Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದ ಕ್ರೀಡಾ ಸಚಿವರಿಂದ ಅವಮಾನ:...

ಕೇರಳದ ಕ್ರೀಡಾ ಸಚಿವರಿಂದ ಅವಮಾನ: ಒಲಿಂಪಿಯನ್ ಅಂಜು ಆರೋಪ

ವಾರ್ತಾಭಾರತಿವಾರ್ತಾಭಾರತಿ9 Jun 2016 11:56 PM IST
share
ಕೇರಳದ ಕ್ರೀಡಾ ಸಚಿವರಿಂದ ಅವಮಾನ: ಒಲಿಂಪಿಯನ್ ಅಂಜು ಆರೋಪ

ತಿರುವನಂತಪುರ, ಜೂ.9: ಕೇರಳದ ಕ್ರೀಡಾ ಸಚಿವ ಇ.ಪಿ.ಜಯರಾಜ್ ತನ್ನ ಮೇಲೆ ‘ಭ್ರಷ್ಟಾಚಾರ’ದ ಆರೋಪ ಹೊರಿಸಿ ಅವಮಾನಿಸಿದ್ದಾರೆಂದು ಒಲಿಂಪಿಯನ್ ಹಾಗೂ ಅರ್ಜುನ ಪ್ರಶಸ್ತಿ ಪುರಸ್ಕೃತೆ ಅಂಜು ಬಾಬ್ಬಿ ಜಾರ್ಜ್ ಆಪಾದಿಸಿದ್ದಾರೆ. ಈ ಮೂಲಕ ಸಚಿವರು ಮತ್ತೆ ವಿವಾದಕ್ಕೆ ಕಾರಣವಾಗಿದ್ದಾರೆ.

ಕೇರಳ ಕ್ರೀಡಾ ಮಂಡಳಿಯ ಅಧ್ಯಕ್ಷೆಯೂ ಆಗಿರುವ ಅಂಜು, ಈ ವಿಚಾರದ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರಿಗೆ ದೂರು ನೀಡಿದ್ದಾರೆ. ಹೊಸ ಸರಕಾರ ರಚನೆ ಯಾದ ಬಳಿಕ ತಾನು ಮಂಡಳಿಯ ಉಪಾಧ್ಯಕ್ಷ ರೊಂದಿಗೆ ಜೂ.7ರಂದು ಕ್ರೀಡಾ ಸಚಿವರನ್ನು ಭೇಟಿಯಾಗಲು ಹೋಗಿದ್ದೆ. ಅವರು, ಕೇರಳದಲ್ಲಿ ಕ್ರೀಡೆಯ ಸ್ಥಿತಿಗತಿಯ ಬಗ್ಗೆ ಕೇಳಬಹುದೆಂದು ತಾವು ಭಾವಿಸಿದ್ದೆವು. ಆದರೆ, ಮೊದಲ ಭೇಟಿಯಲ್ಲೇ ಸಚಿವರು, ‘‘ನೀವೆಲ್ಲ ಹಿಂದಿನ ಸರಕಾರದಿಂದ ಆಯ್ಕೆಯಾದವರು. ಆದ್ದರಿಂದ ನೀವೆಲ್ಲ ಬೇರೆ ಪಕ್ಷದ ಸದಸ್ಯರು. ನೀವು ಮಾಡುವ ಎಲ್ಲ ವರ್ಗಾವಣೆಗಳು ಹಾಗೂ ನೇಮಕಾತಿಗಳು ಕಾನೂನು ಬಾಹಿರವಾಗಿದೆ’’ಎಂದರೆಂದು 2003ರಲ್ಲಿ ವಿಶ್ವ ಚಾಂಪಿಯನ್‌ಶಿಪ್ ಅಥ್ಲೆಟಿಕ್ಸ್ ವಿಭಾಗದಲ್ಲಿ ಇತಿಹಾಸ ನಿರ್ಮಿಸಿದ ಕ್ರೀಡಾಳು ತಿಳಿಸಿದ್ದಾರೆ.

ಅಂಜು ಅವರನ್ನು ಕೇರಳದ ಹಿಂದಿನ ಯುಡಿಎಫ್ ಸರಕಾರ ಕ್ರೀಡಾ ಮಂಡಳಿಯ ಅಧ್ಯಕ್ಷೆಯನ್ನಾಗಿ ನೇಮಿಸಿತ್ತು.

ಕ್ರೀಡಾ ಮಂಡಳಿಯ ಸಭೆಗೆ ಹಾಜರಾಗಲು ತಾನಿರುವ ಬೆಂಗಳೂರಿನಿಂದ ತಿರುವನಂತಪುರಕ್ಕೆ ಪಡೆದಿದ್ದ ವಿಮಾನದ ಟಿಕೆಟ್‌ಗೂ ಸಚಿವರು ಆಕ್ಷೇಪ ಸೂಚಿಸಿದರೆಂದು ಅಂಜು ದೂರಿದ್ದಾರೆ.

ಇದೆಲ್ಲವೂ ನಿಯಮಕ್ಕೆ ವಿರುದ್ಧವಾದುದು. ಇದೆಲ್ಲವನ್ನೂ ತಾನು ನಿಲ್ಲಿಸಬಲ್ಲೆನೆಂದು ಜಯರಾಜನ್ ಗುಡುಗಿದರೆಂದೂ ಅವರು ಹೇಳಿದ್ದಾರೆ.
ತನಗೆ ವಿಮಾನ ಟಿಕೆಟ್‌ನ ವೆಚ್ಚ ಪಡೆಯುವುದಕ್ಕೆ ಅನುಮತಿ ನೀಡುವಂತೆ ಹಿಂದಿನ ಸರಕಾರಕ್ಕೆ ತಾನು ಮನವಿ ಸಲ್ಲಿಸಿದ್ದೆ. ಆದರೆ, ಕ್ರೀಡಾ ಸಚಿವರು ಇದೆಲ್ಲ ಭ್ರಷ್ಟಾಚಾರವೆಂದು ಆರೋಪಿಸಿದ್ದರೆಂದು ಅಂಜು ತಿಳಿಸಿದ್ದಾರೆ.

ತಾನಲ್ಲದೆ, ಪ್ರೀಜಾ ಶ್ರೀಧರನ್, ಭಾರತೀಯ ಹಾಕಿ ನಾಯಕ ಆರ್.ಪಿ.ಶ್ರೀಜೇಶ್ ಹಾಗೂ ಕೇರಳ ಕ್ರಿಕೆಟ್ ಅಸೋಸಿಯೇಶನ್ ಅಧ್ಯಕ್ಷ ಟಿ.ಎಂ.ಮ್ಯಾಥ್ಯೂ ಕೇರಳ ಕ್ರೀಡಾ ಮಂಡಳಿಯ ಸದಸ್ಯರಾಗಿದ್ದಾರೆ. ತಾವೆಲ್ಲರೂ ಭ್ರಷ್ಟಾಚಾರದಲ್ಲಿ ಒಳಗೊಂಡಿದ್ದೇವೆಂದು ಜಯರಾಜನ್ ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X