ್ನು ಸಿದ್ಧಪಡಿಸಿ ಕೊಟ್ಟಿದ್ದಾರೆ ಎಂದು ವಿವಾದಿತ ಹೇಳಿಕೆ ನೀಡಿರುವ ಬಗ್ಗೆ ಪ್ರಗತಿಪರರು ಸೇರಿದಂತೆ ಎಲ್ಲರೂ ಧ್ವನಿಗೂಡಿಸಬೇಕೆಂದು ಬರಗೂರು ಕರೆ ನೀಡಿದರು.ರಾಯ್ ಅವರ ಹೇಳಿಕೆಯಲ್ಲಿ ಸಾಮಾಜಿಕ ಅಸಹನೆಯಿದೆ ಎನ್ನಬಹುದು ಎಂದ ಅವರು, ಹಿಂದೆ ಅಂಬೇಡ್ಕರ್ ಬಗ್ಗೆ ಇಂತಹ ಮಾತುಗಳನ್ನು ಹೇಳಲು ಸಾಧ್ಯವಿರಲಿಲ್ಲ. ಅಲ್ಲದೆ, ಟೀಕೆಗಾಗಿಯೂ ಹೆದರಿ ಹೇಳುತ್ತಿರಲಿಲ್ಲ. ಆದರೆ, ಇದೀಗ ಇಂತಹ ಹೇಳಿಕೆಗಳು ಹೊರಬರಲು ಕಾರಣಗಳೇನು, ಇದರ ಹಿಂದೆ ಯಾವ ಶಕ್ತಿಗಳಿವೆ ಎಂದು ಪ್ರಶ್ನಿಸಿದರು.
ರಾಯ್ ಬಹದ್ದೂರ್ ಅವರಂತೆ ಚಿಂತನೆಯುಳ್ಳವರನ್ನು ಕೇಂದ್ರದ ಇತಿಹಾಸ ಸಂಶೋಧನಾ ಪರಿಷತ್ ಹಾಗೂ ಸೆನ್ಸಾರ್ ಮಂಡಳಿ ಸೇರಿದಂತೆ ಇನ್ನಿತರೆ ಸಂಸ್ಥೆಗಳ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವುದು ಬಹುದೊಡ್ಡ ದುರಂತ ಎಂದ ಅವರು, ಇತ್ತೀಚೆಗೆ ಜಾತಿವಾದ, ಕೋಮುವಾದ ಮತ್ತು ಬಂಡವಾಳವಾದ ಹೆಚ್ಚು ವ್ಯಾಪ್ತಿ ಪಡೆದುಕೊಳ್ಳುತ್ತಿದೆ. ಈ ಬಗ್ಗೆ ಹೋರಾಟ ಮಾಡಲು ಪ್ರತಿಯೊಬ್ಬರು ಪ್ರೊ.ಬಿ.ಕೃಷ್ಣಪ್ಪ ಅವರ ಪ್ರೇರಣೆಯನ್ನು ಪಡೆಯಬೇಕೆಂದು ಬರಗೂರು ನುಡಿದರು.
ಕಾರ್ಯಕ್ರಮದಲ್ಲಿ ದಸಂಸ ರಾಜ್ಯ ಸಮಿತಿ ಸಂಚಾಲಕ ಸತ್ಯಭದ್ರಾವತಿ, ಚಿತ್ರ ನಿರ್ದೇಶಕ ಎನ್.ಎಸ್.ಶಂಕರ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.

ರಾಯ್ ಬಹದ್ದೂರ್ ಅವರು ಡಾ.ಅಂಬೇಡ್ಕರ್ ಬಗ್ಗೆ ವಿವಾದಿತ ಹೇಳಿಕೆ ನೀಡಿರುವ ಬಗ್ಗೆ ಇದುವರೆಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಯಾರು ಕೂಡ ಖಂಡಿಸಿಲ್ಲ. ಇನ್ನು ಕಾಂಗ್ರೆಸ್ಸಿಗರಿಗೆ ಇದರ ಬಗ್ಗೆ ತಿಳಿದೇ ಇಲ್ಲ.
 - ಡಾ.ಬರಗೂರು ರಾಮಚಂದ್ರಪ್ಪ, ಸಾಹಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X