Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಇಂದು...

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಇಂದು ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ9 Jun 2016 11:57 PM IST
share
ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಇಂದು ಚುನಾವಣೆ

‘ನೋಟಾ’ಗೆ ಅವಕಾಶ
ಮತಗಟ್ಟೆಯೊಳಗೆ ಮೊಬೈಲ್ ನಿಷೇಧ
ಸಂಜೆ ವೇಳೆಗೆ ಫಲಿತಾಂಶ ಪ್ರಕಟ

ಬೆಂಗಳೂರು, ಜೂ.9: ವಿಧಾನ ಪರಿಷತ್ ಹಾಗೂ ರಾಜ್ಯಸಭೆಗೆ ಕ್ರಮವಾಗಿ ಜೂ.10 ಮತ್ತು ಜೂ.11ರಂದು ನಡೆಯಲಿರುವ ಚುನಾವಣೆಯನ್ನು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿಯೂ ಆಗಿರುವ ಚುನಾವಣಾಧಿಕಾರಿ ಎಸ್.ಮೂರ್ತಿ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದ ಮೊದಲನೆ ಮಹಡಿಯಲ್ಲಿನ ಕೊಠಡಿ ಸಂಖ್ಯೆ-106ರಲ್ಲಿ ಮತದಾನ ವ್ಯವಸ್ಥೆ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಜೂ.10ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಲಿದೆ ಎಂದು ಹೇಳಿದರು.

ರಹಸ್ಯ ಮತದಾನ ನಡೆಯಲಿದ್ದು, ಮತದಾರರು(ಶಾಸಕರು) ಯಾರಿಗೆ ಮತ ಹಾಕುತ್ತೇವೆಂದು ತಮ್ಮ ಪಕ್ಷದ ಏಜೆಂಟರಿಗೆ ಮತಪತ್ರವನ್ನು ತೋರಿಸುವ ಅಗತ್ಯವಿಲ್ಲ ಎಂದ ಅವರು, ವಿಧಾನಸಭೆ ನಾಮ ನಿರ್ದೇಶನ ಸದಸ್ಯರು, ಸ್ಪೀಕರ್ ಸೇರಿದಂತೆ 225 ಶಾಸಕರು ನಾಳಿನ ಮತದಾನದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಮಾಹಿತಿ ನೀಡಿದರು.
ಮೊಬೈಲ್ ನಿಷೇಧ: ಮತ ಚಲಾಯಿಸುವ ವೇಳೆ ಶಾಸಕರು ಮತಗಟ್ಟೆಯೊಳಗೆ ಮೊಬೈಲ್‌ಫೋನ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ ಎಂದ ಅವರು, ಇದೇ ಮೊದಲ ಬಾರಿಗೆ ಮತದಾನ ಪ್ರಕ್ರಿಯೆ ಹಾಗೂ ಮತ ಎಣಿಕೆ ಕಾರ್ಯಗಳನ್ನು ಸಂಪೂರ್ಣ ವೀಡಿಯೊ ಚಿತ್ರೀಕರಣ ಮಾಡಲಾಗುವುದು ಎಂದು ತಿಳಿಸಿದರು.
‘ನೋಟಾ’ಗೆ ಅವಕಾಶ: ಇದೇ ಮೊದಲ ಬಾರಿಗೆ ವಿಧಾನಪರಿಷತ್ ಚುನಾವಣೆಯ ಮತ ಪತ್ರಗಳಲ್ಲಿ ‘ನೋಟಾ’ವನ್ನು ಅಳವಡಿಸಲಾಗಿದೆ. ಯಾವುದೇ ಅಭ್ಯರ್ಥಿಗೆ ಮತ ಚಲಾಯಿಸಲು ಇಚ್ಛೆ ಇಲ್ಲದವರು ಈ ಕಾಲಂ ಅನ್ನು ಗುರುತಿಸ ಬಹುದು ಎಂದು ಅವರು ಮಾಹಿತಿ ನೀಡಿದರು. ಮತಪತ್ರದಲ್ಲಿ ಪ್ರಥಮ ಬಾರಿಗೆ ಅಭ್ಯರ್ಥಿಗಳ ಭಾವಚಿತ್ರಗಳನ್ನು ಪ್ರಕಟಿಸಲಾಗಿದೆ. ಮತದಾರರಿಗೆ (ಶಾಸಕರಿಗೆ) ಮತಪತ್ರ ಹಾಗೂ ನೇರಳೆ ಬಣ್ಣದ ಪೆನ್ನನ್ನು ನೀಡಲಿದ್ದೇವೆ.
ಸೂಕ್ತ ಅಭ್ಯರ್ಥಿಗೆ ಮತ ಚಲಾಯಿಸಬಹುದು ಎಂದು ಎಸ್.ಮೂರ್ತಿ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಮತ ಎಣಿಕೆ: ವಿಧಾನ ಪರಿಷತ್ ಚುನಾವಣೆ ಮತದಾನದ ಬಳಿಕ ಅಂದೇ ಸಂಜೆ 5ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅನಂತರ ಫಲಿತಾಂಶ ಪ್ರಕಟಿಸಲಾಗುವುದು ಎಂದ ಅವರು, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಾಗಿ ಸಕಲ ಸಿದ್ಧತೆ ಂದು ತಿಳಿಸಿದರು.

ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ವೀಣಾ ಅಚ್ಚಯ್ಯ, ರಿಝ್ವೆನ್ ಅರ್ಶದ್, ಅಲ್ಲಂ ವೀರಭದ್ರಪ್ಪ, ಆರ್.ಬಿ.ತಿಮ್ಮಾಪುರ್, ಬಿಜೆಪಿಯ ವಿ.ಸೋಮಣ್ಣ, ಲೇಹರ್ ಸಿಂಗ್, ಜೆಡಿಎಸ್‌ನ ನಾರಾಯಣಸ್ವಾಮಿ ಹಾಗೂ ಡಾ.ವೆಂಕಟಪತಿ ಸೇರಿ ಒಟ್ಟು ಎಂಟು ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜೂ.10ರಂದು ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು(ಶಾಸಕರು) ತೀರ್ಮಾನಿಸಲಿದ್ದು, ಸಂಜೆ 5:30ರ ಸುಮಾರಿಗೆ ಫಲಿತಾಂಶ ನಿಚ್ಚಳವಾಗಲಿದೆ. ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳ ಮಧ್ಯೆ ಹಣಾಹಣಿ ಏರ್ಪಟ್ಟಿದೆ. ಆದರೆ, ವಿಧಾನ ಪರಿಷತ್‌ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆಯೇ ಪೈಪೋಟಿ ಏರ್ಪಟ್ಟಿರುವುದು ಕುತೂಹಲ ಸೃಷ್ಟಿಸಿದೆ.

ಮತದಾರರು: ಕಾಂಗ್ರೆಸ್-123, ಬಿಜೆಪಿ-44, ಜೆಡಿಎಸ್-40, ಬಿಎಸ್ಸಾರ್ ಕಾಂಗ್ರೆಸ್-3, ಕೆಜೆಪಿ-2, ಸರ್ವೋದಯ ಕರ್ನಾಟಕ ಪಕ್ಷ-1, ಕರ್ನಾಟಕ ಮಕ್ಕಳ ಪಕ್ಷ-1, ಪಕ್ಷೇತರರು-9, ಸ್ಪೀಕರ್-1 ಹಾಗೂ ನಾಮನಿರ್ದೇಶಿಕ ಸದಸ್ಯರು-1 ಸೇರಿದಂತೆ ಒಟ್ಟು 225ಮಂದಿ ಮತದಾರರಿದ್ದಾರೆ.

ರಾಜ್ಯಸಭೆಗೂ ಸಿದ್ಧತೆ: ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂ.11ರಂದು ನಡೆಯಲಿರುವ ಚುನಾವಣೆಗೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೇಲ್ಮನೆ ಮಾದರಿಯಲ್ಲೇ ಬೆಳಗ್ಗೆ 9ರಿಂದ ಸಂಜೆ 4ಗಂಟೆಯ ವರೆಗೂ ಮತದಾನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿಯೂ ಆಗಿರುವ ಚುನಾವಣಾಧಿಕಾರಿ ಎಸ್.ಮೂರ್ತಿ ತಿಳಿಸಿದರು.

ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅದೇ ದಿನ ಸಂಜೆ 5ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಜನರಿಂದ ಆಯ್ಕೆಯಾದ 224 ಮಂದಿ ಸದಸ್ಯರು ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.


ಪರಿಷತ್ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು, ರಾಜ್ಯಸಭೆ ಚುನಾವಣೆಯಲ್ಲಿಯೂ ಮೂವರು ಅಭ್ಯರ್ಥಿಗಳು ನಮ್ಮ ಪಕ್ಷದ ಸದಸ್ಯರು ಹಾಗೂ ಪಕ್ಷೇತರ ಶಾಸಕರ ಬೆಂಬಲದಿಂದ ಅನಾಯಾಸವಾಗಿ ಜಯ ಸಾಧಿಸಲಿದ್ದಾರೆ.
- ಸಿದ್ದರಾಮಯ್ಯ, ಮುಖ್ಯಮಂ
ತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X