Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಪ್ರಾದೇಶಿಕ ಹಿತಾಸಕ್ತಿಗಳನ್ನು ...

ಪ್ರಾದೇಶಿಕ ಹಿತಾಸಕ್ತಿಗಳನ್ನು ಮಣ್ಣುಪಾಲು ಮಾಡುತ್ತಿರುವ ರಾಜ್ಯಸಭಾ ಚುನಾವಣೆಗಳು

ಕು.ಸ.ಮಧುಸೂದನ, ರಂಗೇನಹಳ್ಳಿಕು.ಸ.ಮಧುಸೂದನ, ರಂಗೇನಹಳ್ಳಿ9 Jun 2016 11:41 PM IST
share
ಪ್ರಾದೇಶಿಕ ಹಿತಾಸಕ್ತಿಗಳನ್ನು  ಮಣ್ಣುಪಾಲು ಮಾಡುತ್ತಿರುವ ರಾಜ್ಯಸಭಾ ಚುನಾವಣೆಗಳು

ರಾಜ್ಯಸಭಾ ಚುನಾವಣೆಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ ರಾಜ್ಯಸಭೆಯ ಅಸ್ತಿತ್ವದ ಬಗ್ಗೆ ಮತ್ತು ಅದರ ಉಪಯುಕ್ತತೆಯ ಬಗ್ಗೆ ಹಾಗೂ ಅದಕ್ಕೆ ಸದಸ್ಯರನ್ನು ಆಯ್ಕೆ ಮಾಡುವ ವಿಧಾನಗಳ ಬಗ್ಗೆ ಕೆಲವು ಮೂಲಭೂತ ಪ್ರಶ್ನೆಗಳನ್ನು ಎತ್ತುವ ಅನಿವಾರ್ಯತೆ ಇವತ್ತು ಎಂದಿಗಿಂತ ಹೆಚ್ಚಾಗಿದೆ. ರಾಜ್ಯಗಳ ಹಿತಾಸಕ್ತಿಯನ್ನು ಕಾಪಾಡುವ ಮತ್ತು ಪ್ರಾದೇಶಿಕ ಸಮಸ್ಯೆಗಳ ಬಗ್ಗೆ ವಿದ್ವತ್‌ಪೂರ್ಣವಾಗಿ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಪ್ರತಿ ರಾಜ್ಯದಿಂದಲೂ ಅಲ್ಲಿನ ಜನಸಂಖ್ಯೆಗನುಗುಣವಾಗಿ ಮತ್ತು ನೇರ ಚುನಾವಣೆಯಲ್ಲಿ ಗೆಲ್ಲಲಾಗದಂತಹವರನ್ನು ಲೋಕಸಭೆಗೆ ಸಮಾನಾಂತರವಾದ ರಾಜ್ಯಸಭೆಗೆ ಆಯ್ಕೆ ಮಾಡಿ ತರುವುದೇ ರಾಜ್ಯಸಭೆಯ ಮೂಲ ಉದ್ದೇಶವಾಗಿತ್ತು. ಹಾಗಾಗಿ ಪ್ರಾರಂಭದಲ್ಲಿ ಆಯಾ ರಾಜ್ಯದವರೇ ಆಯ್ಕೆಯಾಗಿ ಲೋಕಸಭೆ ಯಲ್ಲಿ ಪ್ರಸ್ತಾಪಿತವಾಗದಂತಹ ಹಲವಾರು ವಿಷಯಗಳನ್ನು ರಾಜ್ಯಸಭೆಯ ಸದಸ್ಯರು ಚರ್ಚಿಸಿ ಸರಕಾರದ ಗಮನ ಸೆಳೆಯುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದರು. ಲೋಕಸಭೆಯಲ್ಲಿ ಅಂಗೀಕಾರವಾದ ಮಸೂದೆ ಯೊಂದನ್ನು ತಾವು ಚರ್ಚಿಸಿ ಪುನರ್ ಪರಿಶೀಲನೆಗೆ ಕಳಿಸುವ ಹಿರಿಯಣ್ಣನ ಅಧಿಕಾರವೂ ಈ ಸದಸ್ಯರಿಗೆ ಇರುತ್ತದೆ. ಆದರೆ ಯಾವಾಗ ಶಕ್ತಿರಾಜಕಾರಣವು ದೇಶದ ಹಿತಾಸಕ್ತಿಯನ್ನೂ ಮೀರಿ ಬೆಳೆದು ನಿಂತಿತೊ, ಆಗಿನಿಂದ ರಾಜ್ಯಸಭೆಗೆ ಸದಸ್ಯರನ್ನು ಆರಿಸುವ ರಾಜಕೀಯ ಪಕ್ಷಗಳ ಕಾರ್ಯವೈಖರಿ ಬದಲಾಗುತ್ತ ಹೋಗಿ ಅದಕ್ಕೆ ತಕ್ಕ ಹಾಗೆ ಕಾನೂನಿನಲ್ಲಿಯೂ ಬದಲಾವಣೆಗಳನ್ನು ತರಲಾಯಿತು. ಈ ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳದ್ದೂ ಒಂದೇ ನಿಲುವು. ನಾನು ಮೊದಲಿಗೆ ಹೇಳಿದಂತೆ ಆಯಾ ರಾಜ್ಯದವರೇ ರಾಜ್ಯಸಭೆಯ ಅಭ್ಯರ್ಥಿಯಾಗಿ ಆಯ್ಕೆಯಾಗಬೇಕಿತ್ತು. ಆದರೆ ತದನಂತರದಲ್ಲಿ ಯಾವುದೇ ರಾಜ್ಯದ ವ್ಯಕ್ತಿಯೊಬ್ಬ ಇನ್ನೊಂದು ರಾಜ್ಯದ ಅಭ್ಯರ್ಥಿಯಾಗಿ ಸ್ಪರ್ಧಿಸಬಲ್ಲ ಅವಕಾಶವನ್ನು ಕಾನೂನಿನ ಮೂಲಕ ತರಲಾಯಿತು. ಆದರದಕ್ಕೆ ಆತ ತಾನು ಸ್ಪರ್ಧಿಸಲಿರುವ ರಾಜ್ಯದಲ್ಲಿ ವಾಸ ಮಾಡುತ್ತಿದ್ದೇನೆಂದು ಒಂದು ಪೂರಕ ವಿಳಾಸ ನೀಡಬೇಕಾಗಿತ್ತು ಅಷ್ಟೆ. ಈ ಹಿಂದೆ ರಾಂ ಜೇಠ್ಮಲಾನಿಯವರು ಕರ್ನಾಟಕದಿಂದ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದಾಗ ಮದ್ಯದ ವ್ಯಾಪಾರಿಯೊಬ್ಬರ ಅತಿಥಿ ಗೃಹದ ವಿಳಾಸವನ್ನು ನೀಡಿದ್ದನ್ನು ನಾವು ಸ್ಮರಿಸಬಹುದಾಗಿತ್ತು. ತದನಂತರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಸ್ಸಾಂನಿಂದ ಸ್ಪರ್ಧಿಸಿದಾಗ ನೀಡಿದ ಯಾವುದೋ ಅಪರಿಚಿತ ವಿಳಾಸ ಸಾಕಷ್ಟು ವಿವಾದ ಮತ್ತು ಚರ್ಚೆಗೆ ಗ್ರಾಸವಾಗಿತ್ತು. ಇಂತಹ ವಿಳಾಸ ನೀಡುವ ಪದ್ಧತಿಯಿಂದ ಮುಜುಗರ ಎದುರಿಸಬೇಕಾಗುತ್ತದೆ ಎಂಬುದನ್ನು ಅರ್ಥ ಮಾಡಿಕೊಂಡ ರಾಜಕೀಯ ಪಕ್ಷಗಳು ವಿಳಾಸ ನೀಡುವ ಔಪಚಾರಿಕತೆಯ ಅಗತ್ಯವೂ ಇಲ್ಲವೆಂಬ ಕಾನೂನು ಜಾರಿಗೆ ತಂದು ಯಾರು ಯಾವ ರಾಜ್ಯದಲ್ಲಿ ಬೇಕಾದರೂ ಸ್ಪರ್ಧಿಸಲು ಬಹಳ ಸುಲಭವಾದ ಮಾರ್ಗವನ್ನು ಕಲ್ಪಿಸಿಕೊಟ್ಟವು. ಹಾಗಾಗಿ ಆಯಾ ರಾಜ್ಯದವರೇ ಸ್ಪರ್ಧಿಸಬೇಕೆಂಬ ಯಾವ ಕಾನೂನು ಇವತ್ತು ಇಲ್ಲವಾಗಿದ್ದು, ಅದೀಗ ಕೇವಲ ರಾಜಕೀಯ ಪಕ್ಷಗಳ ನೈತಿಕತೆಯ ಪ್ರಶ್ನೆಯಾಗಿದೆ. ಆದರೆ ನಮ್ಮ ರಾಜಕೀಯ ಪಕ್ಷಗಳಿಂದ ನೈತಿಕತೆಯನ್ನು ನಿರೀಕ್ಷಿಸುವುದು ಮತದಾರರ ಮೂರ್ಖತನವೆಂಬುದನ್ನು ಇದೀಗ ನಡೆಯಲಿರುವ ರಾಜ್ಯಸಭಾ ಚುನಾವಣೆ ಸಾಬೀತು ಮಾಡಿದೆ.
  ಇವತ್ತು ನಮ್ಮ ಎರಡೂ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಭಾಜಪ ನಿಲ್ಲಿಸಿರುವ ಅಭ್ಯರ್ಥಿಗಳನ್ನೂ ಮತ್ತು ಅವರುಗಳ ಮೂಲರಾಜ್ಯಗಳು ಹಾಗೂ ಸ್ಪರ್ಧಿಸಿರುವ ರಾಜ್ಯಗಳತ್ತ ಒಂದಿಷ್ಟು ಕಣ್ಣು ಹಾಯಿಸಿದರೆ ಸಾಕು ನಮ್ಮ ರಾಜ್ಯಸಭಾ ಚುನಾವಣೆಗಳ ಹಣೆಬರಹ ಗೊತ್ತಾಗುತ್ತದೆ ಮೊದಲಿಗೆ ಅಧಿಕಾರರೂಢ ಭಾಜಪದ ಪಟ್ಟಿ ನೋಡಿ: ಆಂಧ್ರಪ್ರದೇಶದ ವೆಂಕಯ್ಯನಾಯ್ಡುರವರು ರಾಜಸ್ಥಾನದಿಂದಲೂ, ನಿರ್ಮಲಾ ಸೀತಾರಾಮನ್ ತಮಿಳುನಾಡಿನವರಾಗಿದ್ದು ಕರ್ನಾಟಕದಿಂದ ಸ್ಪರ್ಧಿಸಿದ್ದಾರೆ. ಇನ್ನು ಕಾಂಗ್ರೆಸ್ ಸಹ ಇದರಿಂದ ಹೊರತಾದ್ದೇನಲ್ಲ: ಕಳೆದ ಬಾರಿ ಆಂಧ್ರಪ್ರದೇಶದಿಂದ ಸ್ಪರ್ಧಿಸಿದ್ದ ಜಯರಾಂ ರಮೇಶ್ ಈಗ ಕರ್ನಾಟಕದಿಂದ. ತಮಿಳುನಾಡು ಮೂಲದ ಪಿ.ಚಿದಂಬರಂ ಮಹಾರಾಷ್ಟದಿಂದಲೂ, ಪಂಜಾಬ್‌ನ ಕಪಿಲ್ ಸಿಬಾಲ್ ಉತ್ತರ ಪ್ರದೇಶದಿಂದಲೂ ಸ್ಪರ್ಧಿಸುತ್ತಿದ್ದಾರೆ. ಇನ್ನುಳಿದಂತೆ ಭಾಜಪದ ಪಿಯೂಶ್ ಗೋಯಲ್, ಮುಖ್ತಾರ್ ಅಬ್ಬಾಸ್ ನಕ್ವಿ ಮುಂತಾದವರು ಸಹ ಒಂದೊಂದು ಬಾರಿ ಒಂದೊಂದು ರಾಜ್ಯಗಳಿಗೆ ವಲಸೆ ಹೋಗಿ ಗೆದ್ದವರೇ ಆಗಿದ್ದಾರೆ.
ಹಾಗಿದ್ದರೆ ಹೀಗೆ ಬೇರೆ ರಾಜ್ಯಗಳಿಂದ ಗೆದ್ದು ಹೋದವರು ತಾವು ಪ್ರತಿನಿಧಿಸುವ ರಾಜ್ಯದ ಹಿತಾಸಕ್ತಿಯನ್ನು ಎಷ್ಟರ ಮಟ್ಟಿಗೆ ರಾಜ್ಯಸಭೆಯಲ್ಲಿ ಎತ್ತಿ ಹಿಡಿಯುತ್ತಾರೆಂಬುದೇ ನಮ್ಮ ಪ್ರಶ್ನೆಯಾಗಿದೆ. ತಾವು ಪ್ರತಿನಿಧಿಸುವ ರಾಜ್ಯಗಳ ಭಾಷೆಯನ್ನೇ ಕಲಿಯದ ಅವರು ಅದೆಷ್ಟರ ಮಟ್ಟಿಗೆ ಆ ರಾಜ್ಯದ ಸಂಸ್ಕೃತಿಯನ್ನು ಪ್ರತಿನಿಧಿಸಬಲ್ಲರೋ ಅರ್ಥವಾಗದ ವಿಷಯವಾಗಿದೆ. ಇದಕ್ಕೊಂದಿಷ್ಟು ಉದಾಹರಣೆಗಳನ್ನು ನೋಡಬಹುದಾಗಿದೆ. ಭಾಜಪದಿಂದ ಕರ್ನಾಟಕವನ್ನು ನಾಲ್ಕುಬಾರಿ ಪ್ರತಿನಿಧಿಸಿದ್ದ ವೆಂಕಯ್ಯ ನಾಯ್ಡುರವರು ಹದಿನೆಂಟು ವರ್ಷಗಳ ನಂತರವೂ ಕನ್ನಡ ಕಲಿತು ಮಾತನಾಡಲೇ ಇಲ್ಲ. ಅದು ಹೋಗಲಿ ತಮಿಳು ನಾಡಿನ ಜೊತೆ ಕಾವೇರಿ ವಿವಾದ ತಾರಕಕ್ಕೇರಿದಾಗಲಾಗಲಿ, ಗೋವಾದೊಂದಿಗಿನ ಕಳಸಾ ಬಂಡೂರಿ ವಿವಾದದ ಬಗ್ಗೆಯಾಗಲಿ, ಆಂಧ್ರದ ಜೊತೆಗಿನ ಕೃಷ್ಣಾ ನೀರು ಹಂಚಿಕೆಯ ವಿಷಯದಲ್ಲಾಗಲಿ ಅವರು ತಾವು ಪ್ರತಿನಿಧಿಸುವ ರಾಜ್ಯಸಭೆಯಲ್ಲಿ ಒಂದೇ ಒಂದು ಮಾತನ್ನಾಡಲಿಲ್ಲ. ಇದರ ಬಗ್ಗೆ ಭಾಜಪವನ್ನು ಕೇಳಿದರೆ ಅವರು ರಾಷ್ಟ್ರೀಯ ನಾಯಕರು, ರಾಷ್ಟ್ರದ ಒಟ್ಟಾರೆ ಹಿತಾಸಕ್ತಿಯೇ ಮುಖ್ಯವೆಂದು ಸಬೂಬು ಹೇಳುತ್ತಾರೆ. ಇನ್ನು ಬಹಳ ಹಿಂದೆ ಕರ್ನಾಟಕದಿಂದ ಆಯ್ಕೆಯಾಗಿದ್ದ ರಾಂ ಜೇಠ್ಮಲಾನಿಯವರು ಸಹ ಒಂದೇ ಒಂದು ದಿನವೂ ಎದ್ದು ನಿಂತು ಕರ್ನಾಟಕದ ಪರ ಮಾತನಾಡಲಿಲ್ಲ. ಕಳೆದಬಾರಿ ಜನತಾದಳದ ಬೆಂಬಲದಿಂದ ಆಯ್ಕೆಯಾಗಿದ್ದ ತಮಿಳುನಾಡಿನ ರಾಮಸ್ವಾಮಿಯವರು ಕಾವೇರಿಯ ವಿವಾದ ಭುಗಿಲೆದ್ದಾಗ ಮಾಯವಾದವರು ಮತ್ತೆಂದೂ ಕಾಣಿಸಿಕೊಳ್ಳಲೇ ಇಲ್ಲ. ಕರ್ನಾಟಕವನ್ನು ಹಿಂದೆ ಭಾಜಪದ ಪರವಾಗಿ ಪ್ರತಿನಿಧಿಸಿದ್ದ ಹೇಮಾ ಮಾಲಿನಿಯ ಮುಖವನ್ನು ಟಿ.ವಿ. ಜಾಹೀರಾತುಗಳಲ್ಲಿ ನೋಡಿದ್ದನ್ನು ಬಿಟ್ಟರೆ ಆಕೆಯೆಂದೂ ಕರ್ನಾಟಕದ ಒಳನಾಡಿಗೆ ಬರಲೇ ಇಲ್ಲ. ನೇರ ಚುನಾವಣೆಯಲ್ಲಿ ಗೆಲ್ಲಲಾಗದಂತಹ ಮುಖರಹಿತ ವ್ಯಕ್ತಿಗಳಿಗೆ ಮಣೆ ಹಾಕುತ್ತ ಪ್ರಜಾಸತ್ತೆಯ ನಿಜವಾದ ಆಶಯವನ್ನು ಗಾಳಿಗೆ ತೂರುತ್ತಿವೆ. ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಸೋತು ಮನೆ ಸೇರಿದವರಿಗೆ ರಾಜಕೀಯವಾಗಿ ಮರುಜನ್ಮ ನೀಡುವುದಕ್ಕೂ ಈ ಚುನಾವಣೆಗಳು ನೆರವಾಗುತ್ತಿವೆ. ಜೊತೆಗೆ ಬಂಡವಾಳಶಾಹಿ ಉದ್ಯಮಿಗಳಿಗೆ ತಮ್ಮ ವ್ಯವಹಾರಗಳನ್ನು ಸುಸೂತ್ರವಾಗಿ ನಡೆಸಿಕೊಂಡುಹೋಗಲು ಈ ಸದಸ್ಯತ್ವದ ದುರುಪಯೋಗವೂ ನಡೆಯುತ್ತಿದೆ. ಈ ಹಿಂದೆ ಗೆದ್ದ ವಿಜಯ ಮಲ್ಯ ಮತ್ತು ರಾಮಸ್ವಾಮಿಯವರ ಉದ್ದೇಶವೇ ತಮ್ಮ ವ್ಯಾಪಾರ ಉದ್ದಿಮೆಗಳಿಗೆ ಈ ಸದಸ್ಯತ್ವ ನೆರವಾಗಲಿಯೆಂಬುದಾಗಿತ್ತು.
ಆದ್ದರಿಂದ ಯಾವುದೋ ರಾಜ್ಯದವರನ್ನು ಇನ್ಯಾವುದೋ ರಾಜ್ಯದಿಂದ ಆರಿಸಿ ಕಳಿಸಿದರೆ ಆ ವ್ಯಕ್ತಿಯ ಆ ಪಕ್ಷದ ಹಿತಾಸಕ್ತಿ ಕಾಪಾಡಲ್ಪಡುತ್ತದೆಯೇ ಹೊರತು, ಆ ರಾಜ್ಯದ ಹಿತಾಸಕ್ತಿಯಲ್ಲ. ತಾವು ಆಯ್ಕೆಯಾದ ರಾಜ್ಯದ ನೆಲಜಲಗಳ ಬಗ್ಗೆ ದನಿಯೆತ್ತಬೇಕಾದ ಸದಸ್ಯರುಗಳು ತಮ್ಮ ಮೂಲರಾಜ್ಯಕ್ಕೆ ನಿಷ್ಟರಾಗಿರುತ್ತಾರೆ ಮತ್ತು ಪಕ್ಷದ ಹಿತದೃಷ್ಟಿಯಿಂದ ಮಾತ್ರ ಕೆಲಸ ನಿರ್ವಹಿಸಬಲ್ಲರು. ಕನಿಷ್ಠ ಪ್ರಾದೇಶಿಕ ಪಕ್ಷಗಳಾದರೂ ಇಂತಹ ಬೆಳವಣಿಗೆಗಳನ್ನು ವಿರೋಧಿಸುತ್ತವೆಯೆಂದರೆ ಅವೂ ಸಹ ವಿವಿಧ ಆಮಿಷಗಳಿಗೊಳಗಾಗಿ ಅನ್ಯರಾಜ್ಯದ ಉದ್ದಿಮೆದಾರರನ್ನು ಆರಿಸುವ ಕೆಟ್ಟಚಾಳಿಗೆ ಬಿದ್ದಿವೆ.
ವಿಪರ್ಯಾಸ ನೋಡಿ; ಕರ್ನಾಟಕದ ಜನತೆ ಅನ್ಯರಾಜ್ಯದ ಅಭ್ಯರ್ಥಿಗಳ ಬಗ್ಗೆ ಇಷ್ಟೊಂದು ವಿರೋಧ ವ್ಯಕ್ತ ಪಡಿಸುತ್ತಿರುವಾಗಲೇ ಪ್ರಾದೇಶಿಕ ಪಕ್ಷವಾದ ಜನತಾದಳದ ಹೆಚ್.ಡಿ. ಕುಮಾರಸ್ವಾಮಿಯವರು ಭಾಜಪದ ನಾಯಕರಾದ ಆರ್. ಅಶೋಕ್ ಅವರೊಂದಿಗೆ ಚರ್ಚಿಸಿ ನಿರ್ಮಲಾ ಸೀತಾರಾಮನ್ ಗೆಲ್ಲಬೇಕೆಂದು ಆಶಿಸಿದ್ದಾರೆ. ಕೇವಲ 40 ಸ್ಥಾನಗಳನ್ನು ಇಟ್ಟುಕೊಂಡೇ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಎದೆಗಾರಿಕೆ ತೋರಿಸಿದ ಕುಮಾರಸ್ವಾಮಿಯವರೀಗ ಭಾಜಪಕ್ಕೆ ಕೊರತೆಯಾಗಬಲ್ಲ ಮತಗಳನ್ನು ತುಂಬಿ ಕೊಡುವ ಹಾದಿಯಲ್ಲಿದ್ದಾರೆ. ಕೊನೆಗೂ ಅವರಿಗೆ ತಮ್ಮ ಪಕ್ಷ ಅಧಿಕಾರದ ಹತ್ತಿರಕ್ಕೆ ಹೋಗುವುದು ಬೇಕಾಗಿದೆಯೇ ಹೊರತು, ರಾಜ್ಯದ ಹಿತಾಸಕ್ತಿಯಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ
 ಆದ್ದರಿಂದಲೇ ಇವತ್ತು ರಾಜ್ಯಸಭೆಯ ಚುನಾವಣೆಗಳನ್ನು ಗಂಭೀರವಾಗಿ ತೆಗೆದುಕೊಂಡು, ಚರ್ಚಿಸಬೇಕಾದ ಪ್ರಮೇಯವಿದೆ. ಒಕ್ಕೂಟ ವ್ಯವಸ್ಥೆಗೆ ಯಾವುದೇ ಧಕ್ಕೆ ಬರದಂತೆ ಮತ್ತು ರಾಜ್ಯಗಳ ಹಿತಾಸಕ್ತಿಗಳಿಗೂ ತೊಂದರೆಯಾಗದಂತೆ ರಾಜ್ಯಸಭಾಸದಸ್ಯರನ್ನು ಆಯ್ಕೆ ಮಾಡುವ ಹೊಸ ವ್ಯವಸ್ಥೆಯೊಂದನ್ನು ರೂಪಿಸಬೇಕಾಗಿದೆ. ಲೋಕಸಭೆಯಷ್ಟೇ ಪ್ರಭಾವಶಾಲಿಯಾಗಿರುವ ಮತ್ತು ಹಿರಿಯರ, ಪ್ರತಿಭಾವಂತರ ಮನೆಯೆಂದು ಖ್ಯಾತಿ ಪಡೆದಿರುವ ರಾಜ್ಯಸಭೆಯ ಘನತೆಯನ್ನು ಕಾಪಾಡಲು ಹಾಗೂ ಪ್ರಜಾಸತ್ತೆಯ ಆಶಯವನ್ನು ಸಾಕಾರಗೊಳಿಸಲು ಹಾಲಿ ಇರುವ ಕಾನೂನನ್ನು ತಿದ್ದುಪಡಿ ಮಾಡಿ, ರಾಜ್ಯಸಭಾ ಚುನಾವಣೆಯನ್ನು ಇನ್ನಷ್ಟು ಪಾರದರ್ಶಕವಾಗಿಯೂ, ರಾಜ್ಯಗಳ ಹಿತಕಾಪಾಡುವ ನಿಟ್ಟಿನಲ್ಲಿ ನಡೆಯುವಂತೆಯೂ ಮಾಡುವುದು ನಮ್ಮ ರಾಜಕೀಯ ಪಕ್ಷಗಳ ಆದ್ಯತೆಯಾಗಬೇಕಿದೆ. ಇಲ್ಲದೇ ಹೋದಲ್ಲಿ ಪ್ರಜಾಪ್ರಭುತ್ವದ ಪ್ರಮುಖ ಸಂಸ್ಥೆಗಳ ವೌಲ್ಯ ಕಡಿಮೆಯಾಗುತ್ತಾ ಹೋಗುವುದು ನಿಶ್ಚಿತ!

share
ಕು.ಸ.ಮಧುಸೂದನ, ರಂಗೇನಹಳ್ಳಿ
ಕು.ಸ.ಮಧುಸೂದನ, ರಂಗೇನಹಳ್ಳಿ
Next Story
X